ಎಸ್ ಜೈಶಂಕರ್-ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ TNIE
ವಿದೇಶ

ಕತಾರ್ ಪ್ರಧಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್, ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಬಗ್ಗೆ ಚರ್ಚೆ

ಒಂದು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ದೋಹಾ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರನ್ನು ದೋಹಾದಲ್ಲಿ ಭೇಟಿ ಮಾಡಿದರು. ಭೇಟಿ ವೇಳೆ ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಒಂದು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜೈಶಂಕರ್ ಅವರು 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿದ್ದು ಕತಾರ್‌ನ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಥಾನಿ ಅವರನ್ನು ಇಂದು ಮಧ್ಯಾಹ್ನ ದೋಹಾದಲ್ಲಿ ಭೇಟಿಯಾಗಲು ಸಂತೋಷವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಕೆಗಳನ್ನು ಅಮೀರ್ ಅವರಿಗೆ ತಿಳಿಸಿದರು.

"ನಾವು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳ ಮೇಲೆ ಕೇಂದ್ರೀಕರಿಸುವ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದ್ದೇವೆ" ಎಂದು ಅವರು ಹೇಳಿದರು. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಗಾಜಾ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದರು.

ವಿದೇಶಾಂಗ ಸಚಿವರು, "ಭಾರತ-ಕತಾರ್ ಸಂಬಂಧಗಳನ್ನು ಮತ್ತಷ್ಟು ಸುಧಾರಿಸಲು ನಾವು ಎದುರು ನೋಡುತ್ತಿದ್ದೇವೆ ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಮಾತುಕತೆಯನ್ನು ಮುಂದುವರಿಸುತ್ತೇವೆ" ಎಂದು ಹೇಳಿದರು.

ಆಗಸ್ಟ್ 2022ರಲ್ಲಿ ಬಂಧನದ ನಂತರ ಮರಣದಂಡನೆಗೆ ಗುರಿಯಾದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಕತಾರ್ ಬಿಡುಗಡೆ ಮಾಡಿದ ನಾಲ್ಕೂವರೆ ತಿಂಗಳ ನಂತರ ಜೈಶಂಕರ್ ಅವರು ಕತಾರ್ ಗೆ ಭೇಟಿ ನೀಡಿದರು.

ಶಿಷ್ಟಾಚಾರದ ಮುಖ್ಯಸ್ಥ ಇಬ್ರಾಹಿಂ ಫಕ್ರು ಅವರು ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಇದಕ್ಕೂ ಮುನ್ನ ಫೆಬ್ರವರಿ 14 ರಿಂದ 15 ರವರೆಗೆ ಕತಾರ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಚರ್ಚಿಸಿದ್ದರು.

"ಭಾರತ ಮತ್ತು ಕತಾರ್ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧವನ್ನು ಹೊಂದಿವೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT