ಝೆಲೆನ್ ಸ್ಕಿ ಭೇಟಿಯಾದ ಪ್ರಧಾನಿ ಮೋದಿ 
ವಿದೇಶ

ವಿಶ್ವಸಂಸ್ಥೆ: ಕಳೆದ ಮೂರು ತಿಂಗಳಲ್ಲಿ 3ನೇ ಬಾರಿಗೆ Zelenskyy ಜೊತೆ ಮೋದಿ ಮಾತುಕತೆ

ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ನ್ಯೂಯಾರ್ಕ್: ವಿಶ್ವಸಂಸ್ಥೆ ಶೃಂಗಸಭೆಯ ವೇಳೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದು ಕಳೆದ ಮೂರು ತಿಂಗಳ ಅವಧಿಯಲ್ಲಿ ಮೂರನೇ ಭೇಟಿಯಾಗಿದೆ. ಆಗಸ್ಟ್ 23 ರಂದು ಉಕ್ರೇನ್ ಭೇಟಿ ವೇಳೆ ಕೀವ್ ನಲ್ಲಿ, ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಮೋದಿ ಹಾಗೂ ಝೆಲೆನ್ ಸ್ಕಿ ಮಾತುಕತೆ ನಡೆಸಿದ್ದರು. ಇದೀಗ ನ್ಯೂಯಾರ್ಕ್ ನಲ್ಲಿ ನಡೆದ ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು , ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್ ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ. ಉಕ್ರೇನ್ ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೆ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಉಕ್ರೇನ್ ಸಂಘರ್ಷಕ್ಕೆ ಶಾಶ್ವತ ಮತ್ತು ಶಾಂತಿಯುತ ಪರಿಹಾರಕ್ಕೆ ನೆರವಾಗಲು ಬೇಕಾದ ಎಲ್ಲ ನೆರವು ನೀಡಲು ಭಾರತ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ, ಸಂಘರ್ಷವನ್ನು ಮಾತುಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸ್ಪಷ್ಟ, ಸ್ಥಿರ ಮತ್ತು ರಚನಾತ್ಮಕ ನಿಲುವನ್ನು ಭಾರತ ಪುನರುಚ್ಚರಿಸಿದೆ.

ಮತ್ತೊಂದೆಡೆ ಎಕ್ಸ್ ನಲ್ಲಿ ಬರೆದುಕೊಂಡಿರುವ ಝೆಲೆನ್ ಸ್ಕಿ, ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವರ್ಷ ಮೂರನೇ ಬಾರಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದೇನೆ. ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಸಕ್ರಿಯವಾಗಿ ವೃದ್ಧಿಗೊಳಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಗಟ್ಟಿಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ .

ಈ ಮಧ್ಯೆ ರಷ್ಯಾ ತೈಲ ಕುರಿತು ಪ್ರಧಾನಿ ಮೋದಿ ಹಾಗೂ ಝೆಲೆನ್ಸ್ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಪಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT