ಇಸ್ರೇಲ್ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ online desk
ವಿದೇಶ

"ಯುದ್ಧದ ಹೊಸ ಹಂತ ಆರಂಭ": ಪೇಜರ್ ಸ್ಫೋಟದ ಹಿಂದೆ ಇರುವುದು ತಾನೇ ಎಂದು ಸುಳಿವು ನೀಡಿತಾ ಇಸ್ರೇಲ್?

ಸಶಸ್ತ್ರ ಗುಂಪು ಹೆಜ್ಬೊಲ್ಲಾಹ್ ಬಳಸಿದ ಪೇಜರ್ ಗಳು 9 ಜನರನ್ನು ಕೊಂದು, ದೇಶದಾದ್ಯಂತ ಸ್ಫೋಟಿಸಿದ ಒಂದು ಗಂಟೆಯ ನಂತರ ಇಸ್ರೇಲ್ನಿಂದ ಈ ಹೇಳಿಕೆ ಬಂದಿದೆ.

ಟೆಲ್ ಅವೀವ್: ಲೆಬನಾನ್ ಹಾಗೂ ಸಿರಿಯಾಗಳಲ್ಲಿ ಹೆಜ್ಬೊಲ್ಲಾ ಸಂಘಟನೆಯ ನೂರಾರು ಮಂದಿ ಪೇಜರ್, ವಾಕಿ-ಟಾಕಿ ಸ್ಫೋಟಗೊಂಡು ತಮ್ಮ ಅಂಗಾಂಗಗಳನ್ನು ಕಳೆದುಕೊಂಡಿದ್ದಾರೆ. ಈ ಗೌಪ್ಯ ದಾಳಿಯ ಹಿಂದೆ ಇಸ್ರೇಲ್ ಕೈವಾಡ ಇರುವ ಶಂಕೆ ವ್ಯಕ್ತವಾಗತೊಡಗಿದೆ.

ಇದಕ್ಕೆ ಪೂರಕವೆಂಬಂತೆ, ಸ್ಫೋಟಗಳು ಸಂಭವಿಸುತ್ತಿರುವ ಬೆನ್ನಲ್ಲೇ ಇಸ್ರೇಲ್ ರಕ್ಷಣಾ ಸಚಿವರು ಮಾರ್ಮಿಕ ಹೇಳಿಕೆ ನೀಡಿದ್ದಾರೆ.

ಯುದ್ಧದ ಹೊಸ ಹಂತ ಆರಂಭವನ್ನು ಇಸ್ರೇಲ್ ರಕ್ಷಣಾ ಸಚಿವ ಯೋವ್ ಗ್ಯಾಲಂಟ್, ಸೇನಾ ಪಡೆಗಳೊಂದಿಗೆ ಮಾತನಾಡುತ್ತಾ, ಇಸ್ರೇಲ್ ಸೇನೆ ಹಾಗೂ ಭದ್ರತಾ ಏಜೆನ್ಸಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಯೋವ್ ಗ್ಯಾಲಂಟ್, ಎಲೆಕ್ಟ್ರಾನಿಕ್ ಉಪಕರಣಗಳ ಸ್ಫೋಟ ಪ್ರಕರಣಗಳನ್ನು ಎಲ್ಲಿಯೂ ಉಲ್ಲೇಖಿಸಿಲ್ಲವಾದರೂ, ಫಲಿತಾಂಶಗಳು ಬಹಳ ಪ್ರಭಾವಶಾಲಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗಾಜಾದಲ್ಲಿ ಹಮಾಸ್ ಉಗ್ರಗಾಮಿಗಳ ವಿರುದ್ಧದ ತಿಂಗಳುಗಳ ಯುದ್ಧದ ನಂತರ, "ಸಂಪನ್ಮೂಲಗಳು ಮತ್ತು ಬಲಗಳನ್ನು ತಿರುಗಿಸುವ ಮೂಲಕ ಗುರುತ್ವಾಕರ್ಷಣೆಯ ಕೇಂದ್ರ ಉತ್ತರಕ್ಕೆ ಸ್ಥಳಾಂತರಗೊಳ್ಳುತ್ತಿದೆ" ಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ. "ನಾವು ಯುದ್ಧದಲ್ಲಿ ಹೊಸ ಹಂತದ ಪ್ರಾರಂಭದಲ್ಲಿದ್ದೇವೆ, ಇದಕ್ಕೆ ಧೈರ್ಯ, ನಿರ್ಣಯ ಮತ್ತು ಪರಿಶ್ರಮದ ಅಗತ್ಯವಿದೆ" ಎಂದು ಅವರು ಹೇಳಿದರು.

ಸಶಸ್ತ್ರ ಗುಂಪು ಹೆಜ್ಬೊಲ್ಲಾಹ್ ಬಳಸಿದ ಪೇಜರ್ ಗಳು 9 ಜನರನ್ನು ಕೊಂದು, ದೇಶದಾದ್ಯಂತ ಸ್ಫೋಟಿಸಿದ ಒಂದು ಗಂಟೆಯ ನಂತರ ಇಸ್ರೇಲ್ನಿಂದ ಈ ಹೇಳಿಕೆ ಬಂದಿದೆ.

ಇದಷ್ಟೇ ಅಲ್ಲದೇ ಹೊಸದಾಗಿ ವಾಕಿ-ಟಾಕಿ ಸ್ಫೋಟಗಳು 14 ಮಂದಿಯನ್ನು ಕೊಂದು 300 ಕ್ಕೂ ಹೆಚ್ಚು ಜನರ ಗಾಯಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT