ಪ್ರವಾಹದಿಂದಾಗಿ ಹಾನಿಗೊಳಗಾಗಿರುವ ವಾಹನಗಳು. 
ವಿದೇಶ

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್‌ ಡೊ ಸುಲ್‌’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಸಾವೊಪೌಲೊ: ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್‌ ಡೊ ಸುಲ್‌’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಮನೆಗಳು, ರಸ್ತೆಗಳು ಮತ್ತು ಸೇತುವೆಗಳ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿವೆ.

ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಅಣೆಕಟ್ಟುಗಳ ಮೇಲಿನ ಹೊರೆ ಹೆಚ್ಚುತ್ತಿದೆ ಎಂಬ ವರದಿ ಬಂದಿದ್ದು, ಇದರಿಂದ ಅಣೆಕಟ್ಟು ಒಡೆದರೆ ಭಾರೀ ಮಟ್ಟದಲ್ಲಿ ಅನಾಹುತ ಎದುರಾಗಬಹುದು ಎಂಬ ಆತಂಕ ಕೆಲವು ನಗರಗಳಿಗೆ ಎದುರಾಗಿದೆ.

ಈ ನಡುವೆ ಬ್ರೆಜಿಲ್ ಗವರ್ನರ್ ಎಡ್ವರ್ಡೊ ಲೀಟ್ ಅವರು ಈ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ‘ನಮ್ಮ ಇತಿಹಾಸದಲ್ಲಿ ನಾವು ನೋಡಿದ ಅತ್ಯಂತ ಕೆಟ್ಟ ದುರಂತವನ್ನು ನಾವು ಎದುರಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಮತ್ತೊಂದೆಡೆ, ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು, ಪ್ರವಾಹ ಪೀಡಿತ ಪ್ರದೇಶದ ರಕ್ಷಣಾ ಕಾರ್ಯಾಚರಣೆಗೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ದಕ್ಷಿಣ ಬ್ರೆಝಿಲ್‍ನ ಸುಮಾರು 150 ನಗರಸಭೆಗಳಲ್ಲಿ ಪ್ರವಾಹದಿಂದ ಹಾನಿ ಸಂಭವಿಸಿದ್ದು, ಕನಿಷ್ಟ 10,000 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ನದಿಗಳ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ,ಹಲವೆಡೆ ಭೂಕುಸಿತ ಸಂಭವಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT