ಲೆಬನಾನ್‌ನ ಬೈರುತ್‌ನಲ್ಲಿ ದಹಿಯೆಹ್ ಮೇಲೆ ಇಸ್ರೇಲಿ ವೈಮಾನಿಕ ದಾಳಿಯ ನಂತರ ಹೊಗೆ ಕಾಣಿಸಿಕೊಂಡಿರುವುದು  
ವಿದೇಶ

14 ತಿಂಗಳ ಯುದ್ಧ: ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಮಧ್ಯೆ ಕದನ ವಿರಾಮ ಘೋಷಣೆ

ಹಿಜ್ಬುಲ್ಲಾ ಕದನ ವಿರಾಮ ಒಪ್ಪಂದವನ್ನು ಮುರಿದರೆ ದಾಳಿ ನಡೆಸುವುದಾಗಿ ಇಸ್ರೇಲ್ ಹೇಳಿದೆ. ಆರಂಭದಲ್ಲಿ ಎರಡು ತಿಂಗಳ ಕದನ ವಿರಾಮ ಘೋಷಿಸಲಾಗುತ್ತದೆ.

ಜೆರುಸಲೇಂ: ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆ ನಡುವಿನ ಕದನ ವಿರಾಮವು ಇಂದು ಬುಧವಾರ ಮುಂಜಾನೆ ಆರಂಭವಾಗಿದೆ. ಕದನ ವಿರಾಮವು ಇಸ್ರೇಲ್ ಮತ್ತು ಹಮಾಸ್ ನಡುವೆ ಗಾಜಾದಲ್ಲಿ 14 ತಿಂಗಳುಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ಒಪ್ಪಂದವೇನು?: ಹಿಜ್ಬುಲ್ಲಾ ಕದನ ವಿರಾಮ ಒಪ್ಪಂದವನ್ನು ಮುರಿದರೆ ದಾಳಿ ನಡೆಸುವುದಾಗಿ ಇಸ್ರೇಲ್ ಹೇಳಿದೆ. ಆರಂಭದಲ್ಲಿ ಎರಡು ತಿಂಗಳ ಕದನ ವಿರಾಮ ಘೋಷಿಸಲಾಗುತ್ತದೆ. ದಕ್ಷಿಣ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ತನ್ನ ಸಶಸ್ತ್ರ ಪಡೆಗಳನ್ನು ಕೊನೆಗೊಳಿಸಬೇಕು, ಇಸ್ರೇಲಿ ಪಡೆಗಳು ತಮ್ಮ ಗಡಿಯ ಕಡೆಗೆ ಹಿಂತಿರುಗಬೇಕು. ಯುನೈಟೆಡ್ ಸ್ಟೇಟ್ಸ್ ನೇತೃತ್ವದ ಅಂತರರಾಷ್ಟ್ರೀಯ ಸಮಿತಿಯು ಅನುಸರಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ.

ಕದನ ವಿರಾಮವು ಇಂದು ನಸುಕಿನ ಜಾವ 4 ಗಂಟೆಗೆ ಆರಂಭವಾಗಿದೆ. ಇತ್ತೀಚಿನ ವಾರಗಳಲ್ಲಿ ಸಂಪೂರ್ಣ ಯುದ್ಧವಾಗಿ ಮಾರ್ಪಟ್ಟ ಸಂಘರ್ಷದ ಪ್ರಾರಂಭದಿಂದಲೂ ಇಸ್ರೇಲ್ ಬೈರುತ್‌ನಲ್ಲಿ ತನ್ನ ಅತ್ಯಂತ ತೀವ್ರವಾದ ವೈಮಾನಿಕ ದಾಳಿಯನ್ನು ನಿನ್ನೆ ನಡೆಸಿದ್ದು ಅದರಲ್ಲಿ ಕನಿಷ್ಠ 42 ಜನರು ಮೃತಪಟ್ಟಿದ್ದಾರೆ.

ಕದನ ವಿರಾಮವು ಗಾಜಾದಲ್ಲಿನ ವಿನಾಶಕಾರಿ ಯುದ್ಧವನ್ನು ಪರಿಹರಿಸುವುದಿಲ್ಲ, ಅಲ್ಲಿ ಹಮಾಸ್ ಇನ್ನೂ ಡಜನ್ ಗಟ್ಟಲೆ ಒತ್ತೆಯಾಳುಗಳನ್ನು ಹಿಡಿದಿಟ್ಟುಕೊಂಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಡಿಸಿದ ನಂತರ ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಯುಎಸ್-ಫ್ರಾನ್ಸ್ ಮಧ್ಯಸ್ಥಿಕೆಯ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿತು ಎಂದು ಅವರ ಕಚೇರಿ ತಿಳಿಸಿದೆ. ಯುಎಸ್ ಅಧ್ಯಕ್ಷ ಜೋ ಬೈಡನ್ ವಾಷಿಂಗ್ಟನ್‌ನಲ್ಲಿ ಮಾತನಾಡುತ್ತಾ, ಒಪ್ಪಂದವನ್ನು ಶುಭ ಸುದ್ಧಿ ಎಂದಿದ್ದಾರೆ.

ಬೈಡನ್ ಆಡಳಿತವು ಈ ವರ್ಷದ ಬಹುಪಾಲು ಸಮಯವನ್ನು ಗಾಜಾದಲ್ಲಿ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಮಾಡಲು ಪ್ರಯತ್ನಿಸಿದರೂ ಮಾತುಕತೆಗಳು ಪದೇ ಪದೇ ಸ್ಥಗಿತಗೊಂಡವು. ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರಾಚ್ಯದಲ್ಲಿ ಶಾಂತಿಯನ್ನು ಹೇಗೆ ಎಂದು ಹೇಳದೆ ಪ್ರತಿಜ್ಞೆ ಮಾಡಿದ್ದಾರೆ.

ಲೆಬನಾನ್‌ನಲ್ಲಿನ ಹೋರಾಟದ ಯಾವುದೇ ನಿಲುಗಡೆಯು ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ, ಇದು ಹಿಜ್ಬುಲ್ಲಾ ಮತ್ತು ಹಮಾಸ್ ಎರಡನ್ನೂ ಬೆಂಬಲಿಸುತ್ತದೆ. ಈ ವರ್ಷದ ಆರಂಭದಲ್ಲಿ ಎರಡು ಸಂದರ್ಭಗಳಲ್ಲಿ ಇಸ್ರೇಲ್‌ನೊಂದಿಗೆ ನೇರ ಗುಂಡಿನ ವಿನಿಮಯ ಮಾಡಿಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT