ಸಂಗ್ರಹ ಚಿತ್ರ 
ವಿದೇಶ

ಹಜ್ ಪ್ರವಾಸ ಕೈಗೊಂಡಿದ್ದ 98 ಭಾರತೀಯ ಮುಸ್ಲಿಮರು ಸಾವು!

ಸೌದಿ ಅರೇಬಿಯಾದ ಮೆಕ್ಕಾ ನಗರದಲ್ಲಿ ಬಿಸಿಲಿನ ತಾಪಕ್ಕೆ ಭಾರತೀಯ ನಾಗರಿಕರು ಸೇರಿದಂತೆ ಸಾವಿರಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ.

ಸೌದಿ ಅರೇಬಿಯಾದ ಮೆಕ್ಕಾ ನಗರದಲ್ಲಿ ಬಿಸಿಲಿನ ತಾಪಕ್ಕೆ ಭಾರತೀಯ ನಾಗರಿಕರು ಸೇರಿದಂತೆ ಸಾವಿರಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ವಿವಿಧ ದೇಶಗಳಿಂದ ಹಜ್‌ಗೆ ತೆರಳಿದ್ದರು. ಈ ವರ್ಷ ಹಜ್ ಯಾತ್ರೆಯ ಸಂದರ್ಭದಲ್ಲಿ ನೈಸರ್ಗಿಕ ಕಾರಣಗಳು, ವೃದ್ಧಾಪ್ಯ ಮತ್ತು ಅನಾರೋಗ್ಯದ ಕಾರಣದಿಂದ ಕನಿಷ್ಠ 98 ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಈ ವರ್ಷ ಸುಮಾರು 1,75,000 ಭಾರತೀಯರು ಹಜ್ ಯಾತ್ರೆ ಕೈಗೊಂಡಿದ್ದರು. ಮೃತರಲ್ಲಿ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕೂಡ ಸೇರಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಈ ವರ್ಷ, ನಮ್ಮ 175,000 ಭಾರತೀಯರು ಹಜ್ ಯಾತ್ರೆಗೆ ತೆರಳಿದ್ದರು. ಇಲ್ಲಿಯವರೆಗೆ ನಾವು ನಮ್ಮ 98 ನಾಗರಿಕರನ್ನು ಕಳೆದುಕೊಂಡಿದ್ದೇವೆ ಎಂದು ಹೇಳಿದರು.

AFP ಪ್ರಕಾರ, ಸುಮಾರು 10 ದೇಶಗಳಲ್ಲಿ ಹಜ್ ಸಮಯದಲ್ಲಿ 1,081 ಸಾವುಗಳು ಸಂಭವಿಸಿವೆ. ಹಜ್ ಇಸ್ಲಾಂ ಧರ್ಮದ ಐದು ಸ್ತಂಭಗಳಲ್ಲಿ ಒಂದಾಗಿದೆ. ಇದನ್ನು ಎಲ್ಲಾ ಮುಸ್ಲಿಮರು ಒಮ್ಮೆಯಾದರೂ ನೋಡಬೇಕು ಎಂಬ ನಂಬಿಕೆ ಇದೆ. ಹಜ್ ಯಾತ್ರೆಯ ಸಮಯವನ್ನು ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ನಿರ್ಧರಿಸಲಾಗುತ್ತದೆ.

ಅದೇ ಸಮಯದಲ್ಲಿ, ಬಿಬಿಸಿ ವರದಿಯ ಪ್ರಕಾರ, ಹಜ್ ಮಾಡಲು ಅನೇಕ ದೇಶಗಳ ನಾಗರಿಕರು ಸೌದಿ ಅರೇಬಿಯಾವನ್ನು ತಲುಪಿದ್ದಾರೆ. ಆದರೆ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ನಾಗರಿಕರು ಅತ್ಯಂತ ಕೆಟ್ಟ ಸ್ಥಿತಿಯನ್ನು ಎದುರಿಸಿದ್ದಾರೆ. ನಾಗರಿಕರೊಬ್ಬರು ನಮ್ಮನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಯಿತು. ಒಂದು ಟೆಂಟ್‌ನಲ್ಲಿ 800ಕ್ಕೂ ಹೆಚ್ಚು ಜನರನ್ನು ಇರಿಸಲಾಗಿತ್ತು. ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ನಾಗರಿಕರಿಗೆ ನೀಡಿದ ಸ್ಥಳವು ಪರ್ವತಗಳ ಕೆಳಗಿದೆ. ಈ ಪ್ರದೇಶದಲ್ಲಿ ಊಸಿರಾಡುವುದಕ್ಕೂ ಕಷ್ಟವಾಗುತ್ತಿತ್ತು. ಇನ್ನು ಯಾತ್ರಿಕರಿಗೆ ಬೆರಳಣಿಕೆಯಷ್ಟು ಶೌಚಾಲಯಗಳನ್ನು ಕೊಟ್ಟಿದ್ದರು. ಕೆಲವರು ವಾಶ್ ರೂಂನ ಹೊರಗೆ ಮಲಗಬೇಕಾದ ಸಂದರ್ಭಗಳು ಇದ್ದವು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT