ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ  
ವಿದೇಶ

ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಬಂಧನಕ್ಕೆ ಕ್ರಮ: ಇಂಟರ್‌ಪೋಲ್‌ ಸಹಾಯ ಕೇಳಿದ ಬಾಂಗ್ಲಾದೇಶ

ಶೇಖ್ ಹಸೀನಾ ತನ್ನ ಆಪ್ತ ಸಹಾಯಕರು ಮತ್ತು ಮಾಜಿ ಸಚಿವರೊಂದಿಗೆ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡುವ ಮೂಲಕ ಅವರ 15 ವರ್ಷಗಳ ಆಡಳಿತ ಅಂತ್ಯಗೊಂಡಿತ್ತು.

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆದ ಸಾಮೂಹಿಕ ದಂಗೆಯ ವೇಳೆ ನೂರಾರು ಪ್ರತಿಭಟನಾಕಾರರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ರೆಡ್ ನೋಟಿಸ್ ಜಾರಿ ಮಾಡುವಂತೆ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ ಅಂತಾರಾಷ್ಟ್ರೀಯ ಪೊಲೀಸ್ ಸಂಸ್ಥೆ ಇಂಟರ್‌ಪೋಲ್‌ಗೆ ಮಂಗಳವಾರ ಸೂಚಿಸಿದೆ.

ಶೇಖ್ ಹಸೀನಾ ತನ್ನ ಆಪ್ತ ಸಹಾಯಕರು ಮತ್ತು ಮಾಜಿ ಸಚಿವರೊಂದಿಗೆ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡುವ ಮೂಲಕ ಅವರ 15 ವರ್ಷಗಳ ಆಡಳಿತ ಅಂತ್ಯಗೊಂಡಿತ್ತು.

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಅವರು ಆಗಸ್ಟ್ 8 ರಂದು ದಕ್ಷಿಣ ಏಷ್ಯಾ ರಾಷ್ಟ್ರದ ಹಂಗಾಮಿ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಪಾಕಿಸ್ತಾನದ ವಿರುದ್ಧದ 1971 ರ ಸ್ವಾತಂತ್ರ್ಯ ಯುದ್ಧದ ಸಮಯದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪಗಳನ್ನು ನಿರ್ವಹಿಸಿದ ನ್ಯಾಯಮಂಡಳಿಯನ್ನು ಪುನರ್ರಚಿಸಿದರು.

ಬಿ.ಎಂ. ಹಸೀನಾ ಮತ್ತು ಇತರರ ಬಂಧನದಲ್ಲಿ ಫ್ರಾನ್ಸ್ ಮೂಲದ ಸಂಸ್ಥೆಯಿಂದ ನೆರವು ಕೋರಿ ಪೊಲೀಸ್ ಮುಖ್ಯಸ್ಥರ ಮೂಲಕ ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದೇವೆ ಎಂದು ನ್ಯಾಯಮಂಡಳಿಯ ಪ್ರಾಸಿಕ್ಯೂಟರ್ ಸುಲ್ತಾನ್ ಮಹಮೂದ್ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

ಯೂನಸ್ ನೇತೃತ್ವದ ಸರ್ಕಾರವು ಹಸೀನಾರನ್ನು ವಿಚಾರಣೆಗೆ ಒಳಪಡಿಸುವುದಾಗಿ ಹೇಳಿದ್ದು, ಅವರನ್ನು ಭಾರತದಿಂದ ಹಸ್ತಾಂತರಿಸಲು ಪ್ರಯತ್ನಿಸುವುದಾಗಿ ಹೇಳಿದೆ. ಈ ಹಿಂದೆ, ಬಾಂಗ್ಲಾದೇಶದ ಅಧಿಕಾರಿಗಳು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಹಸ್ತಾಂತರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಬಾಂಗ್ಲಾದೇಶದ ನ್ಯಾಯಮಂಡಳಿ, ದೇಶಭ್ರಷ್ಟ ಮಾಜಿ ನಾಯಕಿ ಶೇಖ್ ಹಸೀನಾಗೆ ಬಂಧನ ವಾರಂಟ್ ನ್ನು ಸಹ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!