ವಿದೇಶ

Ukraine: ಸುಮಿ ನಗರದ ಮೇಲೆ ರಷ್ಯಾದ ಕ್ಷಿಪಣಿ ದಾಳಿ; ಪವಿತ್ರ ಪಾಮ್ ಸಂಡೆ ದಿನವೇ 30 ಜನರು ಸಾವು, 84 ಮಂದಿಗೆ ಗಾಯ!

ಈ ಪವಿತ್ರ ಪಾಮ್ ಸಂಡೆಯಂದು, ನಮ್ಮ ಸಮುದಾಯವು ಭೀಕರ ದುರಂತವನ್ನು ಅನುಭವಿಸಿದೆ" ಎಂದು ಆರ್ಟೆಮ್ ಕೊಬ್ಜಾರ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಕ್ರೇನಿಯನ್ ನಗರದ ಸುಮಿ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 84 ಜನರು ಗಾಯಗೊಂಡಿದ್ದಾರೆ ಎಂದು ನಗರದ ಹಂಗಾಮಿ ಮೇಯರ್ ತಿಳಿಸಿದ್ದಾರೆ. ಪಾಮ್ ಸಂಡೆ ಆಚರಿಸಲು ಸ್ಥಳೀಯರು ಒಟ್ಟುಗೂಡುತ್ತಿದ್ದಾಗ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ನಗರದ ಹೃದಯಭಾಗಕ್ಕೆ ಅಪ್ಪಳಿಸಿದವು. ಈ ಪವಿತ್ರ ಪಾಮ್ ಸಂಡೆಯಂದು, ನಮ್ಮ ಸಮುದಾಯವು ಭೀಕರ ದುರಂತವನ್ನು ಅನುಭವಿಸಿದೆ" ಎಂದು ಆರ್ಟೆಮ್ ಕೊಬ್ಜಾರ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ನಿಲ್ಲಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಿಕೊಂಡ ತಾತ್ಕಾಲಿಕ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ರಷ್ಯಾ ಮತ್ತು ಉಕ್ರೇನ್‌ನ ಉನ್ನತ ರಾಜತಾಂತ್ರಿಕರು ಪರಸ್ಪರ ಆರೋಪ ಮಾಡಿಕೊಂಡ ಒಂದು ದಿನದ ಬಳಿಕ ಈ ದಾಳಿ ನಡೆದಿದೆ. ಮೂರು ವರ್ಷಗಳ ಯುದ್ಧವನ್ನು ಕೊನೆಗೊಳಿಸಲು ಮಾತುಕತೆಗಳಲ್ಲಿನ ವಿಫಲತೆಯನ್ನು ಇದು ಎತ್ತಿ ತೋರಿಸಿದೆ.

ಶನಿವಾರ ಮುಂಜಾನೆ ಉಕ್ರೇನ್‌ನ ಕೀವ್‌ನಲ್ಲಿರುವ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ನಡೆಸಿತ್ತು. ಭಾರತವನ್ನು ತಮ್ಮ 'ಆಪ್ತಮಿತ್ರ' ಎಂದು ಹೇಳಿಕೊಳ್ಳುತ್ತಾ, ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು "ಉದ್ದೇಶಪೂರ್ವಕವಾಗಿ" ಗುರಿಯಾಗಿಸಿಕೊಂಡಿದೆ ಎಂದು ಉಕ್ರೇನ್ ಆರೋಪಿಸಿದೆ. ನಾಶವಾದ ಗೋದಾಮು ಉಕ್ರೇನ್‌ನ ಅತಿದೊಡ್ಡ ಔಷಧ ಕಂಪನಿಗಳಲ್ಲಿ ಒಂದಾದ ಕುಸುಮ್ ಎಂಬ ಔಷಧ ಕಂಪನಿಗೆ ಸೇರಿತ್ತು. ವರದಿಗಳ ಪ್ರಕಾರ, ಕುಸುಮ್ ಹೆಲ್ತ್‌ಕೇರ್ ಮಾನವೀಯ ಉದ್ದೇಶಗಳಿಗಾಗಿ ಬಳಸಲಾಗುವ ಅಗತ್ಯ ವೈದ್ಯಕೀಯ ಸರಬರಾಜುಗಳನ್ನು ಸಂಗ್ರಹಿಸುತ್ತಿತ್ತು. ಭಾರತೀಯ ಉದ್ಯಮಿ ರಾಜೀವ್ ಗುಪ್ತಾ ಈ ಕಂಪನಿಯ ಮಾಲೀಕರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel