ನೀರವ್ ಮೋದಿ 
ವಿದೇಶ

ಲಂಡನ್ ನಲ್ಲಿರುವ ನೀರವ್ ಮೋದಿ ಫ್ಲ್ಯಾಟ್ ಮಾರಾಟಕ್ಕೆ ಯುಕೆ ಕೋರ್ಟ್ ಅನುಮತಿ!

ಲಂಡನ್ ನಲ್ಲಿರುವ ನೀರವ್ ಮೋದಿಗೆ ಸೇರಿದ ಐಷಾರಾಮಿ ಫ್ಲ್ಯಾಟ್ ಮಾರಾಟಕ್ಕೆ ಬ್ರಿಟನ್ ನ್ಯಾಯಾಲಯ ಅನುಮತಿ ನೀಡಿದೆ.

ಬ್ರಿಟನ್: ಲಂಡನ್ ನಲ್ಲಿರುವ ನೀರವ್ ಮೋದಿಗೆ ಸೇರಿದ ಐಷಾರಾಮಿ ಫ್ಲ್ಯಾಟ್ ಮಾರಾಟಕ್ಕೆ ಬ್ರಿಟನ್ ನ್ಯಾಯಾಲಯ ಅನುಮತಿ ನೀಡಿದೆ. ಅಪಾರ್ಟ್ಮೆಂಟ್ ಗೆ ಕನಿಷ್ಟ 5.25 ಮಿಲಿಯನ್ ಗ್ರೇಟ್ ಬ್ರಿಟನ್ ಪೌಂಡ್ ಗಳ ಮೌಲ್ಯವನ್ನು ನಿಗದಿಪಡಿಸಲು ಕೋರ್ಟ್ ಸೂಚನೆ ನೀಡಿದೆ.

ನ್ಯಾಯಾಲಯ, ಟ್ರಸ್ಟ್ ನ ಹಿಡಿತದಲ್ಲಿರುವ ಈ ಅಪಾರ್ಟ್ ಮೆಂಟ್ ನ್ನು ಮಾರಾಟ ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಟ್ರೈಡೆಂಟ್ ಟ್ರಸ್ಟ್ ಕಂಪನಿ (ಸಿಂಗಪುರ) ಪಿಟಿಇ ಲಿಮಿಟೆಡ್ ಹಕ್ಕುದಾರರಾಗಿದ್ದು, ಮಧ್ಯ ಲಂಡನ್‌ನ ಮೇರಿಲ್‌ಬೋನ್ ಪ್ರದೇಶದಲ್ಲಿ ತನ್ನ ಅಪಾರ್ಟ್‌ಮೆಂಟ್ ಆಸ್ತಿಯನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ ಮತ್ತು ಟ್ರಸ್ಟ್‌ನ ಆಸ್ತಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿನ ಬೃಹತ್ ವಂಚನೆಯ ಆದಾಯವನ್ನು ಪ್ರತಿನಿಧಿಸುತ್ತದೆ ಎಂದು ಜಾರಿ ನಿರ್ದೇಶನಾಲಯ ವಾದಿಸಿದೆ. ಇದಕ್ಕಾಗಿ ನೀರವ್ ಹಸ್ತಾಂತರ ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ.

"ಜಿಬಿಪಿ 5.25 ಮಿಲಿಯನ್ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತಕ್ಕೆ ಆಸ್ತಿಯನ್ನು ಮಾರಾಟ ಮಾಡಲು ಇದು ಸಮಂಜಸವಾದ ನಿರ್ಧಾರವಾಗಿದೆ ಎಂಬುದು ಮನವರಿಕೆಯಾಗಿದೆ ಎಂದು ಮಾಸ್ಟರ್ ಬ್ರೈಟ್‌ವೆಲ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಪ್ರಕರಣದ ಈ ಹಂತದಲ್ಲಿ ಅನುಸರಿಸದ ಟ್ರಸ್ಟ್‌ನ ರಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಇತರ ಆಕ್ಷೇಪಣೆಗಳನ್ನು ನ್ಯಾಯಾಲಯ ಗಮನಿಸಿತು.

ಇ.ಡಿ ಪರವಾಗಿ ಹಾಜರಾದ ಬ್ಯಾರಿಸ್ಟರ್ ಹರೀಶ್ ಸಾಳ್ವೆ, ಭಾರತೀಯ ಖಜಾನೆಯಾಗಬಹುದಾದ ಅಂತಿಮ ಫಲಾನುಭವಿಯ ಹಿತಾಸಕ್ತಿಗಳನ್ನು ರಕ್ಷಿಸುವ ಆಧಾರದ ಮೇಲೆ ತಾತ್ವಿಕವಾಗಿ ಮಾರಾಟಕ್ಕೆ ಒಪ್ಪಿಕೊಂಡಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ನೀರವ್ ಮೋದಿ ಅವರ ಸಹೋದರಿ ಪೂರ್ವಿ ಮೋದಿ ಮತ್ತು ಅವರ ಕುಟುಂಬದ ಫಲಾನುಭವಿಗಳ ಹೆಸರಿನಲ್ಲಿ ಡಿಸೆಂಬರ್ 2017 ರಲ್ಲಿ ರಚಿಸಲಾದ ಟ್ರಸ್ಟ್ ನ್ನು ಒಳಗೊಂಡಿರುವ ಪ್ರಕರಣವು 'ಅತ್ಯಂತ ಅಸಾಮಾನ್ಯವಾದುದು' ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಭಾರತೀಯ ಅಧಿಕಾರಿಗಳೊಂದಿಗಿನ ಒಪ್ಪಂದದ ಪ್ರಕಾರ, ಪೂರ್ವಿ ಮೋದಿ ಮತ್ತು ಅವರ ವಯಸ್ಕ ಮಕ್ಕಳು ಈ ಕೋರ್ಟ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಈ ಪ್ರಕರಣದಲ್ಲಿ ಹೆಸರಿಸಲಾದ ಆರೋಪಿಗಳಲ್ಲಿ ಒಬ್ಬರಾದ ನೀರವ್ ಮೋದಿ ಅವರು ಟ್ರಸ್ಟ್‌ನ ಫಲಾನುಭವಿ ಎಂದು ಪರಿಗಣಿಸಬೇಕು ಎಂದು ನ್ಯಾಯಾಧೀಶರು ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT