ರಕ್ಷಣಾ ಕಾರ್ಯಾಚರಣೆ 
ವಿದೇಶ

ಡೊಮಿನಿಕನ್ ರಿಪಬ್ಲಿಕ್ ನೈಟ್‌ಕ್ಲಬ್‌ ಛಾವಣಿ ಕುಸಿತ: 79 ಮಂದಿ ಸಾವು, 160 ಜನರಿಗೆ ಗಾಯ

ಈ ಪ್ರತಿಷ್ಠಿತ ನೈಟ್​ ಕ್ಲಬ್​​​ ನಲ್ಲಿ ನಡೆಯುತ್ತಿದ್ದ ಮೆರೆಂಗ್ಯೂ ಸಂಗೀತ ಕಚೇರಿಯಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ. ಬದುಕುಳಿದವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

ಸ್ಯಾಂಟೊ ಡೊಮಿಂಗೊ: ಡೊಮಿನಿಕನ್ ರಾಜಧಾನಿಯಲ್ಲಿ ಮಂಗಳವಾರ ಐಕಾನಿಕ್ ನೈಟ್‌ಕ್ಲಬ್‌ನ ಛಾವಣಿ ಕುಸಿದಿದ್ದರಿಂದ ಕನಿಷ್ಠ 79 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರತಿಷ್ಠಿತ ನೈಟ್​ ಕ್ಲಬ್​​​ ನಲ್ಲಿ ನಡೆಯುತ್ತಿದ್ದ ಮೆರೆಂಗ್ಯೂ ಸಂಗೀತ ಕಚೇರಿಯಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ. ಬದುಕುಳಿದವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

ಜೆಟ್ ಸೆಟ್ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ದುರಂತದಲ್ಲಿ ಜನಪ್ರಿಯ ಗಾಯಕ, ಪ್ರಾಂತೀಯ ಗವರ್ನರ್ ಮತ್ತು ಇಬ್ಬರು ಮಾಜಿ ಮೇಜರ್ ಲೀಗ್‌ನ ಬೇಸ್‌ಬಾಲ್ (Baseball) ಆಟಗಾರರಾದ ಆಕ್ಟೇವಿಯೊ ಡೋಟೆಲ್ ಮತ್ತು ಟೋನಿ ಬ್ಲಾಂಕೊ ಮೃತಪಟ್ಟಿದ್ದಾರೆ

ಸ್ಯಾಂಟೊ ಡೊಮಿಂಗೊದಲ್ಲಿನ ಒಂದು ಅಂತಸ್ತಿನ ಜೆಟ್ ಸೆಟ್ ನೈಟ್‌ಕ್ಲಬ್‌ನ ಅವಶೇಷಗಳಡಿಯಲ್ಲಿ ಬದುಕುಳಿದವರಿಗಾಗಿ ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತುರ್ತು ಕಾರ್ಯಾಚರಣೆಗಳ ನಿರ್ದೇಶಕ ಜುವಾನ್ ಮ್ಯಾನುಯೆಲ್ ಮೆಂಡೆಜ್ ಹೇಳಿದ್ದಾರೆ.

ನಾವು ಅವಶೇಷಗಳನ್ನು ತೆರವುಗೊಳಿಸುವುದರ ಜತೆಗೆ ಅದರಲ್ಲಿ ಸಿಲುಕಿಕೊಂಡವರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಮಂಗಳವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ ತಿಳಿಸಿದ್ದಾರೆ.

ನೈಟ್‌ಕ್ಲಬ್‌ನ ಛಾವಣಿ ಕುಸಿದು ಸುಮಾರು 12 ಗಂಟೆಗಳ ನಂತರ ರಕ್ಷಣಾ ಸಿಬ್ಬಂದಿಗಳು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯುತ್ತಿದ್ದಾರೆ. ಅಗ್ನಿಶಾಮಕ ದಳದವರು ಮುರಿದ ಕಾಂಕ್ರೀಟ್‌ನ ಬ್ಲಾಕ್‌ಗಳನ್ನು ತೆಗೆದು ಹಾಕುತ್ತಿದ್ದಾರೆ.

ರಕ್ಷಣಾ ಸಿಬ್ಬಂದಿ ಕ್ಲಬ್‌ನಲ್ಲಿನ ಮೂರು ಪ್ರದೇಶಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಮೆಂಡೆಜ್ ಮಾಹಿತಿ ನೀಡಿದ್ದಾರೆ. ಅವಶೇಷಗಳ ಅಡಿ ಸಿಲುಕಿದವರ ಆರ್ತನಾದ ಹೊರ ಬರುತ್ತಿದ್ದು, ಕಾಪಾಡಿ ಕಾಪಾಡಿ ಎಂಬ ಶಬ್ಧ ಕೇಳಿ ಬರುತ್ತಿದೆ ಎಂದು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT