ಎಸ್ ಜೈಶಂಕರ್-ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ TNIE
ವಿದೇಶ

ಕತಾರ್ ಪ್ರಧಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್, ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಬಗ್ಗೆ ಚರ್ಚೆ

ಒಂದು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ದೋಹಾ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರನ್ನು ದೋಹಾದಲ್ಲಿ ಭೇಟಿ ಮಾಡಿದರು. ಭೇಟಿ ವೇಳೆ ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಒಂದು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಜೈಶಂಕರ್ ಅವರು ಶೇಖ್ ಮೊಹಮ್ಮದ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜೈಶಂಕರ್ ಅವರು 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿದ್ದು ಕತಾರ್‌ನ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಥಾನಿ ಅವರನ್ನು ಇಂದು ಮಧ್ಯಾಹ್ನ ದೋಹಾದಲ್ಲಿ ಭೇಟಿಯಾಗಲು ಸಂತೋಷವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಕೆಗಳನ್ನು ಅಮೀರ್ ಅವರಿಗೆ ತಿಳಿಸಿದರು.

"ನಾವು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳ ಮೇಲೆ ಕೇಂದ್ರೀಕರಿಸುವ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದ್ದೇವೆ" ಎಂದು ಅವರು ಹೇಳಿದರು. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಗಾಜಾ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದರು.

ವಿದೇಶಾಂಗ ಸಚಿವರು, "ಭಾರತ-ಕತಾರ್ ಸಂಬಂಧಗಳನ್ನು ಮತ್ತಷ್ಟು ಸುಧಾರಿಸಲು ನಾವು ಎದುರು ನೋಡುತ್ತಿದ್ದೇವೆ ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಮಾತುಕತೆಯನ್ನು ಮುಂದುವರಿಸುತ್ತೇವೆ" ಎಂದು ಹೇಳಿದರು.

ಆಗಸ್ಟ್ 2022ರಲ್ಲಿ ಬಂಧನದ ನಂತರ ಮರಣದಂಡನೆಗೆ ಗುರಿಯಾದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಕತಾರ್ ಬಿಡುಗಡೆ ಮಾಡಿದ ನಾಲ್ಕೂವರೆ ತಿಂಗಳ ನಂತರ ಜೈಶಂಕರ್ ಅವರು ಕತಾರ್ ಗೆ ಭೇಟಿ ನೀಡಿದರು.

ಶಿಷ್ಟಾಚಾರದ ಮುಖ್ಯಸ್ಥ ಇಬ್ರಾಹಿಂ ಫಕ್ರು ಅವರು ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಇದಕ್ಕೂ ಮುನ್ನ ಫೆಬ್ರವರಿ 14 ರಿಂದ 15 ರವರೆಗೆ ಕತಾರ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಚರ್ಚಿಸಿದ್ದರು.

"ಭಾರತ ಮತ್ತು ಕತಾರ್ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧವನ್ನು ಹೊಂದಿವೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT