ಗಯಾನಾದ ಜಾರ್ಜ್‌ಟೌನ್‌ನಲ್ಲಿರುವ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ ಸ್ವಾಗತಿಸಿದರು. 
ವಿದೇಶ

ಮೂರು ರಾಷ್ಟ್ರಗಳ ಭೇಟಿ: ಅಂತಿಮ ಹಂತದಲ್ಲಿ ಗಯಾನಕ್ಕೆ ಬಂದಿಳಿದ ಪ್ರಧಾನಿ ಮೋದಿ

ಪ್ರಧಾನಿಯವರನ್ನು ಗಯಾನ ಅಧ್ಯಕ್ಷ ಇರ್ಫಾನ್ ಅಲಿ ಮತ್ತು ಹನ್ನೆರಡು ಕ್ಯಾಬಿನೆಟ್ ಮಂತ್ರಿಗಳು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಮೋದಿಯವರ ಆಗಮನ ಮೂಲಕ 50 ವರ್ಷಗಳ ನಂತರ ಗಯಾನಾಕ್ಕೆ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ.

ಜಾರ್ಜ್‌ಟೌನ್: ಬ್ರೆಜಿಲ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಷ್ಟ್ರಗಳ ಭೇಟಿಯ ಕೊನೆಯ ಹಂತದಲ್ಲಿ ಇಂದು ಬುಧವಾರ ಗಯಾನಾಗೆ ಆಗಮಿಸಿದರು.

ಪ್ರಧಾನಿಯವರನ್ನು ಗಯಾನ ಅಧ್ಯಕ್ಷ ಇರ್ಫಾನ್ ಅಲಿ ಮತ್ತು ಹನ್ನೆರಡು ಕ್ಯಾಬಿನೆಟ್ ಮಂತ್ರಿಗಳು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಮೋದಿಯವರ ಆಗಮನ ಮೂಲಕ 50 ವರ್ಷಗಳ ನಂತರ ಗಯಾನಾಕ್ಕೆ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ.

ಗಯಾನ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ ಅವರ ಆಹ್ವಾನದ ಮೇರೆಗೆ ಗಯಾನಗೆ ಭೇಟಿ ನೀಡುತ್ತಿರುವ ಮೋದಿ ಅವರು ನಾಳೆಯವರೆಗೆ ಅಲ್ಲಿ ಇರಲಿದ್ದಾರೆ. ತಮ್ಮ ಭೇಟಿಯ ವೇಳೆ ಮೋದಿ ಅವರು ಇರ್ಫಾನ್ ಅಲಿ ಅವರನ್ನು ಭೇಟಿ ಮಾಡಿ ಉಭಯ ದೇಶಗಳ ನಡುವಿನ ಅನನ್ಯ ಬಾಂಧವ್ಯಕ್ಕೆ ಕಾರ್ಯತಂತ್ರದ ನಿರ್ದೇಶನ ನೀಡುವ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.

185 ವರ್ಷಗಳ ಹಿಂದೆ ವಲಸೆ ಬಂದ ಅತಿ ಹಳೆಯ ಅನಿವಾಸಿ ಭಾರತೀಯರಿಗೆ ಗೌರವ ಸಲ್ಲಿಸುತ್ತಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಾರ, ಗಯಾನಾದಲ್ಲಿ ಸುಮಾರು 3,20,000 ಭಾರತೀಯ ಮೂಲದವರಿದ್ದಾರೆ. ಎರಡನೇ ಭಾರತ-CARICOM ಶೃಂಗಸಭೆಯಲ್ಲಿ ಕೆರಿಬಿಯನ್ ಪಾಲುದಾರ ರಾಷ್ಟ್ರಗಳ ನಾಯಕರೊಂದಿಗೆ ಮೋದಿ ಕೂಡ ಸೇರಿದ್ದಾರೆ.

ನೈಜೀರಿಯಾ ಒಳಗೊಂಡು ಪ್ರಧಾನಮಂತ್ರಿಯವರು ಮೂರು ದೇಶಗಳ ಭೇಟಿಯಲ್ಲಿದ್ದು, ಅಲ್ಲಿ ಅವರು ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಮೋದಿಯವರಿಗೆ ದೇಶದ ರಾಷ್ಟ್ರೀಯ ಪ್ರಶಸ್ತಿ -- ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ (GCON) ನೀಡಿ ಗೌರವಿಸಲಾಯಿತು. ಇದು ಮೋದಿಯವರಿಗೆ ದೇಶವೊಂದು ನೀಡಿದ 17ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಮೋದಿಯವರ ನೈಜೀರಿಯಾ ಭೇಟಿಯು 17 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಪಶ್ಚಿಮ ಆಫ್ರಿಕಾದ ದೇಶಕ್ಕೆ ನಡೆಸಿದ ಮೊದಲ ಪ್ರವಾಸವಾಗಿದೆ. ನೈಜೀರಿಯಾದಿಂದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಬ್ರೆಜಿಲ್‌ಗೆ ತೆರಳಿದ್ದರು.

ಬ್ರೆಜಿಲ್‌ನಲ್ಲಿ, ಅವರು ಯುಎಸ್ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಸೇರಿದಂತೆ ಜಾಗತಿಕ ನಾಯಕರನ್ನು ಭೇಟಿಯಾದರು. ಮೋದಿ ಅವರು ಯುಎಸ್ ಅಧ್ಯಕ್ಷೀಯ ಚುನಾವಣೆಯ ನಂತರದ ಮೊದಲ ಶೃಂಗಸಭೆಯ ಬದಿಯಲ್ಲಿ ಬೈಡನ್ ಅವರೊಂದಿಗೆ ಸಂಕ್ಷಿಪ್ತವಾಗಿ ಸಂವಾದ ನಡೆಸಿದರು.

ಮೊನ್ನೆ ಸೋಮವಾರ ಶೃಂಗಸಭೆಯ ಅಧಿವೇಶನದಲ್ಲಿ ಭಾಷಣ ಮಾಡಿದ ಮೋದಿ, "ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ" ಎಂಬ ಭಾರತದ ಜಿ20 ಧ್ಯೇಯವಾಕ್ಯದಡಿ ಕಳೆದ ವರ್ಷದಂತೆ ಇತ್ತೀಚಿನ ಶೃಂಗಸಭೆಯಲ್ಲಿ ಪ್ರಸ್ತುತವಾಗಿದೆ ಎಂದು ಹೇಳಿದರು.

ಜಾಗತಿಕ ಸಂಘರ್ಷಗಳಿಂದ ಉಂಟಾದ ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟಿನಿಂದ ಜಾಗತಿಕ ದಕ್ಷಿಣದ ದೇಶಗಳು ಹೆಚ್ಚು ಪ್ರತಿಕೂಲ ಪರಿಣಾಮ ಬೀರುತ್ತವೆ ಮತ್ತು ಜಿ 20 ಇದನ್ನು ಪರಿಹರಿಸಲು ಗಮನಹರಿಸಬೇಕು ಎಂದು ಪ್ರಧಾನಿ ಹೇಳಿದರು. ಬೈಡನ್, ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಮ್ಯಾಕ್ರನ್ ಮತ್ತು ಸ್ಟಾರ್ಮರ್ ಸೇರಿದಂತೆ ಪ್ರಮುಖರು ರಿಯೊ ಡಿ ಜನೈರೊದಲ್ಲಿ ಎರಡು ದಿನಗಳ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ಮೋದಿ ಅವರು ಶೃಂಗಸಭೆಯ ಬದಿಯಲ್ಲಿ ಹಲವಾರು ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಅವರು ಬ್ರೆಜಿಲ್, ಇಟಲಿ, ಇಂಡೋನೇಷ್ಯಾ ಮತ್ತು ಪೋರ್ಚುಗಲ್, ನಾರ್ವೆ, ಚಿಲಿ, ಅರ್ಜೆಂಟೀನಾ, ಈಜಿಪ್ಟ್, ದಕ್ಷಿಣ ಕೊರಿಯಾದ ನಾಯಕರನ್ನು ಭೇಟಿ ಮಾಡಿದರು ಮತ್ತು ರಕ್ಷಣೆ, ಭದ್ರತೆ, ವ್ಯಾಪಾರ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಬಾಂಧವ್ಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT