ಭೂಕುಸಿತದ ನಂತರ ಟ್ರಾಮಿ ಫಿಲಿಪೈನ್ಸ್‌ನ ಬಟಾಂಗಾಸ್ ಪ್ರಾಂತ್ಯದ ತಾಲಿಸೆಯಲ್ಲಿ ರಕ್ಷಣಾ ಕಾರ್ಯಾಚರಣೆ Photo | AP
ವಿದೇಶ

ಫಿಲಿಪೈನ್ಸ್‌ನಲ್ಲಿ ಭಾರೀ ಪ್ರವಾಹ, ಭೂಕುಸಿತ: ಕನಿಷ್ಠ 115 ಮಂದಿ ಸಾವು, ನಾಪತ್ತೆ

ಶುಕ್ರವಾರ ವಾಯುವ್ಯ ಫಿಲಿಪೈನ್ಸ್‌ನಲ್ಲಿ ಸೃಷ್ಟಿಯಾದ ಟ್ರಾಮಿ ಚಂಡಮಾರುತ, ಗಂಟೆಗೆ 95 ಕಿ.ಮೀ ವೇಗದಲ್ಲಿ ಅಪ್ಪಳಿಸಿದ್ದು, ವ್ಯಾಪಕ ನಷ್ಟ ಉಂಟು ಮಾಡಿದೆ.

ತಾಲಿಸೇ: ಫಿಲಿಪೈನ್ಸ್‌ನಲ್ಲಿ ಟ್ರಾಮಿ ಚಂಡಮಾರುತದಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತಗಳಲ್ಲಿ ಮೃತಪಟ್ಟವರ ಮತ್ತು ಕಾಣೆಯಾದವರ ಸಂಖ್ಯೆ 100ಕ್ಕೂ ಹೆಚ್ಚಾಗಿದೆ ಎಂದು ಫಿಲಿಫೈನ್ಸ್ ಅಧ್ಯಕ್ಷರು ಶನಿವಾರ ಹೇಳಿದ್ದಾರೆ.

ಶುಕ್ರವಾರ ವಾಯುವ್ಯ ಫಿಲಿಪೈನ್ಸ್‌ನಲ್ಲಿ ಸೃಷ್ಟಿಯಾದ ಟ್ರಾಮಿ ಚಂಡಮಾರುತ, ಗಂಟೆಗೆ 95 ಕಿ.ಮೀ ವೇಗದಲ್ಲಿ ಅಪ್ಪಳಿಸಿದ್ದು, ವ್ಯಾಪಕ ನಷ್ಟ ಉಂಟು ಮಾಡಿದೆ.

ಈ ವರ್ಷ ಇದುವರೆಗೆ ಆಗ್ನೇಯ ಏಷ್ಯಾದ ದ್ವೀಪಸಮೂಹದ ಮಾರಣಾಂತಿಕ ಮತ್ತು ಅತ್ಯಂತ ವಿನಾಶಕಾರಿ ಚಂಡಮಾರುತದಿಂದ ಕನಿಷ್ಠ 81 ಜನ ಸಾವನ್ನಪ್ಪಿದ್ದಾರೆ ಮತ್ತು 34 ಜನರು ಕಾಣೆಯಾಗಿದ್ದಾರೆ ಎಂದು ಸರ್ಕಾರದ ವಿಪತ್ತು-ಪ್ರತಿಕ್ರಿಯೆ ಸಂಸ್ಥೆ ತಿಳಿಸಿದೆ.

ಹಲವು ಕಡೆ ವಾಹನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು, ಮನೆಯ ಛಾವಣಿಯಲ್ಲಿ ಸಿಕ್ಕಿಬಿದ್ದಿರುವ ಜನರನ್ನು ಮೋಟಾರು ಬೋಟ್‍ಗಳ ಮೂಲಕ ತೆರವುಗೊಳಿಸಲಾಗಿದೆ. ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಲುಝೋನ್ ದ್ವೀಪದಲ್ಲಿ ಶಾಲೆಗಳು ಹಾಗೂ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಪ್ರವಾಹ ಪೀಡಿತ ಮನಿಲಾದ ಆಗ್ನೇಯದ ಮತ್ತೊಂದು ಪ್ರದೇಶವನ್ನು ಶನಿವಾರ ಪರಿಶೀಲಿಸಿದ ಫಿಲಿಫೈನ್ಸ್ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಅವರು, ಚಂಡಮಾರುತದಿಂದ ಭಾರಿ ದೊಡ್ಡ ಪ್ರಮಾಣದ ಮಳೆಯಾಗಿದೆ, ಕೇವಲ 24 ಗಂಟೆಗಳಲ್ಲಿ ಎರಡು ತಿಂಗಳ ಪ್ರಮಾಣದ ಮಳೆಯಾಗಿದೆ ಎಂದು ಹೇಳಿದ್ದಾರೆ.

ಈ ಚಂಡಮಾರುತದಿಂದ 2 ದಶಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. 75,400 ಗ್ರಾಮಸ್ಥರನ್ನು ತಾತ್ಕಾಲಿಕ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT