ಪ್ರಧಾನಿ ಮೋದಿ, ಬೈಡನ್, ಟುಡ್ರೋ 
ವಿದೇಶ

ಕೆನಡಾ ಆರೋಪ ಅತ್ಯಂತ ಗಂಭೀರ: ನಿಜ್ಜರ್ ಹತ್ಯೆ ತನಿಖೆಯಲ್ಲಿ ಸಹಕಾರ ನೀಡಿ, ಭಾರತಕ್ಕೆ ಅಮೆರಿಕದ ಸೂಚನೆ!

ಕೆನಡಾದ ಆರೋಪಗಳು ಅತ್ಯಂತ ಗಂಭೀರವಾಗಿದೆ ಮತ್ತು ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಸ್ಪಷ್ಟಪಡಿಸಿದ್ದೇವೆ. ಭಾರತ ಕೆನಡಾದ ತನಿಖೆಗೆ ಸಹಕರಿಸುವುದನ್ನು ನಾವು ನೋಡಬಯಸುತ್ತೇವೆ.

ವಾಷಿಂಗ್ಟನ್: ಕೆನಡಾದ ಆರೋಪ 'ಅತ್ಯಂತ ಗಂಭೀರ' ವಾಗಿದೆ ಎಂದಿರುವ ಅಮೆರಿಕ, ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದ ತನಿಖೆಗೆ 'ಸಹಕಾರ' ನೀಡುವಂತೆ ಭಾರತಕ್ಕೆ ಸೂಚಿಸಿದೆ.

ಕೆನಡಾದಲ್ಲಿ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಸರ್ಕಾರಿ ಏಜೆಂಟರು ಭಾಗಿಯಾಗಿದ್ದಾರೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಎದುರಾಗಿದೆ.ಕೆನಡಾದ ಆರೋಪಗಳನ್ನು ಭಾರತ ತಳ್ಳಿಹಾಕಿದ್ದು, ಇದು 'ಅಸಂಬದ್ಧ' ಮತ್ತು 'ರಾಜಕೀಯ ಪ್ರೇರಿತ' ಎಂದು ಬಣ್ಣಿಸಿದೆ.

ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್, ಕೆನಡಾದ ಆರೋಪಗಳು ಅತ್ಯಂತ ಗಂಭೀರವಾಗಿದೆ ಮತ್ತು ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಸ್ಪಷ್ಟಪಡಿಸಿದ್ದೇವೆ. ಭಾರತ ಕೆನಡಾದ ತನಿಖೆಗೆ ಸಹಕರಿಸುವುದನ್ನು ನೋಡಲು ನಾವು ಬಯಸುತ್ತೇವೆ. ಆದರೆ, ಭಾರತ ಪರ್ಯಾಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದೆ ಎಂದರು.

ಉಭಯ ದೇಶಗಳ ನಡುವಿನ ಸಹಕಾರದ ಅಗತ್ಯವನ್ನು ಒತ್ತಿ ಹೇಳಿದ ಮಿಲ್ಲರ್, ಎರಡೂ ದೇಶಗಳು ಬಹಿರಂಗವಾಗಿ ನೀಡಿರುವ ಹೇಳಿಕೆ ಮೀರಿ ನಾವು ಯಾವುದೇ ಹೇಳಿಕೆ ನೀಡುವುದಿಲ್ಲ. ಸಹಕರಿಸಲು ಭಾರತವನ್ನು ಒತ್ತಾಯಿಸಿದ್ದೇವೆ ಮತ್ತು ಹಾಗೆ ಮಾಡಲು ಒತ್ತಾಯಿಸುತ್ತೇವೆ ಎಂದು ಹೇಳಿದರು. ಆದಾಗ್ಯೂ, US-ಭಾರತದ ದ್ವಿಪಕ್ಷೀಯ ಸಂಬಂಧ ದೃಢವಾಗಿ ಉಳಿಯುತ್ತದೆ ಎಂದು ಮಿಲ್ಲರ್ ಭರವಸೆ ನೀಡಿದರು.

"ಭಾರತ ಅಮೆರಿಕದ ನಂಬಲಾಗದಷ್ಟು ಬಲವಾದ ಪಾಲುದಾರನಾಗಿ ಮುಂದುವರೆದಿದೆ. ಇಂಡೋ ಫೆಸಿಪಿಕ್ ಮುಕ್ತ ಸೇರಿದಂತೆ ಹಲವಾರು ವಿಷಯಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ್ದೇವೆ. ನಾವು ಕಾಳಜಿ, ಉತ್ತಮ ಸಂಬಂಧ ಹೊಂದಿರುವಾಗ ಅವರಿಗೆ ಸಂಬಂಧಿಸಿದ ಕಾಳಜಿ ಕುರಿತು ಮುತುವರ್ಜಿ ವಹಿಸಬಹುದು. ಆ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT