ಬಾಂಗ್ಲಾದೇಶ ಮತ್ತು ಭಾರತ ವ್ಯಾಪಾರ ವಹಿವಾಟು 
ವಿದೇಶ

Bangladesh ನೆರವಿಗೆ ಧಾವಿಸಿದ ಭಾರತ, ವ್ಯಾಪಾರ-ವಹಿವಾಟು ಪುನಾರಂಭ!

ಮೂಲಗಳ ಪ್ರಕಾರ "ಸುಮಾರು 60 ಉಡುಪು ತಯಾರಿಕಾ ಘಟಕಗಳನ್ನು ಮುಚ್ಚಲಾಗಿದೆ. ಇದಲ್ಲದೆ, ರಾಜಧಾನಿ ಢಾಕಾದಲ್ಲಿ ಪ್ರತಿಭಟನೆಗಳು ಮತ್ತು ಘರ್ಷಣೆಗಳು ಮುಂದುವರೆದಿವೆ.

ನವದೆಹಲಿ: ಆಂತರಿಕ ಪ್ರತಿಭಟನೆ, ಸರ್ಕಾರ ಬದಲಾವಣೆಯಿಂದ ಆರ್ಥಿಕ ಕುಸಿತದಿಂದ ತತ್ತರಿಸಿ ಹೋಗಿದ್ದ ಬಾಂಗ್ಲಾದೇಶದ ನೆರವಿಗೂ ಕೊನೆಗೂ ಭಾರತ ಧಾವಿಸಿದ್ದು, ಉಭಯ ದೇಶಗಳ ನಡುವೆ ಸ್ಥಗಿತಗೊಂಡಿದ್ದ ವ್ಯಾಪಾರ-ವಹಿವಾಟು ಬುಧವಾರದಿಂದ ಪುನಾರಂಭಗೊಂಡಿದೆ.

"ಹಿಂಸಾಚಾರದಿಂದಾಗಿ 47 ದಿನಗಳ ಅನಿಶ್ಚಿತತೆಯ ನಂತರ, ಭಾರತ ಮತ್ತು ಬಾಂಗ್ಲಾದೇಶದ ನಡುವೆ ಬೆನಾಪೋಲ್ ಬಂದಿರನ ಮೂಲಕ ವ್ಯಾಪಾರ ಪುನರಾರಂಭವಾಗಿದ್ದು, ಸರಬರಾಜು ಕೊರತೆ, ಹೆಚ್ಚಿನ ಹಣದುಬ್ಬರ ಮತ್ತು ಜೀವನೋಪಾಯ ನಷ್ಟದಿಂದಾಗಿ ತತ್ತರಿಸಿ ಹೋಗಿದ್ದ ಬಾಂಗ್ಲಾದೇಶದ ವ್ಯಾಪಾರಿಗಳು ಭಾರತದ ಈ ಕ್ರಮವನ್ನು ಸ್ವಾಗತಿಸಿದ್ದಾರೆ" ಎಂದು ಢಾಕಾದ ಮೂಲಗಳು ತಿಳಿಸಿವೆ.

ಬಾಂಗ್ಲಾದೇಶದೊಂದಿಗಿನ ವ್ಯಾಪಾರದ ಪುನರಾರಂಭದ ಕುರಿತು ಯಾವುದೇ ಅಧಿಕೃತ ಮಾಹಿತಿ ಭಾರತ ಸರ್ಕಾರದಿಂದ ಇನ್ನೂ ಬಂದಿಲ್ಲ. ಆದರೆ 'ಬಾಂಗ್ಲಾದೇಶವು ಹೊಸ ಸರ್ಕಾರದೊಂದಿಗೆ ಬದಲಾವಣೆಗೆ ಒಳಗಾಗುತ್ತಿದ್ದು, ಮಾಲ್ಡೀವ್ಸ್‌ನಂತೆಯೇ ಭಾರತದೊಂದಿಗಿನ ಅದರ ಸಂಬಂಧವು ಸಮಯದೊಂದಿಗೆ ಫಲಪ್ರದವಾಗಲಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇತ್ತೀಚೆಗೆ ಹೇಳಿದ್ದರು.

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ನೇತೃತ್ವದ ಯೋಜನೆಗಳು ಸದ್ಯಕ್ಕೆ ಸ್ಥಗಿತಗೊಂಡಿವೆ. ಬಾಂಗ್ಲಾದೇಶದ ಮೂಲಗಳು ಇದು ದೀರ್ಘಾವಧಿಯ ಬೆಳವಣಿಗೆಯಾಗಿರಬಹುದು ಎಂದು ಹೇಳಿದರೆ, ಸರಿಯಾದ ಸಮಯದಲ್ಲಿ ಅವು ಪುನರಾರಂಭಗೊಳ್ಳುತ್ತವೆ ಎಂಬ ಆಶಾವಾದವನ್ನು ಭಾರತ ಹೊಂದಿದೆ. ಬಾಂಗ್ಲಾದೇಶದಲ್ಲಿ ಆರ್ಥಿಕ ಹಿನ್ನಡೆ ಉಂಟಾಗಿದ್ದು, ವೇತನ ಹೆಚ್ಚಳಕ್ಕಾಗಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಇದು ಹಲವು ಕೈಗಾರಿಕೆಗಳನ್ನು ಮುಚ್ಚಲು ಕಾರಣವಾಗಿದೆ.

ಮೂಲಗಳ ಪ್ರಕಾರ "ಸುಮಾರು 60 ಉಡುಪು ತಯಾರಿಕಾ ಘಟಕಗಳನ್ನು ಮುಚ್ಚಲಾಗಿದೆ. ಇದಲ್ಲದೆ, ರಾಜಧಾನಿ ಢಾಕಾದಲ್ಲಿ ಪ್ರತಿಭಟನೆಗಳು ಮತ್ತು ಘರ್ಷಣೆಗಳು ಮುಂದುವರೆದಿವೆ. ಇಂದು ಎರಡು ವಿಭಿನ್ನ ಕಾಲೇಜುಗಳಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆಗಳು ನಡೆದಿದ್ದು, ಇಲ್ಲಿ 150 ಮಂದಿ ಗಾಯಗೊಂಡಿದ್ದಾರೆ. ಜಿನೀವಾ ಶಿಬಿರದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಈ ಎಲ್ಲ ಬೆಳವಣಿಗೆಗಳು ಬಾಂಗ್ಲಾದೇಶ ಸಹಜ ಸ್ಥಿತಿಗೆ ಬರಲು ಬಹಳ ದೂರದ ಹಾದಿ ಸಾಗಬೇಕಿದೆ ಎಂದು ಢಾಕಾದ ರಾಜಕೀಯ ನಿರೂಪಕ ಪ್ರೊಫೆಸರ್ ನಜ್ಮುಲ್ ಅಹ್ಸಾನ್ ಕಲೀಮುಲ್ಲಾ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

'Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

T20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಒಂದು ಪಂದ್ಯ ಆಡದಿರಬಹುದೇ? ICC ನಿಯಮ ಏನು, ಆಗುವ ನಷ್ಟ ಎಷ್ಟು ಗೊತ್ತಾ!

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ತಗ್ಗಿದ ಅಪರಾಧ ಪ್ರಮಾಣ: ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!

SCROLL FOR NEXT