ಅಮೆರಿಕಾದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌  
ವಿದೇಶ

ನಿಜ್ಜರ್ ಹತ್ಯೆಯಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ ಕಳವಳಕಾರಿ ಎಂದ ಅಮೆರಿಕಾ

ಕೆನಡಾದಲ್ಲಿರುವ ಸಿಖ್‌ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಕೈಗೊಳ್ಳಲು, ಬೆದರಿಕೆ ಹಾಕಲು ಮತ್ತು ಗುಪ್ತಚರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಅಮಿತ್‌ ಶಾ ಆದೇಶಿಸಿದ್ದರು.

ವಾಷಿಂಗ್ಟನ್‌: ಸಿಖ್‌ ಪ್ರತ್ಯೇಕತಾವಾದಿ ನಿಜ್ಜರ್ ವಿರುದ್ಧ ಸಂಚು ರೂಪಿಸುವಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವಿದೆ ಎನ್ನುವ ಕೆನಡಾ ಸರ್ಕಾರದ ಆರೋಪ ‘ಕಳವಳಕಾರಿ’ಯಾಗಿದೆ ಎಂದು ಅಮೆರಿಕಾ ಪ್ರತಿಕ್ರಿಯಿಸಿದೆ.

ಕೆನಡಾ ಸರ್ಕಾರ ಮಾಡಿರುವ ಆರೋಪಗಳು ಕಳವಳಕಾರಿಯಾಗಿವೆ. ಈ ಆರೋಪಗಳ ಬಗ್ಗೆ ಕೆನಡಾ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇವೆ’ ಎಂದು ಅಮೆರಿಕಾದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಅವರು ಹೇಳಿದ್ದಾರೆ.

ಕೆನಡಾದಲ್ಲಿರುವ ಸಿಖ್‌ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಕೈಗೊಳ್ಳಲು, ಬೆದರಿಕೆ ಹಾಕಲು ಮತ್ತು ಗುಪ್ತಚರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಅಮಿತ್‌ ಶಾ ಆದೇಶಿಸಿದ್ದರು ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್‌ ಮಾರಿಸನ್‌ ಅವರು, ಸಂಸತ್‌ ಸದಸ್ಯರನ್ನು ಒಳಗೊಂಡ ರಾಷ್ಟ್ರೀಯ ಭದ್ರತಾ ಸಮಿತಿಗೆ ಈ ವಿಷಯ ತಿಳಿಸಿದ್ದರು.

ಈ ವಿಷಯದ ಕುರಿತ ಆರೋಪಗಳ ವರದಿಯನ್ನು ಮೊದಲ ಬಾರಿಗೆ ವಾಷಿಂಗ್ಟನ್‌ ಪೋಸ್ಟ್‌ ಪ್ರಕಟಿಸಿತ್ತು. ಆ ಪತ್ರಿಕೆಯ ವರದಿಗಾರನಿಗೆ ಈ ವಿಷಯವನ್ನು ನಾನೇ ಖಚಿತಪಡಿಸಿದ್ದೆ’ ಎಂದು ಮಾರಿಸನ್‌ ಹೇಳಿದ್ದಾರೆ.

ಪತ್ರಕರ್ತ ನನಗೆ ಕರೆ ಮಾಡಿ, ಅದು ಆ ವ್ಯಕ್ತಿಯೇ (ಅಮಿತ್‌ ಶಾ) ಎಂದು ಕೇಳಿದರು. ನಾನು, ಹೌದು ಎಂದು ಖಚಿತಪಡಿಸಿದ್ದೆ’ ಎಂದು ಮಾರಿಸನ್‌ ಸಮಿತಿಗೆ ಮಾಹಿತಿ ನೀಡಿದ್ದಾರೆ. ಆದರೆ, ಅಮಿತ್‌ ಶಾ ಅವರ ಒಳಗೊಳ್ಳುವಿಕೆ ಕುರಿತು ಕೆನಡಾಗೆ ಹೇಗೆ ತಿಳಿದಿತ್ತು ಎಂಬುದನ್ನು ಅವರು ತಿಳಿಸಿಲ್ಲ.

ಇನ್ನು ಡೇವಿಡ್ ಮಾರಿಸನ್ ಆರೋಪಕ್ಕೆ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇನ್ನೂ ಪ್ರತಿಕ್ರಿಯಿಸಿಲ್ಲ.

ಭಾರತದ ಏಜಂಟರು ಕೆನಡಾದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿದ್ಧಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಅಕ್ಟೋಬರ್ 14ರಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಟ್ರುಡೊ, ಭಾರತದ ವಿರುದ್ದ ಸರಣಿ ಆರೋಪಗಳನ್ನು ಮಾಡಿದ್ದರು.

ಭಾರತ ತನ್ನ ರಾಜತಾಂತ್ರಿಕರನ್ನು ಬಳಸಿಕೊಂಡು ಸಂಘಟಿತ ಅಪರಾಧಗಳ ಮೂಲಕ ಕೆನಡಾ ಪ್ರಜೆಗಳ ಮೇಲೆ ದಾಳಿ ಮಾಡುತ್ತಿದೆ. ಹಿಂಸಾಚಾರ ಮತ್ತು ಹತ್ಯೆಗಳ ಮೂಲಕ ಇಲ್ಲಿನ ಜನರಲ್ಲಿ ಅಸುರಕ್ಷತೆಯ ಭಾವನೆ ಮೂಡಿಸಿದೆ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT