ಬೈರುತ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ 
ವಿದೇಶ

ಬೈರುತ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಹೆಜ್ಬುಲ್ಲಾ ಕಮಾಂಡರ್ ಸೇರಿ ಕನಿಷ್ಠ 31 ಮಂದಿ ಸಾವು

ಬೈರುತ್‌ನಲ್ಲಿರುವ ಹೆಜ್ಬುಲ್ಲಾದ ಭದ್ರಕೋಟೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 31 ಜನ ಸಾವನ್ನಪ್ಪಿದ್ದಾರೆ.

ಬೈರುತ್: ಲೆಬನಾನ್‌ನ ರಾಜಧಾನಿ ಬೈರುತ್‌ನ ದಕ್ಷಿಣ ಉಪನಗರಗಳ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂರು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ ಕನಿಷ್ಠ 31 ಜನ ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ

ಬೈರುತ್‌ನಲ್ಲಿರುವ ಹೆಜ್ಬುಲ್ಲಾದ ಭದ್ರಕೋಟೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 31 ಜನ ಸಾವನ್ನಪ್ಪಿದ್ದಾರೆ ಮತ್ತು ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ.

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ, ಇಸ್ರೇಲ್ ಮಕ್ಕಳ ವಿರುದ್ಧ "ನಾಚಿಕೆಯಿಲ್ಲದೇ ಅಪರಾಧಗಳನ್ನು" ಮಾಡುತ್ತಿದೆ. ಅವರು ಹೋರಾಟಗಾರರಲ್ಲ ಎಂದು ಕಿಡಿ ಕಾರಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ದಕ್ಷಿಣ ಬೈರುತ್‌ನಲ್ಲಿ ಉಗ್ರಗಾಮಿ ಸಂಘಟನೆಯ ಭದ್ರಕೋಟೆಯ ಮೇಲೆ ನಡೆದ ದಾಳಿಯಲ್ಲಿ ಹೆಜ್ಬುಲ್ಲಾದ ರಾಡ್ವಾನ್ ಘಟಕದ ಮುಖ್ಯಸ್ಥ ಇಬ್ರಾಹಿಂ ಅಖಿಲ್‌ ಮೃತಪಟ್ಟಿದ್ದಾರೆ ಎಂದು ಹೆಜ್ಬುಲ್ಲಾದ ನಿಕಟ ಮೂಲಗಳು ತಿಳಿಸಿವೆ.

ಬೈರುತ್‌ನ ದಕ್ಷಿಣ ದಹಿಯಾ ಜಿಲ್ಲೆಯ ಮೇಲೆ ನಡೆದ ದಾಳಿಯಲ್ಲಿ ಹೆಜ್ಬುಲ್ಲಾದ ರಾಡ್ವಾನ್ ಘಟಕದ ಕಮಾಂಡರ್ ಇಬ್ರಾಹಿಂ ಅಕಿಲ್ ಮತ್ತು ಇತರ 10 ಹೆಜ್ಬುಲ್ಲಾ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಮಿಲಿಟರಿಯ ಮುಖ್ಯ ವಕ್ತಾರ, ರಿಯರ್ ಅಡ್ಮ್. ಡೇನಿಯಲ್ ಹಗರಿ ಅವರು ಹೇಳಿದ್ದಾರೆ.

"ನಮ್ಮ ನಾಗರಿಕರನ್ನು ರಕ್ಷಿಸಲು ನಾವು ನಮ್ಮ ಶತ್ರುಗಳ ಮೇಲಿನ ದಾಳಿಯನ್ನು ಮುಂದುವರಿಸುತ್ತೇವೆ. ದಹಿಯಾದಲ್ಲಿ ಮತ್ತು ಬೈರುತ್‌ನಲ್ಲಿಯೂ ದಾಳಿ ನಡೆಯಲಿದೆ" ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ತಿಳಿಸಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭದ ನಂತರ ಬೈರುತ್‌ನ ದಕ್ಷಿಣ ಉಪನಗರಗಳ ಮೇಲೆ ನಡೆದ ಮೂರನೇ ವೈಮಾನಿಕ ದಾಳಿ ಇದಾಗಿದೆ. ಲೆಬನಾನ್‌ನ ಹೆಜ್ಬುಲ್ಲಾ ಉಗ್ರ ಸಂಘಟನೆ ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ ಬೆದರಿಕೆ ಹಾಕಿದ ಬೆನ್ನಲ್ಲೇ ಇಸ್ರೇಲ್ ಸೇನೆ ತನ್ನ ವಾಯು ದಾಳಿ ಆರಂಭ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT