ಬಾಲ್ಟಿಮೋರ್‌ನ ಅತಿ ಉದ್ದದ ಸೇತುವೆಗೆ ಹಡಗು ಡಿಕ್ಕಿ 
ವಿದೇಶ

ಅಮೆರಿಕ: ಬಾಲ್ಟಿಮೋರ್‌ನ ಅತಿ ಉದ್ದದ ಸೇತುವೆಗೆ ಹಡಗು ಡಿಕ್ಕಿ, ಕುಸಿದು ಬಿದ್ದ ಬೃಹತ್ ಬ್ರಿಡ್ಜ್

ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಸೇತುವೆಗೆ ಕಂಟೈನರ್ ಹಡಗೊಂದು ಮಂಗಳವಾರ ಬೆಳಗ್ಗೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಬ್ರಿಡ್ಜ್ ಕುಸಿದು ಬಿದ್ದಿದೆ.

ಬಾಲ್ಟಿಮೋರ್‌: ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಸೇತುವೆಗೆ ಕಂಟೈನರ್ ಹಡಗೊಂದು ಮಂಗಳವಾರ ಬೆಳಗ್ಗೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಬ್ರಿಡ್ಜ್ ಕುಸಿದು ಬಿದ್ದಿದೆ ಮತ್ತು ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿವೆ. ಸುಮಾರು 20 ಮಂದಿ ನೀರಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

"ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸುಮಾರು 20 ಮಂದಿ ಪಟಾಪ್ಸ್ಕೋ ನದಿಯಲ್ಲಿ ಮುಳುಗಿರುವ ಸಾಧ್ಯತೆ ಇದೆ ಮತ್ತು ಅನೇಕ ವಾಹನಗಳು ನೀರಿಗೆ ಬಿದ್ದಿವೆ" ಎಂದು ಬಾಲ್ಟಿಮೋರ್ ಅಗ್ನಿಶಾಮಕ ಇಲಾಖೆಯ ಕೆವಿನ್ ಕಾರ್ಟ್‌ರೈಟ್ ಅವರು ಸಿಎನ್‌ಎನ್‌ಗೆ ತಿಳಿಸಿದ್ದಾರೆ.

"ಇದು ಭೀಕರ ತುರ್ತುಸ್ಥಿತಿ". "ಈಗ ಜನರನ್ನು ರಕ್ಷಿಸುವ ಬಗ್ಗೆ ನಾವು ಗಮನ ಕೊಡಬೇಕು" ಎಂದು ಬಾಲ್ಟಿಮೋರ್ ಅಗ್ನಿಶಾಮಕ ಇಲಾಖೆಯ ಸಂವಹನ ನಿರ್ದೇಶಕ ಕೆವಿನ್ ಕಾರ್ಟ್‌ರೈಟ್ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

‘ಡಾಲಿ’ ಹೆಸರಿನ ಈ ಹಡಗು ಬಾಲ್ಟಿಮೋರ್‌ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಹೋಗುತ್ತಿತ್ತು. ರಾತ್ರಿ 1:30ರ ಸುಮಾರಿಗೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ನಂತರ ಹಡಗು ನೀರಿನಲ್ಲಿ ಮುಳುಗಿತು ಮತ್ತು ಸೇತುವೆಯೂ ಕುಸಿದು ಬಿದ್ದಿತು ಎಂದು ವರದಿಗಳು ತಿಳಿಸಿವೆ.

ಸೇತುವೆ ಕುಸಿದಾಗ ಸುಮಾರು ಏಳು ಮಂದಿ ಕಟ್ಟಡ ಕಾರ್ಮಿಕರು ಮತ್ತು ಮೂರ್ನಾಲ್ಕು ನಾಗರಿಕ ವಾಹನಗಳು ಸೇತುವೆ ಮೇಲೆ ಇದ್ದವು ಎಂದು ಹೇಳಲಾಗಿದೆ. ಘಟನೆಯ ನಂತರ ಸೇತುವೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಅಧಿಕಾರಿಗಳು ಎರಡೂ ದಿಕ್ಕುಗಳಲ್ಲಿ ಎಲ್ಲಾ ಲೇನ್‌ಗಳನ್ನು ಮುಚ್ಚಿದ್ದಾರೆ.

ಈ ಸೇತುವೆಯನ್ನು ಬಾಲ್ಟಿಮೋರ್ ಬಂದರಿನಲ್ಲಿ ಪಟಾಪ್ಸ್ಕೋ ನದಿಯ ಮೇಲೆ ನಿರ್ಮಿಸಲಾಗಿದೆ. ಸುಮಾರು 3 ಕಿಲೋಮೀಟರ್ ಉದ್ದದ ಈ ಸೇತುವೆಯ ನಿರ್ಮಾಣವು 1972 ರಲ್ಲಿ ಪ್ರಾರಂಭವಾಯಿತು ಮತ್ತು ಸೇತುವೆಯನ್ನು 1977 ರಲ್ಲಿ ಸಂಚಾರಕ್ಕೆ ತೆರೆಯಲಾಯಿತು. ಪ್ರತಿ ವರ್ಷ ಸರಾಸರಿ 1.1 ಕೋಟಿ ವಾಹನಗಳು ಈ ಸೇತುವೆಯ ಮೂಲಕ ಹಾದು ಹೋಗುತ್ತವೆ. ಈ ಸೇತುವೆಯನ್ನು ಕೀ ಸೇತುವೆ ಎಂದೂ ಕರೆಯಲಾಗುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT