ಸಾಂದರ್ಭಿಕ ಚಿತ್ರ 
ವಿದೇಶ

ಬಾಂಗ್ಲಾದೇಶದಲ್ಲಿ ಬಲವಂತದಿಂದ 49 ಅಲ್ಪಸಂಖ್ಯಾತ ಶಿಕ್ಷಕರ ರಾಜೀನಾಮೆ

76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆಯನ್ನು ಎದುರಿಸಿದ್ದು, ಅವರಲ್ಲಿ 49 ಮಂದಿಯಿಂದ ರಾಜೀನಾಮೆ ಪಡೆಯಲಾಗಿದೆ.

ಢಾಕಾ: ಶೇಖ್ ಹಸೀನಾ ನೇತೃತ್ವದ ಸರ್ಕಾರ ಆಗಸ್ಟ್ 5 ರಂದು ಪತನವಾದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಕನಿಷ್ಠ 49 ಶಿಕ್ಷಕರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಹಿಂಸಾಚಾರ ಪೀಡಿತ ರಾಷ್ಟ್ರದ ಅಲ್ಪಸಂಖ್ಯಾತ ಸಂಘಟನೆಯೊಂದು ತಿಳಿಸಿದೆ.

ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಓಕ್ಯ ಪರಿಷತ್ತಿನ ವಿದ್ಯಾರ್ಥಿ ವಿಭಾಗವಾದ ಬಾಂಗ್ಲಾದೇಶ ಛತ್ರ ಓಕ್ಯ ಪರಿಷತ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದೆ ಎಂದು ದಿ ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.

76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆ ಎದುರಿಸಿದ್ದಾರೆ.ಅವರಲ್ಲಿ 49 ಮಂದಿಯಿಂದ ಬಲವಂತದಿಂದ ರಾಜೀನಾಮೆ ಪಡೆಯಲಾಗಿದೆ. ಆದಾಗ್ಯೂ, 19 ಮಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ, ಲೂಟಿ, ಮಹಿಳೆಯರ ಮೇಲೆ ಹಲ್ಲೆ, ದೇವಸ್ಥಾನಗಳ ಧ್ವಂಸ, ಮನೆ ಮತ್ತು ಅಂಗಡಿಗಳ ಮೇಲೆ ಬೆಂಕಿ, ದಾಳಿ ಮತ್ತು ಹತ್ಯೆಗಳು ನಡೆದಿವೆ ಎಂದು ಸರ್ಕಾರ್ ಹೇಳಿದರು.

ಕಳೆದ ತಿಂಗಳು ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರ ವಿರುದ್ಧ ಹಲವಾರು ಹಿಂಸಾಚಾರದ ಘಟನೆಗಳು ನಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT