ನರೇಂದ್ರ ಮೋದಿ- ಝೆಲೆನ್ಸ್ಕಿ online desk
ವಿದೇಶ

ಭಾರತಕ್ಕೆ ಸಾಕಷ್ಟು ಮೌಲ್ಯವಿದೆ... ಸಂಘರ್ಷ ಕೊನೆಗೊಳಿಸುವ ತಾಕತ್ತು ಇರುವುದು ಮೋದಿಗೆ ಮಾತ್ರ: ಝೆಲೆನ್ಸ್ಕಿ

ರಷ್ಯಾ ಜೊತೆಗಿನ ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸುವ ತಾಕತ್ತು ಇರುವುದು ಪ್ರಧಾನಿ ಮೋದಿಗೆ ಮಾತ್ರ. ಇದು ಭಾರತಕ್ಕೂ ಬಹಳ ಮಹತ್ವದ್ದಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತೊಮ್ಮೆ ಸಂಘರ್ಷ ನಿಲ್ಲಿಸುವ ಪ್ರಧಾನಿ ಮೋದಿ ಪಾತ್ರದ ಕುರಿತಂತೆ ಪುನರುಚ್ಚರಿಸಿದ್ದಾರೆ.

ನವದೆಹಲಿ: ರಷ್ಯಾ ಜೊತೆಗಿನ ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸುವ ತಾಕತ್ತು ಇರುವುದು ಪ್ರಧಾನಿ ಮೋದಿಗೆ ಮಾತ್ರ. ಇದು ಭಾರತಕ್ಕೂ ಬಹಳ ಮಹತ್ವದ್ದಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತೊಮ್ಮೆ ಸಂಘರ್ಷ ನಿಲ್ಲಿಸುವ ಪ್ರಧಾನಿ ಮೋದಿ ಪಾತ್ರದ ಕುರಿತಂತೆ ಪುನರುಚ್ಚರಿಸಿದ್ದಾರೆ.

ಪ್ರಧಾನಿ ಮೋದಿಯವರು ಉಕ್ರೇನ್ ಮತ್ತು ರಷ್ಯಾ ನಡುವಿನ ಶಾಂತಿ ಮಾತುಕತೆಗಳನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಝೆಲೆನ್ಸ್ಕಿ ತಮ್ಮ ಬಲವಾದ ಸುಳಿವು ನೀಡಿದರು. ಭಾರತದಿಂದ ಇದು ನಿಸ್ಸಂದೇಹವಾಗಿ ಸಂಭವಿಸಬಹುದು ಮತ್ತು ಪ್ರಧಾನಿ ಮೋದಿ ಅವರು ಅದನ್ನು ನಿಜವಾಗಿ ಮಾಡಬಹುದು. ಈ ಶಾಂತಿ ಮಾತುಕತೆಯಲ್ಲಿ ಭಾರತದ ಮಧ್ಯಸ್ಥಿತಿಕೆ ತುಂಬಾ ಮುಖ್ಯವಾಗಿರುತ್ತದೆ. ಅದರಲ್ಲೂ ಈ ಶಾಂತಿ ಮಾತುಕತೆಯನ್ನು ನವದೆಹಲಿ ಮಾಡಬೇಕು ಎಂದು ಹೇಳಿದ್ದಾರೆ. ಇದರ ಜತೆಗೆ ಈ ಶಾಂತಿ ಮಾತುಕತೆಯ ಸ್ವರೂಪವು ಉಕ್ರೇನ್‌ನ ಚೌಕಟ್ಟಿನೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದ್ದಾರೆ. ಏಕೆಂದರೆ ಮೋದಿ ಭೇಟಿ ನಂತರ ಸಂಘರ್ಷ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಶಾಂತಿ ಮಾತುಕತೆಗೆ ವೇದಿಕೆ ಸಿದ್ಧ ಮಾಡಬೇಕಿದೆ. ಅದು ಅವರಿಂದ ಮಾತ್ರ ಸಾಧ್ಯ. ಈ ಮೂಲಕ ಯುದ್ಧಕ್ಕೆ ಅವರೇ ಕೊನೆ ಹಾಡಬೇಕು ಎಂದು ಹೇಳಿದರು. ಇದೀಗ ಈ ಹೇಳಿಕೆ ಎಲ್ಲ ಕಡೆ ವೈರಲ್​​ ಆಗುತ್ತಿದೆ. ಹಾಗೂ ಚರ್ಚೆಗೆ ವೇದಿಕೆಯಾಗಿ ನಿಂತಿದೆ ಎಂದು ಹೇಳಿದರು. ಇದರ ಜತೆಗೆ ಮಾಸ್ಕೋದ ಮಿಲಿಟರಿ ಕಾರ್ಯಾಚರಣೆಗಳನ್ನು ಮೊಟಕುಗೊಳಿಸುವ ಆರ್ಥಿಕ ಮತ್ತು ಕಾರ್ಯತಂತ್ರದ ನಿರ್ಬಂಧಗಳ ಬಗ್ಗೆ ಗಮನಿಸಬೇಕು ಎಂದರು.

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಕೆಲಸ ಮಾಡಲು ಸಿದ್ಧ ಎಂಬ ಮೋದಿ ಹೇಳಿದ್ದಾರೆ. ಆದರೆ ಹೇಳಿಕೆ ಸಾಕಾಗುವುದಿಲ್ಲ ಆ ಬಗ್ಗೆ ಕೆಲಸವನ್ನು ಮಾಡಬೇಕು. ಮೋದಿ ನಿಜವಾಗಿ ಬಹಳ ದೊಡ್ಡ ದೇಶದ ಪ್ರಧಾನಿ... ಇಂತಹ ದೇಶ ನಮಗೆ ಯುದ್ಧದ ಅಂತ್ಯದಲ್ಲಿ ಆಸಕ್ತಿ ಇದೆ ಎಂದು ಸುಮ್ಮನೆ ಹೇಳಿರಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT