ಸಂಗ್ರಹ ಚಿತ್ರ 
ವಿದೇಶ

ಪಾಕ್ ಸೇನೆ ಮೇಲೆ ಮತ್ತೊಂದು ಭೀಕರ ದಾಳಿ: 6 ಸೈನಿಕರು ಸಾವು, 11 ಸೈನಿಕರಿಗೆ ಗಂಭೀರ ಗಾಯ!

ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಿಂತಿಲ್ಲ. ಜೂನ್ ತಿಂಗಳಿನಿಂದ ಪ್ರತಿ ತಿಂಗಳು ಪಾಕಿಸ್ತಾನದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಾರೆ. ಪ್ರತಿ ದಾಳಿಯಲ್ಲಿ ಅನೇಕ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು ಹಲವರು ಗಾಯಗೊಂಡಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪಾಕ್ ಸೇನೆಯೇ ಸುರಕ್ಷಿತವಾಗಿಲ್ಲ. ಪ್ರತಿದಿನ ಅವರ ಮೇಲೆ ದಾಳಿಗಳು ನಡೆಯುತ್ತಿವೆ. ದಕ್ಷಿಣ ವಜೀರಿಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆದಿದೆ. ಈ ದಾಳಿಯಲ್ಲಿ ಆರು ಯೋಧರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಿಂತಿಲ್ಲ. ಜೂನ್ ತಿಂಗಳಿನಿಂದ ಪ್ರತಿ ತಿಂಗಳು ಪಾಕಿಸ್ತಾನದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಾರೆ. ಪ್ರತಿ ದಾಳಿಯಲ್ಲಿ ಅನೇಕ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು ಹಲವರು ಗಾಯಗೊಂಡಿದ್ದಾರೆ.

ಆಗಸ್ಟ್ 22ರ ಘಟನೆಯಲ್ಲಿ 11 ಯೋಧರು ಸಾವು

ಇದಕ್ಕೂ ಮುನ್ನ ಆಗಸ್ಟ್ 22ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರು ಪೊಲೀಸರ ಮೇಲೆ ರಾಕೆಟ್ ದಾಳಿ ನಡೆಸಿದ್ದರು. ಇದರಲ್ಲಿ ಕನಿಷ್ಠ 11 ಸೈನಿಕರು ಸಾವನ್ನಪ್ಪಿದರು. ಲಾಹೋರ್‌ನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ರಹೀಮ್ ಯಾರ್ ಖಾನ್ ಜಿಲ್ಲೆಯಲ್ಲಿ ಹಲವಾರು ಯೋಧರನ್ನು ಒತ್ತೆಯಾಳಾಗಿ ಇರಿಸಲಾಗಿತ್ತು. ಉಗ್ರರು ರಾಕೆಟ್‌ಗಳ ಮೂಲಕ ದಾಳಿ ನಡೆಸಿದ್ದಾರೆ ಎಂದು ಪಂಜಾಬ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಜೂನ್ 9ರಂದು 7 ಯೋಧರು ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಏಳು ಸೈನಿಕರು ಮೃತಪಟ್ಟಿದ್ದಾರೆ. ಸೈನಿಕರ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ಪ್ರಧಾನಿ ಶಹಬಾಜ್ ಷರೀಫ್ ಅವರು ಭಯೋತ್ಪಾದನೆಯನ್ನು ಕೊನೆಗೊಳಿಸುವುದಾಗಿ ಪಣ ತೊಟ್ಟರು. ಭಾನುವಾರ ಲಕ್ಕಿ ಮಾರ್ವತ್ ಜಿಲ್ಲೆಯ ಸರಬಂದ್ ಪೋಸ್ಟ್ ಕಚ್ಚಿ ಕಮರ್ ಕಡೆಗೆ ಹೋಗುತ್ತಿದ್ದ ಭದ್ರತಾ ಸಿಬ್ಬಂದಿಯ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಇದರಲ್ಲಿ ಒಬ್ಬ ಕ್ಯಾಪ್ಟನ್ ಸೇರಿದಂತೆ ಏಳು ಯೋಧರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT