ಲೆಬೆನಾನ್ ನಲ್ಲಿ ಸಂಘರ್ಷ 
ವಿದೇಶ

ಆದಷ್ಟು ಬೇಗ Lebanon ತೊರೆಯಿರಿ: ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಬೈರುತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸುರಕ್ಷತಾ ಸಲಹೆಯನ್ನು ಬಿಡುಗಡೆ ಮಾಡಿದ್ದು, ಕೂಡಲೇ ಲೆಬೆನಾನ್ ತೊರೆಯುವಂತೆ ಸಲಹೆ ನೀಡಿದೆ.

ನವದೆಹಲಿ: ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಿದೇಶಾಂಗ ಇಲಾಖೆ ಕೂಡಲೇ ಲೆಬೆನಾನ್ ತೊರೆಯುವಂತೆ ಅಲ್ಲಿನ ಭಾರತೀಯರಿಗೆ ಎಚ್ಚರಿಕೆ ನೀಡಿದೆ.

ಹೌದು.. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಬೈರುತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸುರಕ್ಷತಾ ಸಲಹೆಯನ್ನು ಬಿಡುಗಡೆ ಮಾಡಿದ್ದು, ಕೂಡಲೇ ಲೆಬೆನಾನ್ ತೊರೆಯುವಂತೆ ಸಲಹೆ ನೀಡಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬೈರುತ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, "1 ಆಗಸ್ಟ್ 2024 ರಂದು ನೀಡಲಾದ ಸಲಹೆಯ ಪುನರಾವರ್ತನೆಯಂತೆ ಮತ್ತು ಈ ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ಉಲ್ಬಣಗಳ ದೃಷ್ಟಿಯಿಂದ, ಮುಂದಿನ ಸೂಚನೆ ಬರುವವರೆಗೆ ಲೆಬನಾನ್‌ಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಬಲವಾಗಿ ಸಲಹೆ ನೀಡಲಾಗಿದೆ ಎಂದು ಹೇಳಿದೆ.

ಅಂತೆಯೇ "ಈಗಾಗಲೇ ಲೆಬನಾನ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳಿಗೆ ಲೆಬನಾನ್ ತೊರೆಯಲು ಬಲವಾಗಿ ಸಲಹೆ ನೀಡಲಾಗಿದೆ" ಎಂದು ಅದು ಸೇರಿಸಿದೆ.

ಏತನ್ಮಧ್ಯೆ, ಇಸ್ರೇಲ್ ತನ್ನ ಸೈನಿಕರಿಗೆ ಲೆಬನಾನ್‌ನಲ್ಲಿ ಇರಾನ್ ಬೆಂಬಲಿತ ಹೆಜ್ಬೊಲ್ಲಾ ವಿರುದ್ಧ ಸಂಭವನೀಯ ನೆಲದ ಕಾರ್ಯಾಚರಣೆಗೆ ಸಿದ್ಧವಾಗುವಂತೆ ಹೇಳಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಧ್ಯಪ್ರಾಚ್ಯದಲ್ಲಿ "ಸಂಪೂರ್ಣ ಯುದ್ಧ" ದ ವಿರುದ್ಧ ಎಚ್ಚರಿಸಿದ ಬೆನ್ನಲ್ಲೇ ಇಸ್ರೇಲ್ ಈ ಹೇಳಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT