ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು online desk
ವಿದೇಶ

'ದಾಳಿ ನಡೆಸಿ ಘೋರ ತಪ್ಪು ಮಾಡಿದ್ದೀರಿ, ಭಾರೀ ಬೆಲೆ ತೆರಬೇಕಾಗುತ್ತದೆ': ಹಿಜ್ಬುಲ್ಲಾಗೆ ಇಸ್ರೇಲ್ ಎಚ್ಚರಿಕೆ

ನನ್ನ ಮೇಲಿನ ಈ ಹತ್ಯೆ ಪ್ರಯತ್ನವು ನನ್ನನ್ನಾಗಲೀ ಅಥವಾ ಇಸ್ರೇಲ್ ಯುದ್ಧವನ್ನು ಮುಂದುವರೆಸುವುದನ್ನಾಗಲೀ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೆರುಸಲೇಂ: ನನ್ನನ್ನು ಹತ್ಯೆಗೈಯಲು ಯತ್ನಿಸಿ ಹಿಜ್ಬುಲ್ಲಾ ಸಂಘಟನೆ ಘೋರ ತಪ್ಪು ಮಾಡಿದೆ, ಇದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಇಸ್ರೇಲ್ ಕರಾವಳಿಯ ಕೆಸರಿಯಾ ನಗರದಲ್ಲಿರುವ ತಮ್ಮ ಖಾಸಗಿ ನಿವಾಸದ ಮೇಲೆ ಹಿಜ್ಬುಲ್ಲಾ ನಡೆಸಿದ ಡ್ರೋನ್ ದಾಳಿಯ ಬಗ್ಗೆ ಕುರಿತು ನೆತನ್ಯಾಹು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದಾಳಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಜ್ಬುಲ್ಲಾ ಸಂಘಟನೆಯನ್ನು "ಇರಾನ್‌ನ ಪ್ರಾಕ್ಸಿ" ಎಂದು ಉಲ್ಲೇಖಿಸಿದ್ದು, ನನ್ನ ಮೇಲಿನ ಈ ಹತ್ಯೆ ಪ್ರಯತ್ನವು ನನ್ನನ್ನಾಗಲೀ ಅಥವಾ ಇಸ್ರೇಲ್ ಯುದ್ಧವನ್ನು ಮುಂದುವರೆಸುವುದನ್ನಾಗಲೀ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

"ನನ್ನನ್ನು ಮತ್ತು ನನ್ನ ಪತ್ನಿಯನ್ನ ಹತ್ಯೆ ಮಾಡಲು ಇರಾನ್‌ನ ಪ್ರಾಕ್ಸಿ ಹಿಜ್ಬುಲ್ಲಾ ನಡೆಸಿದ ಪ್ರಯತ್ನವು ಒಂದು ದೊಡ್ಡ ತಪ್ಪು. ಇದು ನಮ್ಮ ಭವಿಷ್ಯವನ್ನು ಭದ್ರಪಡಿಸುವ ಸಲುವಾಗಿ ನಮ್ಮ ಶತ್ರುಗಳ ವಿರುದ್ಧ ನಮ್ಮ ನ್ಯಾಯಯುತ ಯುದ್ಧವನ್ನು ಮುಂದುವರಿಸುವುದರಿಂದ ನನ್ನನ್ನಾಗಲೀ ಅಥವಾ ಇಸ್ರೇಲ್ ರಾಷ್ಟ್ರವನ್ನಾಗಲೀ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ನಿನ್ನೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸದ ಮೇಲೆಯೇ ಏಕಾಏಕಿ ಡ್ರೋನ್​ ದಾಳಿ ನಡೆದಿತ್ತು. ಆದರೆ, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಲೆಬನಾನ್‌ನಿಂದ ಈ ಡ್ರೋನ್ ದಾಳಿ ನಡೆದಿದ್ದು,ಇಸ್ರೇಲ್ ಪ್ರಧಾನಿ ಬೆಂಜಮಿನ್​ ನೆತನ್ಯಾಹು ಅವರ ಖಾಸಗಿ ನಿವಾಸದ ಮೇಲೆ ಉಡಾಯಿಸಲಾಗಿದೆ. ಈ ವೇಳೆ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಮನೆಯಲ್ಲಿ ಇರಲಿಲ್ಲ ಎಂದು ಇಸ್ರೇಲ್ ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಲೆಬನಾನ್‌ನಿಂದ ಹಾರಿಬಿಟ್ಟ ಡ್ರೋನ್‌ಗಳನ್ನು ಇಸ್ರೇಲ್‌ನ ವಾಯು ರಕ್ಷಣೆಯಾದ ಐರನ್​ಡೋಮ್​ ಹೊಡೆದು ಹಾಕಿದೆ. ಬಳಿಕ ರಾಜಧಾನಿ ಟೆಲ್​ಅವಿವ್​ನಲ್ಲಿ ಎಚ್ಚರಿಕೆ ಗಂಟೆ ಕೂಗಿಸಲಾಗಿದೆ. ಹೈಫಾ ಕೊಲ್ಲಿ ಪ್ರದೇಶದಲ್ಲೂ ರಾಕೆಟ್​​ಗಳು ಹಾರಿಬರುತ್ತಿರುವ ಕಾರಣ ಸೈರನ್ ಮೊಳಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡ ನೆತನ್ಯಾಹು ಅವರು, ಹಮಾಸ್​​ ನಾಯಕ ಯಾಹ್ಯಾ ಸಿನ್ವಾರ್​​ನನ್ನು ಹೊಡೆದು ಹಾಕಲಾಗಿದೆ. ಇಸ್ರೇಲಿ ರಕ್ಷಣಾ ಪಡೆಗಳ ಕೆಚ್ಚೆದೆಯ ಸೈನಿಕರ ದಾಳಿಗೆ ಆತ ಸಾವನ್ನಪ್ಪಿದ್ದಾನೆ. ಇದು ಗಾಜಾದಲ್ಲಿ ಯುದ್ಧದ ಅಂತ್ಯವಲ್ಲ. ಅಂತ್ಯದ ಆರಂಭ. ಗಾಜಾದ ಜನರೇ, ಯುದ್ಧ ನಿಲ್ಲಲು ನನ್ನ ಬಳಿ ಒಂದು ಸರಳ ಉಪಾಯವಿದೆ. ಅದೇನೆಂದರೆ, ಹಮಾಸ್ ಉಗ್ರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಲಿ, ನಮ್ಮವರನ್ನು ಹಿಂದಿರುಗಿಸಿದರೆ ಸಂಘರ್ಷ ಕೊನೆಗೊಳ್ಳಲಿದೆ ಎಂದು ಹೇಳಿದ್ದರು.

ಅಕ್ಟೋಬರ್​ 7 ರ ದಾಳಿಯಲ್ಲಿ ಹಮಾಸ್​ ಉಗ್ರರು ಒತ್ತೆಯಾಳುಗಳನ್ನಾಗಿ ಕರೆದೊಯ್ದಿರುವವರಲ್ಲಿ 101 ಜನರಿದ್ದಾರೆ. ಇದರಲ್ಲಿ ಇಸ್ರೇಲ್​ ಸೇರಿದಂತೆ ವಿವಿಧ ದೇಶಗಳ ಜನರು ಇದ್ದಾರೆ ಎಂದೂ ಇದೇ ವೇಳೆ ನೆತನ್ಯಾಹು ಬಹಿರಂಗಪಡಿಸಿದ್ದಾರೆ.

ಹಮಾಸ್ ಉಗ್ರರು ಗಾಜಾದಲ್ಲಿ 101 ಜನರನ್ನು ಒತ್ತೆ ಇಟ್ಟುಕೊಂಡಿದ್ದಾರೆ. ಅವರೆಲ್ಲರನ್ನೂ ವಾಪಸ್​​ ಕರೆತರಲು ಇಸ್ರೇಲ್ ಬದ್ಧವಾಗಿದೆ. ಒತ್ತೆಯಾಳುಗಳ ಸುರಕ್ಷತೆ ಮುಖ್ಯವಾಗಿದೆ. ನ್ಯಾಯೋಚಿತವಾಗಿ ಅವರನ್ನು ಕರೆತರಲಾಗುವುದು ಎಂದು ಪ್ರತಿಜ್ಞೆ ಮಾಡಿದರು.

ಭಯೋತ್ಪಾದನೆಯ ವಿರುದ್ಧ ದೇಶ ನಡೆಸುತ್ತಿರುವ ಯುದ್ಧವು ತಾರ್ಕಿಕ ಅಂತ್ಯ ಕಾಣಲಿದೆ. ಅಲ್ಲಿಯವರೆಗೂ ಸಂಘರ್ಷ ನಡೆಯಲಿದೆ. ಒತ್ತೆಯಾಳುಗಳಿಗೆ ಹಾನಿಯಾದಲ್ಲಿ ಇಸ್ರೇಲ್​ ಅಂಥವರಿಗೆ ಶಿಕ್ಷಿಸದೆ ಬಿಡುವುದಿಲ್ಲ ಎಂದೂ ಕಠಿಣ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT