ಶ್ರೀಲಂಕಾದಲ್ಲಿ ಚಂಡಮಾರುತದಿಂದ ಉಂಟಾಗಿರುವ ಪರಿಸ್ಥಿತಿ  
ವಿದೇಶ

Fengal ಸೈಕ್ಲೋನ್ ಎಫೆಕ್ಟ್: ಪ್ರತಿಕೂಲ ಹವಾಮಾನ, ಶ್ರೀಲಂಕಾದಲ್ಲಿ 15 ಮಂದಿ ಸಾವು

450,000 ಕ್ಕೂ ಹೆಚ್ಚು ಜನರು ಪ್ರವಾಹ, ತೀವ್ರ ಗಾಳಿ ಮತ್ತು ಭೂಕುಸಿತದಂತಹ ದುರ್ಘಟನೆಗಳಿಗೆ ಸಿಲುಕಿದ್ದಾರೆ. ಇದುವರೆಗೆ ಹದಿನೈದು ಜನರು ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು 10 ಮಂದಿ ಮೃತಪಟ್ಟಿದ್ದಾರೆ.

ಕೊಲಂಬೊ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಪ್ರತಿಕೂಲ ಹವಾಮಾನದಿಂದ ತೀವ್ರ ಮಳೆಯಿಂದ ಉಂಟಾದ ಪ್ರಕೃತಿ ವಿಕೋಪದಿಂದ ಶ್ರೀಲಂಕಾದಲ್ಲಿ ಹದಿನೈದು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (DMC) ತಿಳಿಸಿದೆ.

450,000 ಕ್ಕೂ ಹೆಚ್ಚು ಜನರು ಪ್ರವಾಹ, ತೀವ್ರ ಗಾಳಿ ಮತ್ತು ಭೂಕುಸಿತದಂತಹ ದುರ್ಘಟನೆಗಳಿಗೆ ಸಿಲುಕಿದ್ದಾರೆ. ಇದುವರೆಗೆ ಹದಿನೈದು ಜನರು ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು 10 ಮಂದಿ ಮೃತಪಟ್ಟಿದ್ದಾರೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಆಳವಾದ ವಾಯುಭಾರ ಕುಸಿತದಿಂದ ಈ ರೀತಿ ಆಗಿದ್ದು, ಇಂದು ತಮಿಳು ನಾಡು ತೀರಕ್ಕೆ ಚಂಡಮಾರುತ ಅಪ್ಪಳಿಸಿದೆ.

ಶ್ರೀಲಂಕಾದ ಉತ್ತರ ಮಧ್ಯ ಮತ್ತು ಪೂರ್ವ ಟ್ರಿಂಕೋಮಲಿ ಜಿಲ್ಲೆಗಳಲ್ಲಿ 100 ಮಿ.ಮೀ ಗಿಂತ ಹೆಚ್ಚಿನ ಮಳೆ ಬೀಳುವ, ಗಂಟೆಗೆ 60 ಕಿಮೀ ವೇಗದಲ್ಲಿ ಭಾರೀ ಗಾಳಿ ಬೀಸುವ ನಿರೀಕ್ಷೆಯಿದೆ.

ಪೂರ್ವ ಪಟ್ಟಣವಾದ ಸಮ್ಮಂತುರೈನಲ್ಲಿ ಪ್ರವಾಹ ನೀರಿನಿಂದ ಆರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಬಂಧಿಸಲಾಗಿದೆ. ಬಸ್‌ಗಳ ಕೊರತೆಯಿಂದಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸಲು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

ವಿರೋಶ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ, ಆಶಿಕಾ

ಪಾಕಿಸ್ತಾನದ ಮುಸ್ಲಿಮ್ ಉಮ್ಮಾ ಗೆ ಕಾಡ್ತಿದೆ ಇಸ್ರೇಲ್- ಭಾರತದ Hexagon Alliance ಗುಮ್ಮಾ!

ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ 300 ಕೋಟಿ ರೂ ಬಿಡುಗಡೆ; ಪ್ರತಿ ಟನ್‌ಗೆ 50 ರೂ ನೇರ ವರ್ಗಾವಣೆ

SCROLL FOR NEXT