ಪ್ರತ್ಯಕ್ಷ ದೃಶ್ಯ 
ವಿದೇಶ

ಸೆಂಟ್ರಲ್ ಜೈಲಿನಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕನಿಷ್ಠ 129 ಕೈದಿಗಳು ಸಾವು, 59 ಮಂದಿಗೆ ಗಾಯ!

ಕೈದಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದರು. ಇನ್ನು ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಸಿರುಗಟ್ಟಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ (DRC) ರಾಜಧಾನಿ ಮಕಾಲಾ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಕನಿಷ್ಠ 129 ಕೈದಿಗಳು ಸಾವನ್ನಪ್ಪಿದ್ದು 59 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರ ಪ್ರಕಟಿಸಿದೆ.

ಉಪಪ್ರಧಾನಿ ಮತ್ತು ಆಂತರಿಕ ಮತ್ತು ಭದ್ರತಾ ಸಚಿವ ಜಾಕ್ವೆಮನ್ ಶಬಾನಿ, ತಾತ್ಕಾಲಿಕ ಸಾವಿನ ಸಂಖ್ಯೆ 129ಕ್ಕೆ ತಲುಪಿದೆ. ಕೈದಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದರು. ಇನ್ನು ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಸಿರುಗಟ್ಟಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಕನಿಷ್ಠ 59 ದಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಸೋಮವಾರ ಮುಂಜಾನೆ ಮಕಾಲಾ ಕೇಂದ್ರ ಕಾರಾಗೃಹದಲ್ಲಿ ಹಲವು ಗಂಟೆಗಳ ಕಾಲ ಗುಂಡಿನ ಸದ್ದು ಕೇಳಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಳೆದ ಜುಲೈನಲ್ಲಿ ಸಚಿವ ಕಾನ್‌ಸ್ಟೆಂಟ್ ಮುತಂಬಾ ಅವರು ಜನಸಂದಣಿಯನ್ನು ಕಡಿಮೆ ಮಾಡಲು ಮಕಾಲಾ ಸೆಂಟ್ರಲ್ ಜೈಲಿನಲ್ಲಿರುವ 1,284 ಕೈದಿಗಳನ್ನು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದರು.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ವರದಿಗಳ ಪ್ರಕಾರ, 1,500 ಕೈದಿಗಳ ಸಾಮರ್ಥ್ಯವನ್ನು ಹೊಂದಿದ್ದ ಜೈಲಿನಲ್ಲಿ 12,000ಕ್ಕೂ ಹೆಚ್ಚು ಕೈದಿಗಳಿದ್ದಾರೆ. ಅವರಲ್ಲಿ ಹೆಚ್ಚಿನವರು ವಿಚಾರಣಾಧೀನ ಕೈದಿಗಳಾಗಿದ್ದಾರೆ.

2017ರಲ್ಲಿ ಸಂಘಟನೆಯೊಂದು ಜೈಲಿನ ಮೇಲೆ ದಾಳಿ ಮಾಡಿ ಡಜನ್‌ಗಟ್ಟಲೆ ಕೈದಿಗಳು ಜೈಲಿನಿಂದ ತಪ್ಪಿಸಿಕೊಳ್ಳುವಂತೆ ಮಾಡಿತ್ತು. ಮಕಾಲಾ ಸೆಂಟ್ರಲ್ ಜೈಲಿನಲ್ಲಿ ಹಿಂದೆ ಹಲವು ಜೈಲಿನಿಂದ ಪರಾರಿಯಾದ ಪ್ರಕರಣಗಳು ನಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT