ಸಂಗ್ರಹ ಚಿತ್ರ Associated Press
ವಿದೇಶ

ಮಾಸ್ಕೋದಲ್ಲಿ ಉಗ್ರರಿಂದ ರಕ್ತದೋಕುಳಿ: ಮೃತರ ಸಂಖ್ಯೆ 115ಕ್ಕೆ ಏರಿಕೆ, ಹನ್ನೊಂದು ISIS ಉಗ್ರರ ಬಂಧನ!

ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ಕನ್ಸರ್ಟ್ ಮೇಲಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 115ಕ್ಕೇರಿಕೆಯಾಗಿದೆ. ಇನ್ನು ದಾಳಿಯಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ವರು ಸೇರಿದಂತೆ ಹನ್ನೊಂದು ಉಗ್ರರನ್ನು ಬಂಧಿಸಲಾಗಿದೆ.

ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ಕನ್ಸರ್ಟ್ ಮೇಲಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 115ಕ್ಕೇರಿಕೆಯಾಗಿದೆ. ಇನ್ನು ದಾಳಿಯಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ವರು ಸೇರಿದಂತೆ ಹನ್ನೊಂದು ಉಗ್ರರನ್ನು ಬಂಧಿಸಲಾಗಿದೆ.

ಶಾಸಕ ಅಲೆಕ್ಸಾಂಡರ್ ಖಿನ್ಸ್ಟೀನ್ ಶನಿವಾರ ಟೆಲಿಗ್ರಾಮ್ನಲ್ಲಿ ಈ ವಿವರವನ್ನು ಪೋಸ್ಟ್ ಮಾಡಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಭಯೋತ್ಪಾದಕರ ದಾಳಿಯಲ್ಲಿ ಸತ್ತವರ ಸಂಖ್ಯೆ 115ಕ್ಕೆಯಾಗಿದ್ದು 145 ಜನರು ಗಾಯಗೊಂಡಿದ್ದಾರೆ.

ರಷ್ಯಾದ ಬ್ರಿಯಾನ್ಸ್ಕ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಬಳಿಕ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಖಿನ್‌ಸ್ತೀನ್ ಹೇಳಿದ್ದಾರೆ. ಉಳಿದ ಉಗ್ರರು ಕಾಲ್ನಡಿಗೆಯಲ್ಲಿ ಸಮೀಪದ ಅರಣ್ಯಕ್ಕೆ ಪರಾರಿಯಾಗಿದ್ದಾರೆ.

ಭಯಾನಕ ದಾಳಿಯ ವಿಡಿಯೋ

ಉಗ್ರರ ದಾಳಿಯಿಂದಾಗಿ ಕ್ರೋಕಸ್ ಸಿಟಿ ಹಾಲ್ ನಲ್ಲಿ ಬೆಂಕಿಗಾಹುತಿಯಾಗಿದೆ. ದಟ್ಟವಾದ ಕಪ್ಪು ಹೊಗೆ ಗಾಳಿಯನ್ನು ತುಂಬಿದೆ. ಬೃಹತ್ ಸಭಾಂಗಣದಲ್ಲಿ ಗುಂಡೇಟಿನ ಶಬ್ದದ ನಡುವೆ ಭಯಭೀತರಾದ ಸ್ಥಳೀಯರು ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದು ಗ್ರೆನೇಡ್ ಅಥವಾ ಬೆಂಕಿಯಿಡುವ ಬಾಂಬ್ ಅನ್ನು ಎಸೆದಿದ್ದಾರೆ.

ISIS-K ಭಯೋತ್ಪಾದಕ ಗುಂಪು ಯಾರು?

ISIS-K ಭಯೋತ್ಪಾದಕ ಗುಂಪನ್ನು 2015ರಲ್ಲಿ ಪಾಕಿಸ್ತಾನಿ ತಾಲಿಬಾನ್‌ನ ಅತೃಪ್ತ ಸದಸ್ಯರು ಸ್ಥಾಪಿಸಿದರು. ಈ ಗುಂಪಿನಲ್ಲಿ 2 ಸಾವಿರ ಸೈನಿಕರು ಇದ್ದಾರೆ. ನ್ಯೂಯಾರ್ಕ್ ಮೂಲದ ಭದ್ರತಾ ಸಲಹಾ ಸಂಸ್ಥೆ ಸೌಫಾನ್ ಗ್ರೂಪ್‌ನ ಭಯೋತ್ಪಾದನಾ ನಿಗ್ರಹ ವಿಶ್ಲೇಷಕ ಕಾಲಿನ್ ಪಿ ಕ್ಲಾರ್ಕ್, ಕಳೆದ ಎರಡು ವರ್ಷಗಳಿಂದ ಐಸಿಸ್-ಕೆ ರಷ್ಯಾವನ್ನು ಗುರಿಯಾಗಿಸಲು ಯೋಜಿಸುತ್ತಿದೆ ಎಂದು ಹೇಳಿದರು. ಸಂಘಟನೆ ತನ್ನ ಪ್ರಚಾರದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ವಿ ಪುಟಿನ್ ಅವರನ್ನು ಆಗಾಗ್ಗೆ ಟೀಕಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT