ಮಕ್ಕಳ ರಕ್ಷಿಸಿದ ದಾದಿಯರು 
ವಿದೇಶ

Myanmar Earthquake: ಜೀವದ ಹಂಗು ತೊರೆದು ಪುಟ್ಟ ಮಕ್ಕಳ ರಕ್ಷಿಸಿದ ದಾದಿಯರು! Video Viral

ಭೂಕಂಪನ ಎಂತಹವರನ್ನೂ ಪ್ರಾಣಭೀತಿಗೆ ದೂಡುತ್ತದೆ. ಎಂತಹ ಗಟ್ಟಿ ಮನುಷ್ಯನೇ ಆದರೂ ಭೂಕಂಪನದಿಂದ ಪ್ರಾಣ ಉಳಿಸಿಕೊಳ್ಳಲು ಕಟ್ಟಡಗಳಿಂದ ದೂರ ಓಡುತ್ತಾರೆ.

ನವದೆಹಲಿ: ಮ್ಯಾನ್ಮಾರ್ ನಲ್ಲಿ ಸಂಭವಿಸಿದ ಭೀಕರ 7.7 ತೀವ್ರತೆಯ ಭೂಕಂಪನದ ನಡುವೆಯೂ ಆಸ್ಪತ್ರೆಯೊಂದರ ದಾದಿಯರು ತಮ್ಮ ಜೀವದ ಹಂಗು ತೊರೆದು ಅಲುಗಾಡುತ್ತಿದ್ದ ಕಟ್ಟಡದಲ್ಲೇ ಪುಟ್ಟಮಕ್ಕಳನ್ನು ರಕ್ಷಿಸಲು ಹರಸಾಹಸ ಪಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಭೂಕಂಪನ ಎಂತಹವರನ್ನೂ ಪ್ರಾಣಭೀತಿಗೆ ದೂಡುತ್ತದೆ. ಎಂತಹ ಗಟ್ಟಿ ಮನುಷ್ಯನೇ ಆದರೂ ಭೂಕಂಪನದಿಂದ ಪ್ರಾಣ ಉಳಿಸಿಕೊಳ್ಳಲು ಕಟ್ಟಡಗಳಿಂದ ದೂರ ಓಡುತ್ತಾರೆ. ಮೊದಲು ತಾವು ಬದುಕುಳಿದರೆ ಸಾಕು ಎಂಬಂತೆ ತಮ್ಮ ಪ್ರೀತಿ ಪಾತ್ರರನ್ನೂ ಕೂಡ ಬಿಟ್ಟು ಓಡುತ್ತಾರೆ. ಆದರೆ ಮ್ಯಾನ್ಮಾರ್ ನ ಆಸ್ಪತ್ರೆಯೊಂದರಲ್ಲಿ ಭೂಕಂಪನಕ್ಕೆ ಸಿಲುಕಿ ಇಡೀ ಆಸ್ಪತ್ರೆ ಕಟ್ಟಡ ಅಲುಗಾಡುತ್ತಿದ್ದರೂ ಅಲ್ಲಿದ್ದ ಇಬ್ಬರು ದಾದಿಯರು ಮಾತ್ರ ಅಲ್ಲಿದ್ದ ಪುಟ್ಟ ಮಕ್ಕಳನ್ನು ರಕ್ಷಿಸಲು ಹರಸಾಹಸ ಪಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೊಂದು ವೈರಲ್ ಆಗಿದ್ದು, ಈ ವಿಡಿಯೋದಲ್ಲಿ, ಮ್ಯಾನ್ಮಾರ್ ಭೂಕಂಪದ ಸಮಯದಲ್ಲಿ ನವಜಾತ ಶಿಶುಗಳನ್ನು ದಾದಿಯರು ರಕ್ಷಿಸಿದ್ದಾರೆ. ತಮ್ಮ ಕರ್ತವ್ಯ ಪ್ರಜ್ಞೆ ಮತ್ತು ಮಾನವೀಯತೆಯನ್ನು ಮೆರೆದಿರುವುದು ಕಂಡುಬಂದಿದೆ. ಪ್ರಾಣಭಯಕ್ಕಿಂತ ಮಾನವೀಯತೆಗೆ ಒತ್ತುಕೊಟ್ಟಿರುವ ದಾದಿಯರು, ಭೂಕಂಪದ ನಡುವೆಯೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವುದರನ್ನು ಮುಂದುವರೆಸಿದ್ದಾರೆ.

ವಿಡಿಯೋದಲ್ಲೇನಿದೆ?

ವೈರಲ್ ಆಗಿರುವ ವಿಡಿಯೋದಲ್ಲಿ ದಾದಿಯರು ಭೂಕಂಪದ ನಡುವೆಯೂ ನವಜಾತ ಶಿಶುಗಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಭೂಕಂಪ ಸಂಭವಿಸಿದಾಗ ತೊಟ್ಟಿಲುಗಳು ಉರುಳದಂತೆ ತಡೆಯಲು ಇಬ್ಬರು ನರ್ಸ್ ಧಾವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ಭೂಕಂಪದಲ್ಲಿ ಆಸ್ಪತ್ರೆ ಕಟ್ಟಡವು ಅಲುಗಾಡಿದೆ. ಆ ದಾದಿಯರು ಭೀಕರ ಕಂಪನದ ಸಮಯದಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗದೆ, ಶಿಶುಗಳ ತೊಟ್ಟಿಲುಗಳನ್ನು ಹಿಡಿದಿಡಲು ಪ್ರಯತ್ನಿಸಿದ್ದಾರೆ. ನವಜಾತ ಶಿಶುಗಳನ್ನ ಕಾಪಾಡಲು ಮುಂದಾಗುತ್ತಾರೆ.

ಯಾವ ಆಸ್ಪತ್ರೆ?

ಇನ್ನು ವೈರಲ್ ಆಗಿರುವ ಈ ವಿಡಿಯೋದಲ್ಲಿರುವ ದಾದಿಯರನ್ನು ಚೀನಾದ ಯುನ್ನಾನ್‌ನಲ್ಲಿರುವ ಜಿಂಗ್ಚೆಂಗ್ ಆಸ್ಪತ್ರೆಯ ದಾದಿಯರು ಎಂದು ಹೇಳಲಾಗಿದೆ. ಇಬ್ಬರು ದಾದಿಯರ ಪ್ರಾಮಾಣಿಕ ಕೆಲಸ, ಕರ್ತವ್ಯ ಪ್ರಜ್ಞೆ ಜಗತ್ತಿಗೆ ಮಾದರಿ. ಮುಖ್ಯವಾಗಿ ಇಲ್ಲಿ ಮಾನವೀಯತೆ ಗೆದ್ದಿದೆ. ದಾದಿಯರ ಧೈರ್ಯವೇ ಇದಕ್ಕೆ ಸಾಕ್ಷಿ. ದಾದಿಯರು ಭೂಕಂಪ ಸಂಭವಿಸಿದರೂ ಓಡಿ ಹೋಗದೇ, ಅವರ ಅಲ್ಲಿಯೇ ಇದ್ದು ನವಜಾತ ಶಿಶುಗಳ ಜೀವಗಳನ್ನು ಉಳಿಸಿದ್ದಾರೆ. ದಾದಿಯರು ನಮಗೆ ಹೇಗೆ ಬದುಕಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ನೆಟ್ಟಿಗರ ಶ್ಲಾಘಿಸಿದ್ದಾರೆ.

ಅಂದಹಾಗೆ ನಾಲ್ಕು ದಿನಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪವು ಭಾರಿ ವಿನಾಶವನ್ನುಂಟು ಮಾಡಿದೆ. 7.7 ತೀವ್ರತೆಯ ಭೂಕಂಪದಿಂದ ಹಲವಾರು ಕಟ್ಟಡಗಳು ಉರುಳಿಬಿದ್ದಿವೆ. ಕನಿಷ್ಠ 2,056 ಮಂದಿ ಸಾವನ್ನಪ್ಪಿದ್ದು, 3,900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 270 ಮಂದಿ ಕಾಣೆಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವೈದ್ಯಕೀಯ ತಂಡವು ರಕ್ಷಣಾ ಮತ್ತು ಅಗತ್ಯ ತುರ್ತು ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್