ಪ್ರಧಾನಿ ಮೋದಿ - ಥಾಯ್ ಪ್ರಧಾನಿ ಶಿನವಾತ್ರ 
ವಿದೇಶ

BIMSTEC ಶೃಂಗಸಭೆಗೂ ಮುನ್ನ ಥಾಯ್ ಪ್ರಧಾನಿ ಜತೆ ಪ್ರಧಾನಿ ಮೋದಿ ಮಾತುಕತೆ

ಬ್ಯಾಂಕಾಕ್ ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಮೂಲದ ಸಮುದಾಯ ಆತ್ಮೀಯವಾಗಿ ಬರಮಾಡಿಕೊಂಡಿತು.

ಬ್ಯಾಂಕಾಕ್: ಥೈಲ್ಯಾಂಡ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಥಾಯ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು.

ಬ್ಯಾಂಕಾಕ್ ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಮೂಲದ ಸಮುದಾಯ ಆತ್ಮೀಯವಾಗಿ ಬರಮಾಡಿಕೊಂಡಿತು. ಗರ್ಬಾ ನೃತ್ಯವನ್ನು ಪ್ರದರ್ಶಿಸಲಾಯಿತು. ನಂತರ ಗಾರ್ಡ್ ಆಫ್ ಹಾನರ್ ನೀಡಲಾಯಿತು.

"ಪ್ರಧಾನಿ ಮೋದಿ ಅವರಿಗೆ ಗಾರ್ಡ್ ಆಫ್ ಆನರ್‌ನೊಂದಿಗೆ ಥೈಲ್ಯಾಂಡ್‌ನ ಪ್ರಧಾನಿ ವಿಶೇಷ ಸ್ವಾಗತ ನೀಡಿದರು. ಇಂದು ಬ್ಯಾಂಕಾಕ್‌ನ ಸರ್ಕಾರಿ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು X ನಲ್ಲಿ ಪೋಸ್ಟ್‌ ಮಾಡಿದ್ದಾರೆ.

"ಭವಿಷ್ಯದ ಭಾರತ-ಥೈಲ್ಯಾಂಡ್ ಪಾಲುದಾರಿಕೆಗೆ ದಾರಿ ಮಾಡಿಕೊಡಲು ಇಬ್ಬರೂ ನಾಯಕರು ವ್ಯಾಪಕ ಚರ್ಚೆಗಳನ್ನು ನಡೆಸಲಿದ್ದಾರೆ" ಎಂದು ಅವರು ಹೇಳಿದ್ದಾರೆ.

ಇನ್ನು X ನಲ್ಲಿ ಪ್ರಧಾನಿ ಮೋದಿ ಸಹ ಪೋಸ್ಟ್‌ ಮಾಡಿದ್ದು, ಬ್ಯಾಂಕಾಕ್‌ಗೆ ಬಂದ ನಂತರ ಆಕರ್ಷಕ ರಾಮಕಿಯನ್, ಥಾಯ್ ರಾಮಾಯಣ ವೀಕ್ಷಿಸಿದೆ ಎಂದು ಹೇಳಿದ್ದಾರೆ. ರಾಮಕಿಯನ್‌ ಥಾಯ್ಲೆಂಡ್‌ನ ಪೌರಾಣಿಕ ಗ್ರಂಥಗಳಲ್ಲಿ ಒಂದು.

ನಂತರ ಮತ್ತೊಂದು ಪೋಸ್ಟ್ ನಲ್ಲಿ ಭಾರತ ಮತ್ತು ಥೈಲ್ಯಾಂಡ್ ಕಾರ್ಯತಂತ್ರದ ಪಾಲುದಾರಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಗಮನ ಕೇಂದ್ರೀಕರಿಸಿದ್ದೇವೆ. ರಕ್ಷಣೆ, ಭದ್ರತೆ, ಕಡಲ ಭದ್ರತೆ, ಜಲ ವಿಜ್ಞಾನದಂತಹ ಕಾರ್ಯತಂತ್ರದ ಕ್ಷೇತ್ರಗಳ ಕುರಿತಾಗಿಯೂ ಚರ್ಚಿಸಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಭಯೋತ್ಪಾದನೆ, ಅಕ್ರಮ ಹಣ ವರ್ಗಾವಣೆ ಮತ್ತು ಇತರೆ ಸವಾಲುಗಳನ್ನು ಒಟ್ಟಾಗಿ ಎದುರಿಸಲು ಕೆಲಸ ಮಾಡಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಎರಡು ದಿನಗಳ ಥೈಲ್ಯಾಂಡ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಬಂಗಾಳ ಕೊಲ್ಲಿ ಬಹುವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರ ಸಂಘಟನೆ(BIMSTEC)ಯ 6ನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT