ಪೆಪ್ಸಿಕೊ ಮಾಜಿ ಸಿಇಒ ಇಂದ್ರಾ ನೂಯಿ  
ವಿದೇಶ

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸರಣಿ ಸಾವು: PepsiCo ಮಾಜಿ ಸಿಇಒ ಇಂದ್ರಾ ನೂಯಿ ಸಲಹೆ ಹೀಗಿದೆ...

ಇಂದ್ರಾನೂಯಿ ಅವರ ವಿಡಿಯೊವನ್ನು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಪೋಸ್ಟ್ ಮಾಡಿದ್ದಾರೆ.

ನ್ಯೂಯಾರ್ಕ್: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ದುರಂತ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಈ ಬಗ್ಗೆ ಮಾತನಾಡಿರುವ ಪೆಪ್ಸಿಕೋ ಮಾಜಿ ಸಿಇಒ ಇಂದ್ರಾ ನೂಯಿ, ಭಾರತದಿಂದ ಅಮೆರಿಕಕ್ಕೆ ಹೋಗುವ ವಿದ್ಯಾರ್ಥಿಗಳು ಜಾಗರೂಕರಾಗಿರಬೇಕು. ಸ್ಥಳೀಯ ಕಾನೂನುಗಳನ್ನು ಗೌರವಿಸಬೇಕು ಮತ್ತು ತಮ್ಮ ಸುರಕ್ಷತೆಯನ್ನು ನೋಡಿಕೊಳ್ಳಲು ಡ್ರಗ್ಸ್ ಅಥವಾ ಅತಿಯಾದ ಮದ್ಯಪಾನದಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ.

ಜಾಗತಿಕವಾಗಿ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ವ್ಯಾಪಾರ ಕಾರ್ಯನಿರ್ವಾಹಕರಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿರುವ ಇಂದ್ರಾ ನೂಯಿ ಅವರು 10 ನಿಮಿಷಗಳ ಸುದೀರ್ಘ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. US ಗೆ ಬರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮತ್ತು ಜಾಗರೂಕರಾಗಿರಲು ಮತ್ತು ತೊಂದರೆಗೆ ಸಿಲುಕುವ ಚಟುವಟಿಕೆಗಳನ್ನು ತಪ್ಪಿಸಲು ಅವರು ಸಲಹೆ ನೀಡಿದ್ದಾರೆ.

ಇಂದ್ರಾ ನೂಯಿ ಅವರ ವಿಡಿಯೊವನ್ನು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಪೋಸ್ಟ್ ಮಾಡಿದ್ದಾರೆ.

"ನಾನು ಈ ವೀಡಿಯೊವನ್ನು ರೆಕಾರ್ಡ್ ಮಾಡಲು ಕಾರಣವೇನೆಂದರೆ, ಯುನೈಟೆಡ್ ಸ್ಟೇಟ್ಸ್‌ಗೆ ಬರಲು ಬಯಸುವ ಅಥವಾ ಇಲ್ಲಿ ಈಗಾಗಲೇ ನಿಮ್ಮ ಅಧ್ಯಯನವನ್ನು ಮುಂದುವರಿಸುತ್ತಿರುವ ಎಲ್ಲಾ ಯುವಜನರಿಗೆ ಕೆಲವೊಂದು ಸಲಹೆಗಳನ್ನು ನೀಡುತ್ತೇನೆ. ಇಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡುತ್ತಿದ್ದೇನೆ. ಭಾರತೀಯ ಮೂಲದ ವಿದ್ಯಾರ್ಥಿಗಳು ತಮ್ಮ ಜೀವಸುರಕ್ಷತೆ ಬಗ್ಗೆ ನೋಡಿಕೊಳ್ಳಬೇಕು ಎಂದು 68 ವರ್ಷದ ಇಂದ್ರಾ ನೂಯಿ ಹೇಳಿದ್ದಾರೆ.

"ಕಾನೂನಿನ ಚೌಕಟ್ಟಿನೊಳಗೆ ಸುರಕ್ಷಿತವಾಗಿ ಉಳಿಯಲು ನೀವು ಏನು ಮಾಡುತ್ತೀರಿ ಎಂಬುದನ್ನು ಖಚಿತಪಡಿಸಿಕೊಳ್ಳುವುದು ನಿಮಗೆ ಬಿಟ್ಟದ್ದು, ರಾತ್ರಿಯಲ್ಲಿ ಕತ್ತಲೆಯಾದ ಸ್ಥಳಗಳಿಗೆ ಏಕಾಂಗಿಯಾಗಿ ಹೋಗಬೇಡಿ, ದಯವಿಟ್ಟು ಡ್ರಗ್ಸ್ ಅಥವಾ ಅತಿಯಾದ ಮದ್ಯಪಾನ ಮಾಡಬೇಡಿ. ಇವೆಲ್ಲವೂ ದುರಂತಕ್ಕೆ ದಾರಿ ಮಾಡುವ ವಿಷಯಗಳಾಗಿವೆ.

ನಿಮ್ಮ ವಿಶ್ವವಿದ್ಯಾಲಯ ಮತ್ತು ಕೋರ್ಸ್‌ಗಳನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳಿ ಎಂದು ನೂಯಿ ಯುಎಸ್‌ಗೆ ಬರುವ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ತಮ್ಮ ಕುಟುಂಬಗಳು, ಸಮುದಾಯಗಳು ಮತ್ತು ಪರಿಸರ ವ್ಯವಸ್ಥೆಗಳ ಸೌಕರ್ಯಗಳಿಂದ ದೂರವಿರುವುದರಿಂದ ಹೆಚ್ಚಿನ ಶಿಕ್ಷಣವನ್ನು ಪಡೆಯಲು US ಗೆ ಬರುವುದು ಸಾಂಸ್ಕೃತಿಕ ಬದಲಾವಣೆಯಾಗಿದೆ ಎಂದು ಅವರು ಹೇಳುತ್ತಾರೆ.

ನೀವು ಯುಎಸ್ ಎಗೆ ಬಂದಾಗ ಆರಂಭಿಕ ತಿಂಗಳುಗಳಲ್ಲಿ ಬಹಳ ಜಾಗರೂಕರಾಗಿರಿ, ನೀವು ಯಾರನ್ನು ಸ್ನೇಹಿತರಾಗಿ ಆಯ್ಕೆ ಮಾಡುತ್ತೀರಿ, ನಿಮ್ಮ ಅಭ್ಯಾಸಗಳು ಮತ್ತು ನೀವು ಸಾಂಸ್ಕೃತಿಕ ಬದಲಾವಣೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ. ನಿಮ್ಮ ಸ್ವಾತಂತ್ರ್ಯಗಳ ಮಧ್ಯೆ ಜಾಗರೂಕರಾಗಿರಬೇಕು.

ಭಾರತೀಯ ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮ ಮತ್ತು ಯಶಸ್ಸಿಗೆ ಹೆಸರುವಾಸಿಯಾಗಿದ್ದರೂ, ಕೆಲವರು ಫೆಂಟಾನಿಲ್‌ನಂತಹ ಮಾದಕ ದ್ರವ್ಯಗಳನ್ನು ಪ್ರಯೋಗಿಸಿ ಅಂತಿಮವಾಗಿ ವ್ಯಸನಿಗಳಾಗುತ್ತಿರುವುದು ದುರಂತ ಎಂದರು. ಇದು ಮಾರಣಾಂತಿಕವಾಗಿದೆ. ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅತ್ಯಂತ ಹಾನಿಕಾರಕ ವಸ್ತುಗಳಾಗಿದ್ದು ಇದು ನಿಮ್ಮ ಭವಿಷ್ಯಕ್ಕೆ ತುಂಬಾ ಮಾರಕ ಎನ್ನುತ್ತಾರೆ.

ನಿಮ್ಮ ವೀಸಾ ಸ್ಥಿತಿ ಮತ್ತು ಅರೆಕಾಲಿಕ ಉದ್ಯೋಗಕ್ಕೆ ಅದರ ಅನುಮತಿಯನ್ನು ನೀವು ತಿಳಿದುಕೊಳ್ಳಬೇಕು. ಕಾನೂನನ್ನು ಉಲ್ಲಂಘಿಸಬೇಡಿ, ದಯವಿಟ್ಟು ತಡರಾತ್ರಿಯವರೆಗೆ ಒಂಟಿಯಾಗಿ ಹೊರಹೋಗಬೇಡಿ ಅಥವಾ ತಡರಾತ್ರಿಯಲ್ಲಿ ಹೊರಹೋಗಬೇಡಿ, ನಿಮ್ಮ ಸುತ್ತಮುತ್ತಲ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಿ ಎಂದರು.

ಯುಎಸ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರಕರಣಗಳ ನಡುವೆ ನೂಯಿ ಅವರ ಸಂದೇಶ ಬಂದಿದೆ.

ಈ ವರ್ಷದ ಆರಂಭದಿಂದ, ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವಿನ ಹಲವಾರು ಪ್ರಕರಣಗಳು ಸಮುದಾಯದಲ್ಲಿ ಆತಂಕ ಮತ್ತು ಕಳವಳವನ್ನು ಉಂಟುಮಾಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT