ಸಾಂಧರ್ಬಿಕ ಚಿತ್ರ 
ವಿದೇಶ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಬಿಡುಗಡೆ

ಸರ್ಕಾರಿ ಮಾಹಿತಿಯ ಪ್ರಕಾರ, ಶ್ರೀಲಂಕಾ 2024 ರಲ್ಲಿ 528 ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಿದೆ.

ಕೊಲಂಬೊ: ಪ್ರಧಾನಿ ನರೇಂದ್ರ ಮೋದಿಯವರ ಶ್ರೀಲಂಕಾ ಭೇಟಿಯನ್ನು ಗೌರವಿಸುವ ವಿಶೇಷ ಸೂಚನೆಯಾಗಿ ಲಂಕಾ ಸರ್ಕಾರ 11 ಭಾರತೀಯ ಮೀನುಗಾರರನ್ನು ಭಾನುವಾರ ಬಿಡುಗಡೆ ಮಾಡಿದೆ.

ಪಿಟಿಐ ವರದಿಯ ಪ್ರಕಾರ, ಭಾರತೀಯ ಮೀನುಗಾರರ ಬಂಧನದ ಬಗ್ಗೆ ಪ್ರಧಾನಿ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ ಒಂದು ದಿನದ ನಂತರ ಶ್ರೀಲಂಕಾ ಅಧಿಕಾರಿಗಳು 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ್ದಾರೆ.

ಸರ್ಕಾರಿ ಮಾಹಿತಿಯ ಪ್ರಕಾರ, ಶ್ರೀಲಂಕಾ 2024 ರಲ್ಲಿ 528 ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಿದೆ.

ಶನಿವಾರ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೋದಿ, "ನಾವು ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚಿಸಿದ್ದೇವೆ. ಈ ವಿಷಯದಲ್ಲಿ ನಾವು ಮಾನವೀಯ ಮನೋಭಾವದೊಂದಿಗೆ ತೊಂದರೆಗೊಳಗಾದ ಮೀನುಗಾರರ ಸಮಸ್ಯೆಯನ್ನು ಪರಿಹರಿಸಲು ಒಪ್ಪಿಕೊಂಡಿದ್ದೇವೆ. ಮೀನುಗಾರರು ಮತ್ತು ಅವರ ದೋಣಿಗಳನ್ನು ತಕ್ಷಣ ಬಿಡುಗಡೆ ಮಾಡುವುದರ ಬಗ್ಗೆಯೂ ನಾವು ಒತ್ತು ನೀಡಿದ್ದೇವೆ" ಎಂದು ಹೇಳಿದ್ದರು.

ಮೋದಿ ಭೇಟಿಯನ್ನು ಗೌರವಿಸಲು ಕನಿಷ್ಠ 11 ಭಾರತೀಯ ಮೀನುಗಾರರನ್ನು ವಿಶೇಷ ಆದ್ಯತೆ ಮೇರೆಗೆ ಬಿಡುಗಡೆ ಮಾಡಲಾಗಿದೆ ವರದಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT