ಪ್ರಾತಿನಿಧಿಕ ಚಿತ್ರ 
ವಿದೇಶ

ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭಾರಿ ಮಳೆ, ಛಾವಣಿ ಕುಸಿದು ಐವರು ಗಣಿ ಕಾರ್ಮಿಕರು ಸಾವು

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಛಾವಣಿ ಕುಸಿದು ಕನಿಷ್ಠ ಐವರು ಗಣಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಸ್ಥಳೀಯ ಕಲ್ಲಿದ್ದಲು ಗಣಿ ಹೊರಗೆ ಕಾರ್ಮಿಕರ ವಸತಿಗಾಗಿ ಮನೆ ನಿರ್ಮಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕಲ್ಲಿದ್ದಲು ಗಣಿ ಕುಸಿದು ಐವರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅವರು ಹೇಳಿದರು.

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಛಾವಣಿ ಕುಸಿದು ಕನಿಷ್ಠ ಐವರು ಗಣಿ ಕಾರ್ಮಿಕರು ಸಾವಿಗೀಡಾಗಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಸ್ಥಳೀಯ ಕಲ್ಲಿದ್ದಲು ಗಣಿ ಹೊರಗೆ ಕಾರ್ಮಿಕರ ವಸತಿಗಾಗಿ ಮನೆ ನಿರ್ಮಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕಲ್ಲಿದ್ದಲು ಗಣಿ ಕುಸಿದು ಐವರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅವರು ಹೇಳಿದರು.

ಭಾರಿ ಮಳೆಯಿಂದಾಗಿ ಇದೇ ಪ್ರದೇಶದಲ್ಲಿ ಮನೆ ಕುಸಿದು ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಶವಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲು ಅಲ್ಲಿಂದ ಅವರ ಸ್ಥಳೀಯ ಪ್ರದೇಶಗಳಿಗೆ ಕಳುಹಿಸಲಾಗಿದೆ.

ಪ್ರಾಂತ್ಯದ ಹರ್ನೈನಲ್ಲಿ ಗಣಿಯೊಂದರೊಳಗೆ ಮೀಥೇನ್ ಅನಿಲ ಸ್ಫೋಟಗೊಂಡು 12 ಕಲ್ಲಿದ್ದಲು ಗಣಿ ಕಾರ್ಮಿಕರು ಸಾವಿಗೀಡಾಗಿದ್ದರು. ಅದಾದ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿದೆ. ಇನ್ನೊಂದು ಘಟನೆಯಲ್ಲಿ ಮೂರು ಕಲ್ಲಿದ್ದಲು ಗಣಿಗಾರರನ್ನು ನಾಲ್ಕು ದಿನಗಳ ಹಿಂದೆ ಡುಕ್ಕಿಯ ಗಣಿಯಿಂದ ಶಸ್ತ್ರಸಜ್ಜಿತ ವ್ಯಕ್ತಿಗಳು ಅಪಹರಿಸಿದ್ದರು ಮತ್ತು ಅವರಿನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT