ಘಟನೆಯ ದೃಶ್ಯ 
ವಿದೇಶ

ದುರಾದೃಷ್ಟವಂತ: 33 ಕೋಟಿ ರೂ. ಲಾಟರಿ ಹೊಡೆದ ಖುಷಿಯಲ್ಲಿ ಹೃದಯಾಘಾತವಾಗಿ ವ್ಯಕ್ತಿ ಮೃತ, ವಿಡಿಯೋ ವೈರಲ್!

ಜೀವನವನ್ನು ಬದಲಾಯಿಸುವ ಖುಷಿಯ ಸಮಯ ಹೆಚ್ಚು ಕಾಲ ಉಳಿಯಲಿಲ್ಲ. ಈ ಖುಷಿಯನ್ನು ಸಂಭ್ರಮಿಸುವ ವೇಳೆಯೇ ಹೃದಯಾಘಾತವಾಗಿ ವ್ಯಕ್ತಿ ಕುಸಿದು ಬಿದ್ದಿದ್ದಾರೆ.

ಅದೃಷ್ಟ ಎಂಬುವುದು ಕೆಲವೊಮ್ಮೆ ಕೈಯಿಡಿದರೆ, ಅನುಭವಿಸುವ ಯೋಗ ಹಣೆಯಲ್ಲಿ ಇಲ್ಲದಿದ್ದಾಗ ಈ ರೀತಿ ಆಗುತ್ತದೆ. ಹೌದು, ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊದಲ್ಲಿ 4 ಮಿಲಿಯನ್ (ಭಾರತೀಯ ರೂಪಾಯಿಯಲ್ಲಿ 33 ಕೋಟಿ) ಜಾಕ್‌ಪಾಟ್ ಗೆದ್ದ ವ್ಯಕ್ತಿಯೊಬ್ಬ ಗೆದ್ದ ಖುಷಿಯಲ್ಲಿ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಜೀವನವನ್ನು ಬದಲಾಯಿಸುವ ಖುಷಿಯ ಸಮಯ ಹೆಚ್ಚು ಕಾಲ ಉಳಿಯಲಿಲ್ಲ. ಈ ಖುಷಿಯನ್ನು ಸಂಭ್ರಮಿಸುವ ವೇಳೆಯೇ ಹೃದಯಾಘಾತವಾಗಿ ವ್ಯಕ್ತಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಕ್ಯಾಸಿನೊ ಸಿಬ್ಬಂದಿ ಆತನಿಗೆ ಪ್ರಥಮ ಚಿಕಿತ್ಸೆ ನೀಡಿ ಪುನರುಜ್ಜೀವನಗೊಳಿಸಲು ಪ್ರಯತ್ನಿಸಿದರು. ಆದರೆ ಅವರ ಪ್ರಯತ್ನಗಳು ವ್ಯರ್ಥವಾಯಿತು.

ಲಾಸ್ ವೇಗಾಸ್ ಸ್ಯಾಂಡ್ಸ್ ನಿರ್ವಹಿಸುತ್ತಿರುವ ಐಕಾನಿಕ್ ಕ್ಯಾಸಿನೊದಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕ್ಯಾಸಿನೊ ಉದ್ಯಮಕ್ಕೆ ಸಂಬಂಧಿಸಿದ ಸಂಭಾವ್ಯ ಅಪಾಯಗಳ ಸುತ್ತ ವ್ಯಾಪಕವಾದ ಕಾಳಜಿ ಮತ್ತು ಚರ್ಚೆಯನ್ನು ಹುಟ್ಟುಹಾಕಿದೆ. ಈ ಘಟನೆಯು ಜೂಜಿನ ಸಂಭವನೀಯ ಅಪಾಯಗಳನ್ನು ಎತ್ತಿ ತೋರಿಸಿದೆ.

ಕ್ಯಾಸಿನೊಗಳಲ್ಲಿನ ದೊಡ್ಡ ನಗದು ವಹಿವಾಟುಗಳಿಗೆ ಸಂಬಂಧಿಸಿದ ಅಪಾಯಗಳನ್ನು ಅಧಿಕಾರಿಗಳು ಒಪ್ಪಿಕೊಂಡರೂ, ಗೃಹ ವ್ಯವಹಾರಗಳ ಸಚಿವಾಲಯ, ಕಾನೂನು ಸಚಿವಾಲಯ ಮತ್ತು ಸಿಂಗಾಪುರದ ಹಣಕಾಸು ಪ್ರಾಧಿಕಾರದ ಇತ್ತೀಚಿನ ವರದಿಯು ಅಪರಾಧ ಚಟುವಟಿಕೆಗಳಲ್ಲಿ ನೇರ ಪಾಲ್ಗೊಳ್ಳುವಿಕೆ ಅಪರೂಪ ಎಂದು ಪ್ರತಿಪಾದಿಸಿದೆ. ಆದಾಗ್ಯೂ, ಹಣ ವರ್ಗಾವಣೆ ಮತ್ತು ಜೂಜಿನ ವ್ಯಸನವನ್ನು ಎದುರಿಸಲು ಕಠಿಣವಾದ ಮೇಲ್ವಿಚಾರಣೆ ಮತ್ತು ಪರಿಣಾಮಕಾರಿ ಕ್ರಮಗಳು ಆಗುತ್ತಿಲ್ಲ ಎಂದು ತಜ್ಞರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT