ನರೇಂದ್ರ ಮೋದಿ PTI
ವಿದೇಶ

ಕರೋನಾ ವೇಳೆ ಭಾರತದ ನೆರವು: ಪ್ರಧಾನಿ ಮೋದಿಗೆ ಡೊಮಿನಿಕಾ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಣೆ!

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರತ ನೀಡಿದ ಬೆಂಬಲ, ನೆರವಿಗೆ ಕೃತಜ್ಞತೆಯ ಸಂಕೇತವಾಗಿ ಮತ್ತು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯ ಸಂಕೇತವಾಗಿ ಈ ಪ್ರಶಸ್ತಿಯನ್ನು ನೀಡಲಾಗುವುದು.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ್ದಕ್ಕಾಗಿ ಮತ್ತು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ 'ಡೊಮಿನಿಕಾ ಅವಾರ್ಡ್ ಆಫ್ ಆನರ್' ಅನ್ನು ಪ್ರಧಾನಿ ಮೋದಿಯವರಿಗೆ ನೀಡಲಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರತ ನೀಡಿದ ಬೆಂಬಲ, ನೆರವಿಗೆ ಕೃತಜ್ಞತೆಯ ಸಂಕೇತವಾಗಿ ಮತ್ತು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯ ಸಂಕೇತವಾಗಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

2021ರ ಫೆಬ್ರವರಿಯಲ್ಲಿ COVID-19 ಉತ್ತುಂಗದಲ್ಲಿದ್ದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಡೊಮಿನಿಕಾಗೆ 70,000 ಡೋಸ್ ಅಸ್ಟ್ರಾಜೆನೆಕಾ ಲಸಿಕೆಯನ್ನು ಕಳುಹಿಸಿತ್ತು. ಈ ಲಸಿಕೆ ಪೂರೈಕೆಯನ್ನು ಭಾರತದ 'ಲಸಿಕೆ ಮೈತ್ರಿ' ನೀತಿಯ ಅಡಿಯಲ್ಲಿ ಮಾಡಿತ್ತು. ಈ ಮೂಲಕ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಾಯ ಮಾಡುವ ಗುರಿ ಭಾರತ ಹೊಂದಿತ್ತು.

ಮುಂಬರುವ ಭಾರತ-CARICOM (ಕೆರಿಬಿಯನ್ ಸಮುದಾಯ) ಶೃಂಗಸಭೆಯಲ್ಲಿ ಡೊಮಿನಿಕನ್ ಅಧ್ಯಕ್ಷ ಸಿಲ್ವಾನಿ ಬರ್ಟನ್ ಪ್ರಧಾನಿ ಮೋದಿಯವರಿಗೆ ಗೌರವವನ್ನು ನೀಡಲಿದ್ದಾರೆ. ಈ ಶೃಂಗಸಭೆಯು ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19 ಮತ್ತು 21ರ ನಡುವೆ ನಡೆಯಲಿದೆ. ಈ ಸಂದರ್ಭದಲ್ಲಿ, ಭಾರತ ಮತ್ತು ಕೆರಿಬಿಯನ್ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಪರಿಗಣಿಸಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT