ಸಾಂದರ್ಭಿಕ ಚಿತ್ರ 
ವಿದೇಶ

ಬಾಂಗ್ಲಾದೇಶದಲ್ಲಿ ಬಲವಂತದಿಂದ 49 ಅಲ್ಪಸಂಖ್ಯಾತ ಶಿಕ್ಷಕರ ರಾಜೀನಾಮೆ

76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆಯನ್ನು ಎದುರಿಸಿದ್ದು, ಅವರಲ್ಲಿ 49 ಮಂದಿಯಿಂದ ರಾಜೀನಾಮೆ ಪಡೆಯಲಾಗಿದೆ.

ಢಾಕಾ: ಶೇಖ್ ಹಸೀನಾ ನೇತೃತ್ವದ ಸರ್ಕಾರ ಆಗಸ್ಟ್ 5 ರಂದು ಪತನವಾದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಕನಿಷ್ಠ 49 ಶಿಕ್ಷಕರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಹಿಂಸಾಚಾರ ಪೀಡಿತ ರಾಷ್ಟ್ರದ ಅಲ್ಪಸಂಖ್ಯಾತ ಸಂಘಟನೆಯೊಂದು ತಿಳಿಸಿದೆ.

ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಓಕ್ಯ ಪರಿಷತ್ತಿನ ವಿದ್ಯಾರ್ಥಿ ವಿಭಾಗವಾದ ಬಾಂಗ್ಲಾದೇಶ ಛತ್ರ ಓಕ್ಯ ಪರಿಷತ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದೆ ಎಂದು ದಿ ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.

76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆ ಎದುರಿಸಿದ್ದಾರೆ.ಅವರಲ್ಲಿ 49 ಮಂದಿಯಿಂದ ಬಲವಂತದಿಂದ ರಾಜೀನಾಮೆ ಪಡೆಯಲಾಗಿದೆ. ಆದಾಗ್ಯೂ, 19 ಮಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ, ಲೂಟಿ, ಮಹಿಳೆಯರ ಮೇಲೆ ಹಲ್ಲೆ, ದೇವಸ್ಥಾನಗಳ ಧ್ವಂಸ, ಮನೆ ಮತ್ತು ಅಂಗಡಿಗಳ ಮೇಲೆ ಬೆಂಕಿ, ದಾಳಿ ಮತ್ತು ಹತ್ಯೆಗಳು ನಡೆದಿವೆ ಎಂದು ಸರ್ಕಾರ್ ಹೇಳಿದರು.

ಕಳೆದ ತಿಂಗಳು ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರ ವಿರುದ್ಧ ಹಲವಾರು ಹಿಂಸಾಚಾರದ ಘಟನೆಗಳು ನಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT