ಮಾಲ್ಡೀವ್ಸ್-ಚೀನಾ ದ್ವಿಪಕ್ಷೀಯ ಮಾತುಕತೆ 
ವಿದೇಶ

ಮಾಲ್ಡೀವ್ಸ್-ಚೀನಾ ದ್ವಿಪಕ್ಷೀಯ ಮಾತುಕತೆ: ಸೇನಾ ಸಹಕಾರ ಒಪ್ಪಂದಕ್ಕೆ ಅನುಮೋದನೆ

ಮಾಲ್ಡೀವ್ಸ್ ಮತ್ತು ಚೀನಾ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದವು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಬೀಜಿಂಗ್: ಭಾರತದ ಜೊತೆ ಸಂಬಂಧ ಹಳಸಿದ ಬಳಿಕ ಚೀನಾಕ್ಕೆ ಹತ್ತಿರವಾರುವ ಮಾಲ್ಡೀವ್ಸ್ ಇದೀಗ ಆ ದೇಶದೊಂದಿಗೆ ಸೇರಿ ಸೇನಾ ಸಹಕಾರ ಒಪ್ಪಂದಕ್ಕೆ ಅನುಮೋದನೆ ನೀಡಿದೆ.

ಹೌದು... ಮಾಲ್ಡೀವ್ಸ್ ಮತ್ತು ಚೀನಾ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದವು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ಕುರಿತು X ನಲ್ಲಿನ ಪೋಸ್ಟ್‌ ಮಾಡಲಾಗಿದ್ದು, ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯವು 11 ನೇ ಬೀಜಿಂಗ್ ಕ್ಸಿಯಾಂಗ್‌ಶಾನ್ ಫೋರಮ್‌ನಲ್ಲಿ ಮಾಲ್ಡೀವ್ಸ್ ರಕ್ಷಣಾ ಸಚಿವ ಘಾಸನ್ ಮೌಮೂನ್ ಮತ್ತು ಚೀನಾ ಸಹವರ್ತಿ ಅಡ್ಮಿರಲ್ ಡಾಂಗ್ ಜುನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು ಎಂದು ಪೋಸ್ಟ್ ಮಾಡಿದೆ.

ಅಲ್ಲದೆ 'ಸಭೆಯಲ್ಲಿ ಉಭಯ ದೇಶಗಳ ನಡುವೆ ರಕ್ಷಣಾ ಸಹಕಾರವನ್ನು ಬಲಪಡಿಸುವ ಮಾರ್ಗಗಳ ಕುರಿತು ಉಭಯ ಸಚಿವರು ಚರ್ಚಿಸಿದರು. ಚೀನಾದ ಮಾಲ್ಡೀವ್ಸ್‌ನ ರಾಯಭಾರಿ ಡಾ.ಫಜೀಲ್ ನಜೀಬ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು' ಎಂದು ಚರ್ಚೆಯ ವಿವರಗಳನ್ನು ಬಹಿರಂಗಪಡಿಸದೆ ಸಭೆ ಕುರಿತು ಮಾಹಿತಿ ನೀಡಿದೆ.

ಮಾಲ್ಡೀವ್ಸ್ ಮತ್ತು ಚೀನಾ ಈ ಹಿಂದೆ ಮಿಲಿಟರಿ ಸಂಬಂಧಗಳನ್ನು ಬಲಪಡಿಸಲು ಮಾತುಕತೆ ನಡೆಸಿದ್ದವು. ಮಾರ್ಚ್‌ನಲ್ಲಿ, ಮಾಲ್ಡೀವ್ಸ್ ಮತ್ತು ಚೀನಾ ಮಾಲ್ಡೀವ್ಸ್ ಮಿಲಿಟರಿ ಮತ್ತು ಭದ್ರತಾ ಸೇವೆಗಳಿಗೆ ಮಿಲಿಟರಿ ನೆರವು ನೀಡುವ ಒಪ್ಪಂದಕ್ಕೆ ಸಹಿ ಹಾಕಿದವು ಹೇಳಲಾಗಿದೆ. ಈ ಒಪ್ಪಂದದ ಅಡಿಯಲ್ಲಿ, ಚೀನಾ ಮಾಲ್ಡೀವ್ಸ್‌ಗೆ ಮಿಲಿಟರಿ ಉಪಕರಣಗಳು ಮತ್ತು ತರಬೇತಿಯನ್ನು ನೀಡುತ್ತದೆ ಎಂದು ಅಧ್ಯಕ್ಷ ಮೊಹಮ್ಮದ್ ಮುಯಿಝು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

"no friendship only business; ತೈಲ ಬೇಕಾದರೆ..: ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

News wrap 10-03-2026| Israel Iran conflict: ಎಲ್ ಪಿಜಿ ಪೂರೈಕೆ ಕೊರತೆ, ಒತ್ತಡದಲ್ಲಿ ಹೊಟೆಲ್ ಉದ್ಯಮ, ಬ್ಯಾಡಗಿ ಮೆಣಸಿನಕಾಯಿ ವರ್ತಕರಿಗೆ ಸಂಕಷ್ಟ; ಮುಷ್ಕರ: ಮಾರ್ಚ್ 11ರಿಂದ ಆರೋಗ್ಯ ಸೇವೆಗಳು ಸ್ಥಗಿತ: ಸಮಸ್ಯೆ ಬಗೆಹರಿಸಲಿದ್ದೇವೆ- ದಿನೇಶ್ ಗುಂಡೂರಾವ್

ಹನಿಟ್ರ್ಯಾಪ್‌: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್‌ ಡಿಸೈನರ್‌ ಬಂಧನ!

SCROLL FOR NEXT