ಇಸ್ರೇಲ್ ವೈಮಾನಿಕ ದಾಳಿ 
ವಿದೇಶ

ಮಧ್ಯ ಬೈರುತ್​​ ಮೇಲೆ ಇಸ್ರೇಲ್​ ವೈಮಾನಿಕ ದಾಳಿ: 22 ಮಂದಿ ಸಾವು, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

ಸೆಂಟ್ರಲ್ ಬೈರುತ್‌ನ ಮೇಲಿನ ಈ ವಾಯುದಾಳಿ ಒಂದು ವರ್ಷದಲ್ಲಿ ಅತಿ ಹೆಚ್ಚು ಮಾರಣಾಂತಿಕವಾಗಿದೆ ಎಂದು ವರದಿಯಾಗಿದೆ. ಮಧ್ಯ ಬೈರುತ್​ ಮೇಲೆ ಏಕಕಾಲದಲ್ಲಿ ಎರಡು ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್​ ಸೇನೆ ದಾಳಿ ನಡೆಸುತ್ತಿದೆ

ಲೆಬನಾನ್​: ಮಧ್ಯ ಬೈರುತ್‌ನಲ್ಲಿ ಗುರುವಾರ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಂದಿ ಅಸು ನೀಗಿದ್ದಾರೆ. ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ಜೊತೆಗೆ ಲೆಬನಾನ್‌ನಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾಗಳೊಂದಿಗೆ ಇಸ್ರೇಲ್​ ಸೈನಿಕರು ರಕ್ತಸಿಕ್ತ ಸಂಘರ್ಷ ಮುಂದುವರೆದಿದೆ.

ಸೆಂಟ್ರಲ್ ಬೈರುತ್‌ನ ಮೇಲಿನ ಈ ವಾಯುದಾಳಿ ಒಂದು ವರ್ಷದಲ್ಲಿ ಅತಿ ಹೆಚ್ಚು ಮಾರಣಾಂತಿಕವಾಗಿದೆ ಎಂದು ವರದಿಯಾಗಿದೆ. ಮಧ್ಯ ಬೈರುತ್​ ಮೇಲೆ ಏಕಕಾಲದಲ್ಲಿ ಎರಡು ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್​ ಸೇನೆ ದಾಳಿ ನಡೆಸುತ್ತಿದೆ. ವೈಮಾನಿಕ ದಾಳಿಯಲ್ಲಿ ಎಂಟು ಅಂತಸ್ತಿನ ಕಟ್ಟಡವನ್ನು ದ್ವಂಸಗೊಳಿಸಲಾಗಿದೆ ಎಂದು ಎಪಿ ಛಾಯಾಗ್ರಾಹಕ ಹೇಳಿದ್ದಾರೆ. ಈ ನಡುವೆ ಹಿಜ್ಬುಲ್ಲಾದ ಉನ್ನತ ಭದ್ರತಾ ಅಧಿಕಾರಿ ವಫೀಕ್ ಸಫಾ ಅವರನ್ನು ಕೊಲ್ಲುವ ಪ್ರಯತ್ನ ವಿಫಲವಾಗಿದೆ ಎಂದು ಹಿಜ್ಬುಲ್ಲಾದ ಅಲ್ ಮನರ್ ಟಿವಿ ವರದಿ ಮಾಡಿದೆ. ಉದ್ದೇಶಿತ ಎರಡೂ ಕಟ್ಟಡಗಳ ಒಳಗೆ ಸಫಾ ಇರಲಿಲ್ಲ ಎಂದು ಅದು ಹೇಳಿದೆ. ಈ ವರದಿಗಳ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ.

ಗುರುವಾರದ ದಾಳಿ ಹೆಜ್ಬುಲ್ಲಾ ಮತ್ತು ಇಸ್ರೇಲ್ ನಡುವಿನ ಒಂದು ವರ್ಷದ ಭೀಕರ ದಾಳಿ ಮತ್ತಷ್ಟು ತೀವ್ರತೆ ಪಡೆದುಕೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗುತ್ತಿದೆ. ಇಸ್ರೇಲ್ ಲೆಬನಾನ್‌ನಾದ್ಯಂತ ಭಾರಿ ದಾಳಿಯ ಅಲೆಗಳನ್ನು ಸೃಷ್ಟಿಸಿದೆ. ಇನ್ನು ಹೆಜ್ಬುಲ್ಲಾ ಕೂಡಾ ಇಸ್ರೇಲ್​​ನ ಜನನಿಬಿಡ ಪ್ರದೇಶಗಳ ಮೇಲೆ ರಾಕೆಟ್​ ದಾಳಿಯನ್ನು ನಡೆಸುತ್ತಿದೆ. ಇದು ಕೆಲವು ಸಾವುನೋವುಗಳಿಗೆ ಕಾರಣವಾಗಿದೆ.ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯವುಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್‌ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನ ಹೊಡೆದುರುಳಿಸಿದ ನಂತರ ಉನ್ನತ ಅಧಿಕಾರಿಗಳ ಸರಣಿ ಹತ್ಯೆಯನ್ನೇ ಹೆಚ್ಚಾಗಿ ಗುರಿಯಾಗಿಸಿದೆ. ಆದ್ರೆ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತಾಧಿಕಾರಿ ಬದುಕುಳಿದಿದ್ದಾರೆ. ಈ ದಾಳಿಯು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಸ್ಪೇನ್‌ ಹಾಗೂ ಇಟಲಿ ದೇಶಗಳು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT