ಅಮೆರಿಕ ಪ್ರವಾಸದಲ್ಲಿ ರಾಹುಲ್ ಗಾಂಧಿ 
ವಿದೇಶ

Rahul Gandhi ಅಮೆರಿಕ ಪ್ರವಾಸ; ವಿಮಾನನಿಲ್ದಾಣದಲ್ಲಿ ಸ್ವಾಗತ ಕೋರಿದ ಸ್ಯಾಮ್‌ ಪಿತ್ರೋಡಾ

ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಇಂದು (ಭಾನುವಾರ) ಟೆಕ್ಸಾಸ್‌ನ ಡಲ್ಲಾಸ್‌ಗೆ ಆಗಮಿಸಿದ್ದಾರೆ.

ವಾಷಿಂಗ್ಟನ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದು, ಅವರಿಗೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ವಾಗತ ಕೋರಿದರು.

ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಇಂದು (ಭಾನುವಾರ) ಟೆಕ್ಸಾಸ್‌ನ ಡಲ್ಲಾಸ್‌ಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಸೇರಿದಂತೆ ಅನಿವಾಸಿ ಭಾರತೀಯರ ತಂಡದ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ‘ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿಟ್ಟಿನಲ್ಲಿ ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇನೆ. ನನಗೆ ದೊರೆತ ಆತ್ಮೀಯ ಸ್ವಾಗತದಿಂದ ನಾನು ನಿಜವಾಗಿಯೂ ಸಂತೋಷಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಈ ಭೇಟಿಯ ಸಮಯದಲ್ಲಿ ನಮ್ಮ ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅರ್ಥಪೂರ್ಣ ಚರ್ಚೆಗಳು ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರು ವಾಷಿಂಗ್ಟನ್‌, ಡಲ್ಲಾಸ್‌ ನಗರಗಳಲ್ಲಿ, ಜಾರ್ಜ್‌ಟೌನ್‌ ಮತ್ತು ಟೆಕ್ಸಾಸ್‌ ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 2024ರ ಲೋಕಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಅವರು ಅಮೆರಿಕಗೆ ಭೇಟಿ ನೀಡುತ್ತಿದ್ದಾರೆ. ಲೋಕಸಭಾ ವಿಪಕ್ಷ ನಾಯಕರೂ ಆಗಿರುವ ರಾಹುಲ್ ಗಾಂಧಿ, ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರದಲ್ಲಿ ಸೆಪ್ಟೆಂಬರ್ 8 ರಂದು ಇರಲಿದ್ದಾರೆ. ಬಳಿಕ ಸೆಪ್ಟೆಂಬರ್ 9 ಹಾಗೂ 10 ರಂದು ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ರಾಹುಲ್ ಗಾಂಧಿ ಇರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT