ಪೊಲೀಸ್ ಭದ್ರತೆಯಲ್ಲಿ ತಹವ್ವೂರ್ ರಾಣಾನನ್ನು ಕರೆದೊಯ್ಯುತ್ತಿರುವುದು  
ವಿದೇಶ

ತಹವ್ವೂರ್ ರಾಣಾ ಬಂಧನ, ವಿಚಾರಣೆ ಪ್ರಕ್ರಿಯೆಯಲ್ಲಿ ಭಾರತಕ್ಕೆ ಬೆಂಬಲ: ಅಮೆರಿಕ

2008ರಲ್ಲಿ ನಡೆದ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ 166 ಜನರ ದುರಂತ ಸಾವಿಗೆ ಕಾರಣವಾದ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು ಎಂದು ಬ್ರೂಸ್ ಹೇಳಿದ್ದಾರೆ.

ವಾಷಿಂಗ್ಟನ್: 26/11ರ ಮುಂಬೈ ಭಯೋತ್ಪಾದಕ ದಾಳಿಯು ಇಡೀ ಜಗತ್ತನ್ನು ಬೆಚ್ಚಿಬೀಳಿಸಿತ್ತು. ದಾಳಿಗೆ ಕಾರಣಕರ್ತರಾದ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತಂದು ವಿಚಾರಣೆ ನಡೆಸಿ ಶಿಕ್ಷೆ ನೀಡುವ ಭಾರತದ ಪ್ರಯತ್ನಗಳನ್ನು ಅಮೆರಿಕ ದೀರ್ಘಕಾಲದಿಂದ ಬೆಂಬಲಿಸಿರುವ ಕ್ರಮವಾಗಿ ಪಾಕಿಸ್ತಾನಿ-ಕೆನಡಾದ ತಹಾವೂರ್ ಹುಸೇನ್ ರಾಣಾನನ್ನು ನಿನ್ನೆ ದೆಹಲಿಗೆ ಕರೆತಂದಿರುವುದು ಸಾರುತ್ತದೆ.

ಭಯಾನಕ 2008ರ ಮುಂಬೈ ಭಯೋತ್ಪಾದಕ ದಾಳಿಯನ್ನು ಯೋಜಿಸುವಲ್ಲಿ ರಾಣಾ ಪ್ರಮುಖ ಪಾತ್ರ ವಹಿಸಿದ್ದ ಎಂಬ ಬಲವಾದ ಶಂಕೆಯ ಆಧಾರದ ಮೇಲೆ ಭಾರತಕ್ಕೆ ಗಡಿಪಾರು ಮಾಡಲಾಗಿದ್ದು, ನ್ಯಾಯಾಲಯದಲ್ಲಿ ತನಿಖೆ ಎದುರಿಸಲು ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿದ್ದಾರೆ.

ಈ ದಾಳಿಗಳಿಗೆ ಕಾರಣರಾದವರಿಗೆ ಶಿಕ್ಷೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಭಾರತದ ಪ್ರಯತ್ನಗಳನ್ನು ಅಮೆರಿಕ ದೀರ್ಘಕಾಲದಿಂದ ಬೆಂಬಲಿಸಿದೆ ಮತ್ತು ಅಧ್ಯಕ್ಷ ಟ್ರಂಪ್ ಹೇಳಿದಂತೆ, ಜಾಗತಿಕ ಭಯೋತ್ಪಾದನೆಯ ಪಿಡುಗನ್ನು ಎದುರಿಸಲು ಅಮೆರಿಕ ಮತ್ತು ಭಾರತ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ತಿಳಿಸಿದ್ದಾರೆ.

2008ರಲ್ಲಿ ನಡೆದ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ 166 ಜನರ ದುರಂತ ಸಾವಿಗೆ ಕಾರಣವಾದ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು ಎಂದು ಬ್ರೂಸ್ ಹೇಳಿದ್ದಾರೆ.

ಇದಕ್ಕೂ ಮೊದಲು, ಯುಎಸ್ ನ್ಯಾಯ ಇಲಾಖೆಯ ವಕ್ತಾರರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ರಾಣಾ ಹಸ್ತಾಂತರವು ಘೋರ ದಾಳಿಗೆ ಬಲಿಯಾದವರ ಕುಟುಂಬಸ್ಥರಿಗೆ ನ್ಯಾಯ ಒದಗಿಸುವಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ. ಪಾಕಿಸ್ತಾನಿ ಕೆನಡಾದ ತಹವ್ವೂರ್ ರಾಣಾನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ NIA ಹಾಜರುಪಡಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ