ಕ್ರೀಡಾ ಕೇಂದ್ರ 
ವಿದೇಶ

ಚೀನಾ: ಕ್ರೀಡಾ ಕೇಂದ್ರಕ್ಕೆ ಕಾರು ನುಗ್ಗಿಸಿದ ಚಾಲಕ; 35 ಮಂದಿ ಸಾವು, 43 ಜನರಿಗೆ ಗಾಯ

ದಕ್ಷಿಣ ಚೀನಾದ ಝುಹೈ ನಗರದ ಕ್ರೀಡಾ ಕೇಂದ್ರಕ್ಕೆ ಕಾರು ನುಗ್ಗಿಸಿದ 62 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕಾಕ್: ವ್ಯಕ್ತಿಯೊಬ್ಬ ದಕ್ಷಿಣ ಚೀನಾದ ಝುಹೈನಲ್ಲಿರುವ ಕ್ರೀಡಾ ಕೇಂದ್ರದಲ್ಲಿ ವ್ಯಾಯಾಮ ಮಾಡುತ್ತಿದ್ದ ಜನರ ಮೇಲೆ ಉದ್ದೇಶಪೂರ್ವಕವಾಗಿ ತನ್ನ ಕಾರನ್ನು ನುಗ್ಗಿಸಿದ್ದು, ಭೀಕರ ಅಪಘಾತದಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ ಮತ್ತು 43 ಜನ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪೀಪಲ್ಸ್ ಲಿಬರೇಶನ್ ಆರ್ಮಿ ನಗರದಲ್ಲಿ ವಾರ್ಷಿಕವಾಗಿ ಆಯೋಜಿಸಲಾಗುವ ದೇಶದ ಪ್ರಮುಖ ವೈಮಾನಿಕ ಪ್ರದರ್ಶನದ ಮುನ್ನಾದಿನದಂದು ಸೋಮವಾರ ತಡರಾತ್ರಿ ಈ ದಾಳಿ ನಡೆದಿದ್ದು, ದಕ್ಷಿಣ ಚೀನಾದ ಝುಹೈ ನಗರದ ಕ್ರೀಡಾ ಕೇಂದ್ರಕ್ಕೆ ಕಾರು ನುಗ್ಗಿಸಿದ 62 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೀನಾ ಅಧಿಕಾರಿಗಳ ಪ್ರಕಾರ, ಪೊಲೀಸರು ಫ್ಯಾನ್ ಎಂಬ ಆತನ ಕುಟುಂಬದ ಹೆಸರಿನಿಂದ ಆರೋಪಿಯನ್ನು ಗುರುತಿಸಿದ್ದಾರೆ. ಕೃತ್ಯದ ಬಳಿಕ ಚಾಲಕ ಚಾಕು ಬಳಸಿ ಆತ್ಮಹತ್ಯೆಗೆ ಮುಂದಾಗಿದ್ದ ಎಂದು ವರದಿಯಾಗಿದೆ.

ಫ್ಯಾನ್ ಕಾರಿನಲ್ಲಿ ಚಾಕು ಪತ್ತೆಯಾಗಿದೆ. ಆತನ ಕುತ್ತಿಗೆಗೆ ಗಾಯಗಳಾಗಿದ್ದು, ಸ್ವಯಂ-ಹಾನಿ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಆರೋಪಿ ಪ್ರಜ್ಞಾಹೀನರಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಡೆದು ಸುಮಾರು 24 ಗಂಟೆಗಳ ಕಾಲ, ಸಾವು ಅಥವಾ ಗಾಯದ ಸಂಖ್ಯೆ ಎಷ್ಟು ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಚಿಕಿತ್ಸೆಗಾಗಿ ಜನರನ್ನು ನಾಲ್ಕು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ಸೋಮವಾರ ವರದಿ ಮಾಡಿದೆ.

ಮಂಗಳವಾರ ಬೆಳಗ್ಗೆ ಚೀನೀ ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ಹುಡುಕಾಟಗಳ ಬಗ್ಗೆ ಚೀನಾ ಸೆನ್ಸಾರ್‌ ಮಾಡಿದೆ. ಸಾಮಾಜಿಕ ಜಾಲತಾಣ Weibo ನಲ್ಲಿ ಈ ಘಟನೆಯ ಬಗ್ಗೆ ಸರ್ಚ್‌ ಮಾಡಿದರೆ ಕೇವಲ ಒಂದೆರಡು ಚಿತ್ರಗಳು ಮಾತ್ರ ಕಾಣುತ್ತಿದೆ.

ಸೋಮವಾರ ರಾತ್ರಿಯಿಂದಲೇ ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಪೋಸ್ಟ್‌ಗಳನ್ನು ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಮುಂದಿನ ಸೂಚನೆ ಬರುವವರೆಗೆ ವ್ಯಾಯಾಮ ಕೇಂದ್ರವನ್ನು ಬಂದ್‌ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT