ಶ್ರೀಲಂಕಾದಲ್ಲಿ ಚಂಡಮಾರುತದಿಂದ ಉಂಟಾಗಿರುವ ಪರಿಸ್ಥಿತಿ  
ವಿದೇಶ

Fengal ಸೈಕ್ಲೋನ್ ಎಫೆಕ್ಟ್: ಪ್ರತಿಕೂಲ ಹವಾಮಾನ, ಶ್ರೀಲಂಕಾದಲ್ಲಿ 15 ಮಂದಿ ಸಾವು

450,000 ಕ್ಕೂ ಹೆಚ್ಚು ಜನರು ಪ್ರವಾಹ, ತೀವ್ರ ಗಾಳಿ ಮತ್ತು ಭೂಕುಸಿತದಂತಹ ದುರ್ಘಟನೆಗಳಿಗೆ ಸಿಲುಕಿದ್ದಾರೆ. ಇದುವರೆಗೆ ಹದಿನೈದು ಜನರು ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು 10 ಮಂದಿ ಮೃತಪಟ್ಟಿದ್ದಾರೆ.

ಕೊಲಂಬೊ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಪ್ರತಿಕೂಲ ಹವಾಮಾನದಿಂದ ತೀವ್ರ ಮಳೆಯಿಂದ ಉಂಟಾದ ಪ್ರಕೃತಿ ವಿಕೋಪದಿಂದ ಶ್ರೀಲಂಕಾದಲ್ಲಿ ಹದಿನೈದು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (DMC) ತಿಳಿಸಿದೆ.

450,000 ಕ್ಕೂ ಹೆಚ್ಚು ಜನರು ಪ್ರವಾಹ, ತೀವ್ರ ಗಾಳಿ ಮತ್ತು ಭೂಕುಸಿತದಂತಹ ದುರ್ಘಟನೆಗಳಿಗೆ ಸಿಲುಕಿದ್ದಾರೆ. ಇದುವರೆಗೆ ಹದಿನೈದು ಜನರು ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು 10 ಮಂದಿ ಮೃತಪಟ್ಟಿದ್ದಾರೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಆಳವಾದ ವಾಯುಭಾರ ಕುಸಿತದಿಂದ ಈ ರೀತಿ ಆಗಿದ್ದು, ಇಂದು ತಮಿಳು ನಾಡು ತೀರಕ್ಕೆ ಚಂಡಮಾರುತ ಅಪ್ಪಳಿಸಿದೆ.

ಶ್ರೀಲಂಕಾದ ಉತ್ತರ ಮಧ್ಯ ಮತ್ತು ಪೂರ್ವ ಟ್ರಿಂಕೋಮಲಿ ಜಿಲ್ಲೆಗಳಲ್ಲಿ 100 ಮಿ.ಮೀ ಗಿಂತ ಹೆಚ್ಚಿನ ಮಳೆ ಬೀಳುವ, ಗಂಟೆಗೆ 60 ಕಿಮೀ ವೇಗದಲ್ಲಿ ಭಾರೀ ಗಾಳಿ ಬೀಸುವ ನಿರೀಕ್ಷೆಯಿದೆ.

ಪೂರ್ವ ಪಟ್ಟಣವಾದ ಸಮ್ಮಂತುರೈನಲ್ಲಿ ಪ್ರವಾಹ ನೀರಿನಿಂದ ಆರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಬಂಧಿಸಲಾಗಿದೆ. ಬಸ್‌ಗಳ ಕೊರತೆಯಿಂದಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸಲು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT