ನರೇಂದ್ರ ಮೋದಿ- ಝೆಲೆನ್ಸ್ಕಿ online desk
ವಿದೇಶ

ಭಾರತಕ್ಕೆ ಸಾಕಷ್ಟು ಮೌಲ್ಯವಿದೆ... ಸಂಘರ್ಷ ಕೊನೆಗೊಳಿಸುವ ತಾಕತ್ತು ಇರುವುದು ಮೋದಿಗೆ ಮಾತ್ರ: ಝೆಲೆನ್ಸ್ಕಿ

ರಷ್ಯಾ ಜೊತೆಗಿನ ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸುವ ತಾಕತ್ತು ಇರುವುದು ಪ್ರಧಾನಿ ಮೋದಿಗೆ ಮಾತ್ರ. ಇದು ಭಾರತಕ್ಕೂ ಬಹಳ ಮಹತ್ವದ್ದಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತೊಮ್ಮೆ ಸಂಘರ್ಷ ನಿಲ್ಲಿಸುವ ಪ್ರಧಾನಿ ಮೋದಿ ಪಾತ್ರದ ಕುರಿತಂತೆ ಪುನರುಚ್ಚರಿಸಿದ್ದಾರೆ.

ನವದೆಹಲಿ: ರಷ್ಯಾ ಜೊತೆಗಿನ ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸುವ ತಾಕತ್ತು ಇರುವುದು ಪ್ರಧಾನಿ ಮೋದಿಗೆ ಮಾತ್ರ. ಇದು ಭಾರತಕ್ಕೂ ಬಹಳ ಮಹತ್ವದ್ದಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತೊಮ್ಮೆ ಸಂಘರ್ಷ ನಿಲ್ಲಿಸುವ ಪ್ರಧಾನಿ ಮೋದಿ ಪಾತ್ರದ ಕುರಿತಂತೆ ಪುನರುಚ್ಚರಿಸಿದ್ದಾರೆ.

ಪ್ರಧಾನಿ ಮೋದಿಯವರು ಉಕ್ರೇನ್ ಮತ್ತು ರಷ್ಯಾ ನಡುವಿನ ಶಾಂತಿ ಮಾತುಕತೆಗಳನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಝೆಲೆನ್ಸ್ಕಿ ತಮ್ಮ ಬಲವಾದ ಸುಳಿವು ನೀಡಿದರು. ಭಾರತದಿಂದ ಇದು ನಿಸ್ಸಂದೇಹವಾಗಿ ಸಂಭವಿಸಬಹುದು ಮತ್ತು ಪ್ರಧಾನಿ ಮೋದಿ ಅವರು ಅದನ್ನು ನಿಜವಾಗಿ ಮಾಡಬಹುದು. ಈ ಶಾಂತಿ ಮಾತುಕತೆಯಲ್ಲಿ ಭಾರತದ ಮಧ್ಯಸ್ಥಿತಿಕೆ ತುಂಬಾ ಮುಖ್ಯವಾಗಿರುತ್ತದೆ. ಅದರಲ್ಲೂ ಈ ಶಾಂತಿ ಮಾತುಕತೆಯನ್ನು ನವದೆಹಲಿ ಮಾಡಬೇಕು ಎಂದು ಹೇಳಿದ್ದಾರೆ. ಇದರ ಜತೆಗೆ ಈ ಶಾಂತಿ ಮಾತುಕತೆಯ ಸ್ವರೂಪವು ಉಕ್ರೇನ್‌ನ ಚೌಕಟ್ಟಿನೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದ್ದಾರೆ. ಏಕೆಂದರೆ ಮೋದಿ ಭೇಟಿ ನಂತರ ಸಂಘರ್ಷ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಶಾಂತಿ ಮಾತುಕತೆಗೆ ವೇದಿಕೆ ಸಿದ್ಧ ಮಾಡಬೇಕಿದೆ. ಅದು ಅವರಿಂದ ಮಾತ್ರ ಸಾಧ್ಯ. ಈ ಮೂಲಕ ಯುದ್ಧಕ್ಕೆ ಅವರೇ ಕೊನೆ ಹಾಡಬೇಕು ಎಂದು ಹೇಳಿದರು. ಇದೀಗ ಈ ಹೇಳಿಕೆ ಎಲ್ಲ ಕಡೆ ವೈರಲ್​​ ಆಗುತ್ತಿದೆ. ಹಾಗೂ ಚರ್ಚೆಗೆ ವೇದಿಕೆಯಾಗಿ ನಿಂತಿದೆ ಎಂದು ಹೇಳಿದರು. ಇದರ ಜತೆಗೆ ಮಾಸ್ಕೋದ ಮಿಲಿಟರಿ ಕಾರ್ಯಾಚರಣೆಗಳನ್ನು ಮೊಟಕುಗೊಳಿಸುವ ಆರ್ಥಿಕ ಮತ್ತು ಕಾರ್ಯತಂತ್ರದ ನಿರ್ಬಂಧಗಳ ಬಗ್ಗೆ ಗಮನಿಸಬೇಕು ಎಂದರು.

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಕೆಲಸ ಮಾಡಲು ಸಿದ್ಧ ಎಂಬ ಮೋದಿ ಹೇಳಿದ್ದಾರೆ. ಆದರೆ ಹೇಳಿಕೆ ಸಾಕಾಗುವುದಿಲ್ಲ ಆ ಬಗ್ಗೆ ಕೆಲಸವನ್ನು ಮಾಡಬೇಕು. ಮೋದಿ ನಿಜವಾಗಿ ಬಹಳ ದೊಡ್ಡ ದೇಶದ ಪ್ರಧಾನಿ... ಇಂತಹ ದೇಶ ನಮಗೆ ಯುದ್ಧದ ಅಂತ್ಯದಲ್ಲಿ ಆಸಕ್ತಿ ಇದೆ ಎಂದು ಸುಮ್ಮನೆ ಹೇಳಿರಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT