ಝೆಲೆನ್ ಸ್ಕಿ ಭೇಟಿಯಾದ ಪ್ರಧಾನಿ ಮೋದಿ 
ವಿದೇಶ

ವಿಶ್ವಸಂಸ್ಥೆ: ಕಳೆದ ಮೂರು ತಿಂಗಳಲ್ಲಿ 3ನೇ ಬಾರಿಗೆ Zelenskyy ಜೊತೆ ಮೋದಿ ಮಾತುಕತೆ

ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ನ್ಯೂಯಾರ್ಕ್: ವಿಶ್ವಸಂಸ್ಥೆ ಶೃಂಗಸಭೆಯ ವೇಳೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದು ಕಳೆದ ಮೂರು ತಿಂಗಳ ಅವಧಿಯಲ್ಲಿ ಮೂರನೇ ಭೇಟಿಯಾಗಿದೆ. ಆಗಸ್ಟ್ 23 ರಂದು ಉಕ್ರೇನ್ ಭೇಟಿ ವೇಳೆ ಕೀವ್ ನಲ್ಲಿ, ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಮೋದಿ ಹಾಗೂ ಝೆಲೆನ್ ಸ್ಕಿ ಮಾತುಕತೆ ನಡೆಸಿದ್ದರು. ಇದೀಗ ನ್ಯೂಯಾರ್ಕ್ ನಲ್ಲಿ ನಡೆದ ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು , ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್ ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ. ಉಕ್ರೇನ್ ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೆ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಉಕ್ರೇನ್ ಸಂಘರ್ಷಕ್ಕೆ ಶಾಶ್ವತ ಮತ್ತು ಶಾಂತಿಯುತ ಪರಿಹಾರಕ್ಕೆ ನೆರವಾಗಲು ಬೇಕಾದ ಎಲ್ಲ ನೆರವು ನೀಡಲು ಭಾರತ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ, ಸಂಘರ್ಷವನ್ನು ಮಾತುಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸ್ಪಷ್ಟ, ಸ್ಥಿರ ಮತ್ತು ರಚನಾತ್ಮಕ ನಿಲುವನ್ನು ಭಾರತ ಪುನರುಚ್ಚರಿಸಿದೆ.

ಮತ್ತೊಂದೆಡೆ ಎಕ್ಸ್ ನಲ್ಲಿ ಬರೆದುಕೊಂಡಿರುವ ಝೆಲೆನ್ ಸ್ಕಿ, ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವರ್ಷ ಮೂರನೇ ಬಾರಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದೇನೆ. ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಸಕ್ರಿಯವಾಗಿ ವೃದ್ಧಿಗೊಳಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಗಟ್ಟಿಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ .

ಈ ಮಧ್ಯೆ ರಷ್ಯಾ ತೈಲ ಕುರಿತು ಪ್ರಧಾನಿ ಮೋದಿ ಹಾಗೂ ಝೆಲೆನ್ಸ್ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಪಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ