ಐಸ್‌ಲ್ಯಾಂಡ್ ನಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ 
ವಿದೇಶ

ಐಸ್‌ಲ್ಯಾಂಡ್ ನಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ; ಡಿಸೆಂಬರ್ ನಿಂದ ಈವರೆಗೂ 7 ಬಾರಿ ಲಾವಾ ರಸ ಹರಿವು!

ಐಸ್ ಲ್ಯಾಂಡ್ ನ ರಿಕ್‌ಜೇನ್ಸ್‌ ಪ್ರಾಂತ್ಯದ ಗ್ರಿಂಡ್‌ವಿಕ್‌ ಗ್ರಾಮದಲ್ಲಿರುವ ಸುಂಧ್ನುಕಗಿಗರ್‌ ಜ್ವಾಲಾಮುಖಿ ಬುಧವಾರ ರಾತ್ರಿ ಸ್ಫೋಟಿಸಿದ್ದು, ಮೀನುಗಾರಿಕೆಯನ್ನೇ ನಂಬಿರುವ ಗ್ರಾಮದಲ್ಲಿ ಲಾವಾ ರಸ ಹರಿಯುತ್ತಿದೆ.

ನವದೆಹಲಿ: ಜಗತ್ತಿನಾದ್ಯಂತ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿದ್ದ ಐಸ್ ಲ್ಯಾಂಡ್ ನಲ್ಲಿ ಇದೀಗ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಕಳೆದ ಡಿಸೆಂಬರ್ ನಿಂದ ಈ ವರೆಗೂ ಸತತ 7 ಬಾರಿ ಜ್ವಾಲಾಮುಖಿ ಸ್ಫೋಟವಾಗಿ ಲಾವಾ ರಸ ಹರಿಯುತ್ತಿದೆ.

ಹೌದು.. ಐಸ್ ಲ್ಯಾಂಡ್ ನ ರಿಕ್‌ಜೇನ್ಸ್‌ ಪ್ರಾಂತ್ಯದ ಗ್ರಿಂಡ್‌ವಿಕ್‌ ಗ್ರಾಮದಲ್ಲಿರುವ ಸುಂಧ್ನುಕಗಿಗರ್‌ ಜ್ವಾಲಾಮುಖಿ ಬುಧವಾರ ರಾತ್ರಿ ಸ್ಫೋಟಿಸಿದ್ದು, ಮೀನುಗಾರಿಕೆಯನ್ನೇ ನಂಬಿರುವ ಗ್ರಾಮದಲ್ಲಿ ಲಾವಾರಸ ಹರಿಯುತ್ತಿದೆ.

2024ರಲ್ಲಿ ಏಳನೇ ಬಾರಿ ಇಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರನ್ನು ಸ್ಥಳಾಂತರಗೊಳಿಸಲಾಗಿದೆ. ಈ ವರೆಗೂ ಯಾವುದೇ ಜೀವಹಾನಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದು, ಆಸ್ತಿ-ಪಾಸ್ತಿ ನಷ್ಟದ ಕುರಿತು ಈಗಷ್ಟೇ ಮಾಹಿತಿ ಕಲೆಹಾಕಬೇಕಿದೆ ಎಂದು ಐಸ್‌ಲ್ಯಾಂಡ್‌ನ ಹವಾಮಾನ ಇಲಾಖೆ ವರದಿ ಮಾಡಿದೆ.

2021ರವರೆಗೂ ಕಳೆದ ಒಂದು ಶತಮಾನದಲ್ಲಿ ಈ ಪ್ರಾಂತ್ಯದಲ್ಲಿ ಜ್ವಾಲಾಮುಖಿ ಸ್ಫೋಟಿಸಿರಲಿಲ್ಲ. 2021ರ ನಂತರದಲ್ಲಿ ಇಲ್ಲಿ ಭೂಕಂಪನ ಆರಂಭಗೊಂಡಿತು. ಬಳಿಕ ನಿರಂತರವಾಗಿ ಇಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳುತ್ತಿದ್ದು, ಡಿಸೆಂಬರ್ ನಿಂದ ಈ ವರೆಗೂ ಇಲ್ಲಿ ಬರೊಬ್ಬರಿ 7 ಬಾರಿ ಜ್ವಾಲಾಮುಖಿ ಸ್ಫೋಟವಾಗಿದೆ.

ಬುಧವಾರ ಸಂಭವಿಸಿದ ಜ್ವಾಲಾಮುಖಿಯಿಂದಾಗಿ ಕೆಂಪು ಹಾಗೂ ಕಿತ್ತಳೆ ಬಣ್ಣದ ಲಾವಾರಸವು ದಟ್ಟ ಹೊಗೆಯೊಂದಿಗೆ ಹರಿಯುತ್ತಿರುವುದು ಕಂಡುಬಂದಿದೆ.

ಕಳೆದ ಆಗಸ್ಟ್‌ನಲ್ಲಿ ಸಂಭವಿಸಿದ ಜ್ವಾಲಾಮುಖಿಗೆ ಹೋಲಿಸಿದಲ್ಲಿ ಇದರ ಪ್ರಮಾಣ ಚಿಕ್ಕದು. ಮುನ್ನೆಚ್ಚರಿಕೆಯ ಕ್ರಮವಾಗಿ ನಾಲ್ಕು ಸಾವಿರ ನಿವಾಸಿಗಳನ್ನು ಗ್ರಾಮದಿಂದ ವರ್ಷದ ಹಿಂದೆಯೇ ಸ್ಥಳಾಂತರಿಸಲಾಗಿದೆ.

ಜ್ವಾಲಾಮುಖಿಯ ನಿರಂತರ ಸ್ಫೋಟದಿಂದಾಗಿ ಇಲ್ಲಿರುವ ಬಹುತೇಕ ಮನೆಗಳ ಮಾರಾಟವಾಗಿದೆ. ಲಾವಾರಸ ಹರಿದು ಮೂರು ಮನೆಗಳು ಸುಟ್ಟಿವೆ. ಐರೋಪ್ಯ ರಾಷ್ಟ್ರಗಳಲ್ಲಿ ಐಸ್‌ಲ್ಯಾಂಡ್‌ನಲ್ಲೇ ಗರಿಷ್ಠ 33 ಸಕ್ರಿಯ ಜ್ವಾಲಾಮುಖಿಗಳಿವೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT