ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ (Photo: Office of the Iranian leader via AP)
ವಿದೇಶ

ಇಸ್ರೇಲ್ ಹೆಚ್ಚು ದಿನ ಇರುವುದಿಲ್ಲ: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ

ತೆಹ್ರಾನ್ ನ ಇಮಾಮ್ ಖೊಮೇನಿ ಮೊಸಲ್ಲಾ ಮಸೀದಿಯಲ್ಲಿ ಭಾಷಣ ಮಾಡಿರುವ ಅಯತೊಲ್ಲಾ, ಜಾಗತಿಕ ಮಟ್ಟದಲ್ಲಿ, ಕುರಾನ್ ಅಡಿಯಲ್ಲಿ ಮುಸ್ಲಿಮರ ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ಇರಾನ್: ಇರಾನ್ ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ವಿರುದ್ಧ ಗುಡುಗಿದ್ದಾರೆ.

ತೆಹ್ರಾನ್ ನ ಇಮಾಮ್ ಖೊಮೇನಿ ಮೊಸಲ್ಲಾ ಮಸೀದಿಯಲ್ಲಿ ಭಾಷಣ ಮಾಡಿರುವ ಅಯತೊಲ್ಲಾ, ಜಾಗತಿಕ ಮಟ್ಟದಲ್ಲಿ, ಕುರಾನ್ ಅಡಿಯಲ್ಲಿ ಮುಸ್ಲಿಮರ ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ಪ್ಯಾಲೇಸ್ಟಿನಿಯನ್ ರಾಜ್ಯ, ಲೆಬನಾನ್ ಮತ್ತು ಇತರ ಮುಸ್ಲಿಂ ರಾಷ್ಟ್ರಗಳ ಶತ್ರುವೇ ಇರಾನ್‌ನ ಶತ್ರು ಆಗಿದೆ ಎಂದು ಅವರು ಹೇಳಿದ್ದಾರೆ.

2020 ರಲ್ಲಿ ಬಾಗ್ದಾದ್‌ನ ವಿಮಾನ ನಿಲ್ದಾಣದ ಬಳಿ ಯುಎಸ್ ಡ್ರೋನ್ ದಾಳಿಯಲ್ಲಿ ಇರಾನ್ ಜನರಲ್ ಖಾಸಿಮ್ ಸೊಲೈಮಾನಿ ಸಾವನ್ನಪ್ಪಿದ ನಂತರ ಮತ್ತು ನಂತರ ಇರಾಕ್‌ನಲ್ಲಿನ ಯುಎಸ್ ಮಿಲಿಟರಿ ನೆಲೆಗಳ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಖಮೇನಿ ಇತ್ತೀಚೆಗೆ ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ್ದರು. 2012ರಲ್ಲಿ ಅದಕ್ಕೂ ಮೊದಲು ಪ್ರಾರ್ಥನೆ ಸಲ್ಲಿಸಿದ್ದರು.

ಮಂಗಳವಾರ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯನ್ನು ಖಮೇನಿ ಶ್ಲಾಘಿಸಿದ್ದಾರೆ ಮತ್ತು ಅದನ್ನು ಸಂಪೂರ್ಣವಾಗಿ 'ಕಾನೂನು ಬದ್ಧ' ಎಂದು ಹೇಳಿದ್ದಾರೆ. ಇರಾನ್ ದಾಳಿ ಅಪರಾಧಗಳ ವಿರುದ್ಧ ಕನಿಷ್ಠ ಶಿಕ್ಷೆ ಎಂದು ಅವರು ಖೊಮೇನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT