FATF ಸಭೆ online desk
ವಿದೇಶ

ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆ: ಭಾರತದ ಕ್ರಮಕ್ಕೆ FATF ಮೆಚ್ಚುಗೆ!

ಭಾರತದಲ್ಲಿನ ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆಯನ್ನು ಶ್ಲಾಘಿಸಿರುವ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ದೇಶದ ವ್ಯವಸ್ಥೆ ಪರಿಣಾಮಕಾರಿಯಾಗಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಹಾಗೂ ಭಯೋತ್ಪಾದಕರಿಗೆ ಸಿಗುವ ಹಣಕಾಸು ನೆರವಿಗೆ ತಡೆ ಹಾಕುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ FATF ಭಾರತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಭಾರತದಲ್ಲಿನ ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆಯನ್ನು ಶ್ಲಾಘಿಸಿರುವ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ದೇಶದ ವ್ಯವಸ್ಥೆ ಪರಿಣಾಮಕಾರಿಯಾಗಿದೆ, ಆದರೆ ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮಗಳನ್ನು ಬಿಗಿಗೊಳಿಸಲು ಮತ್ತಷ್ಟು ಸುಧಾರಣೆಗಳ ಅಗತ್ಯವಿದೆ ಎಂದು ಎಫ್ಎಟಿಎಫ್ ಅಭಿಪ್ರಾಯಪಟ್ಟಿದೆ.

ಭಾರತಕ್ಕೆ ಸಂಬಂಧಿಸಿದ ಪರಸ್ಪರ ಮೌಲ್ಯಮಾಪನ ವರದಿಯನ್ನು FATF ಗುರುವಾರ ಬಿಡುಗಡೆ ಮಾಡಿದ್ದು, ಜೂನ್ ನಲ್ಲಿ ನಡೆದಿದ್ದ ಸಮಗ್ರ ಸಭೆಯ ಬಳಿಕ 368 ಪುಟಗಳ ವರದಿಯನ್ನು ತಯಾರಿಸಿತ್ತು. ಈ ವಿಭಾಗದಲ್ಲಿ ಭಾರತಕ್ಕೆ ಸಂಬಂಧಿಸಿದ ಕ್ರಮಗಳ ಕುರಿತ ಇತ್ತೀಚಿನ ವಿಮರ್ಶೆಯನ್ನು FATF 2010 ರಲ್ಲಿ ಪ್ರಕಟಿಸಿತ್ತು.

ಕಳೆದ ನವೆಂಬರ್‌ನಲ್ಲಿ ಭಾರತಕ್ಕೆ ಎಫ್‌ಎಟಿಎಫ್ ತಜ್ಞರ ಆನ್-ಸೈಟ್ ಭೇಟಿಯ ನಂತರ ಬಂದ ವರದಿಯು ಭಾರತವನ್ನು "ನಿಯಮಿತ ಅನುಸರಣೆ" ವಿಭಾಗದಲ್ಲಿ ಇರಿಸಿದ್ದು, ಈ ವಿಭಾಗದಲ್ಲಿ ಜಿ-20ಯ ಇತರ ನಾಲ್ಕು ದೇಶಗಳು ಮಾತ್ರ ಸ್ಥಾನ ಹಂಚಿಕೊಂಡಿವೆ.

ಭಾರತ 2031 ರಲ್ಲಿ ತನ್ನ ಮುಂದಿನ ಮೌಲ್ಯಮಾಪನಕ್ಕೆ ಒಳಗಾಗಲಿದೆ. ಭಯೋತ್ಪಾದನಾ ದುರುಪಯೋಗದಿಂದ ಲಾಭರಹಿತ ವಲಯವನ್ನು ರಕ್ಷಿಸಲು ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯವಿದೆ ಎಂದು FATF ಹೇಳಿದೆ.

"ಭಾರತದ ಅಕ್ರಮ ಹಣ ವರ್ಗಾವಣೆಯ ಪ್ರಮುಖ ಮೂಲಗಳು ದೇಶದೊಳಗಿನ ಕಾನೂನುಬಾಹಿರ ಚಟುವಟಿಕೆಗಳಿಂದ ಹುಟ್ಟಿಕೊಂಡಿವೆ, ದೇಶ "ವಿವಿಧ" ಶ್ರೇಣಿಯ ಭಯೋತ್ಪಾದಕ ಬೆದರಿಕೆಗಳನ್ನು ಎದುರಿಸುತ್ತಿದೆ, ಹೆಚ್ಚು ಗಮನಾರ್ಹವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿರುವ ISIL (ಇಸ್ಲಾಮಿಕ್ ಸ್ಟೇಟ್ ಅಥವಾ ISIS) ಅಥವಾ AQ-ಸಂಯೋಜಿತ ಗುಂಪುಗಳಿಂದ ( ಅಲ್ ಖೈದಾ) ಬೆದರಿಕೆಗಳನ್ನು ಎದುರಿಸುತ್ತಿದೆ ಎಂದು FATF ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT