ಪ್ರಧಾನಿ ಮೋದಿ- ಪುಟಿನ್ online desk
ವಿದೇಶ

ಯುಕ್ರೇನ್-ರಷ್ಯಾ ಕದನ ಅಂತ್ಯಕ್ಕೆ ನಿರ್ದಿಷ್ಟ ಸಮಯ ನಿಗದಿ ಸಾಧ್ಯವಿಲ್ಲ; ಮೋದಿ ಕಾಳಜಿ ಬಗ್ಗೆ ಪುಟಿನ್ ಮೆಚ್ಚುಗೆ

ಮಾಸ್ಕೋದಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿರುವ ಪುಟಿನ್, ತಮ್ಮ ದೇಶ ಮಾತುಕತೆಗೆ ಸಿದ್ಧವಿದೆ ಎಂದು ಹೇಳಿದರು ಆದರೆ ಈ ನಿಟ್ಟಿನಲ್ಲಿ ರಷ್ಯಾ ಈ ಹಿಂದೆ ಮಾಡಿದ ಪ್ರಯತ್ನಗಳನ್ನು ಉಕ್ರೇನ್ ಕಸದ ಬುಟ್ಟಿಗೆ ಹಾಕಿದೆ ಎಂದು ಆರೋಪಿಸಿದರು.

ಮಾಸ್ಕೋ: ಯುಕ್ರೇನ್ ವಿರುದ್ಧದ ಯುದ್ಧ ಯಾವಾಗ ಅಂತ್ಯವಾಗುತ್ತದೆ ಎಂಬುದನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಯುದ್ಧದ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಸ್ಕೋದಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿರುವ ಪುಟಿನ್, ತಮ್ಮ ದೇಶ ಮಾತುಕತೆಗೆ ಸಿದ್ಧವಿದೆ ಎಂದು ಹೇಳಿದರು ಆದರೆ ಈ ನಿಟ್ಟಿನಲ್ಲಿ ರಷ್ಯಾ ಈ ಹಿಂದೆ ಮಾಡಿದ ಪ್ರಯತ್ನಗಳನ್ನು ಉಕ್ರೇನ್ ಕಸದ ಬುಟ್ಟಿಗೆ ಹಾಕಿದೆ ಎಂದು ಆರೋಪಿಸಿದರು.

ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಮಾತುಕತೆಯಲ್ಲಿ ಭಾರತದ ಪಾತ್ರವನ್ನು ನೀವು ಗಮನಿಸಿದ್ದೀರಾ? ಎಂಬ ಪಿಟಿಐ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು "ಸ್ನೇಹಿತ" ಮೋದಿ ಅವರು ವ್ಯಕ್ತಪಡಿಸಿದ ಕಾಳಜಿಯನ್ನು ಉಲ್ಲೇಖಿಸಿದ್ದು, ಮೋದಿ ಕಾಳಜಿಗೆ ರಷ್ಯಾ "ಕೃತಜ್ಞತೆ ಸಲ್ಲಿಸುತ್ತದೆ" ಎಂದು ಅವರು ಹೇಳಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ನಿರ್ದಿಷ್ಟ ದಿನಾಂಕವನ್ನು ನಿಗದಿ ಮಾಡುವುದು ಕಷ್ಟಕರ ಮತ್ತು ಪ್ರತಿಕೂಲವಾಗಿದೆ ಎಂದು ಪುಟಿನ್ ಇದೇ ವೇಳೆ ಹೇಳಿದರು.

ರಷ್ಯಾವನ್ನು ಯುದ್ಧಕ್ಕೆ ತಳ್ಳಿದ್ದಕ್ಕಾಗಿ ಪುಟಿನ್, ಯುಎಸ್ ಮತ್ತು ನ್ಯಾಟೋವನ್ನು ದೂಷಿಸಿದರು ಮತ್ತು ಇದರ ವಿರುದ್ಧ ರಷ್ಯಾ ಮೇಲುಗೈ ಸಾಧಿಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT