ದಾಳಿಯಲ್ಲಿ ಮೃತಪಟ್ಟ ಮಗು 
ವಿದೇಶ

ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ; ಒಂದೇ ಕುಟುಂಬದ 10 ಜನ ಸೇರಿ 23 ಮಂದಿ ಸಾವು

ಕಳೆದ ತಿಂಗಳು ಹಮಾಸ್ ಜೊತೆಗಿನ ತನ್ನ ಕದನ ವಿರಾಮ ಕೊನೆಗೊಳಿಸಿ ಮತ್ತೆ ಬಾಂಬ್ ದಾಳಿ ನಡೆಸುತ್ತಿರುವ ಇಸ್ರೇಲ್, ಇದೀಗ ಸಂಪೂರ್ಣ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ಪಡೆಯಲು ಮುಂದಾಗಿದೆ.

ಗಾಜಾ ಪಟ್ಟಿ: ಇಸ್ರೇಲ್ ಪಡೆಗಳು ಗುರುವಾರ ರಾತ್ರಿಯಿಡೀ ಗಾಜಾ ಪಟ್ಟಿಯ ಮೇಲೆ ನಡೆಸಿದ ದಾಳಿಯಲ್ಲಿ ಒಂದೇ ಕುಟುಂಬದ 10 ಜನ ಸೇರಿದಂತೆ ಕನಿಷ್ಠ 23 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಆರು ವಾರಗಳಿಂದ ಇಸ್ರೇಲ್ ವಿಧಿಸಿರುವ ಎಲ್ಲಾ ಆಹಾರ ಮತ್ತು ಇತರ ಸರಬರಾಜುಗಳ ದಿಗ್ಬಂಧನದಿಂದ ಹೆಚ್ಚುತ್ತಿರುವ ತೀವ್ರ ಪರಿಣಾಮದ ಬಗ್ಗೆ ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

ಕಳೆದ ತಿಂಗಳು ಹಮಾಸ್ ಜೊತೆಗಿನ ತನ್ನ ಕದನ ವಿರಾಮ ಕೊನೆಗೊಳಿಸಿ ಮತ್ತೆ ಬಾಂಬ್ ದಾಳಿ ನಡೆಸುತ್ತಿರುವ ಇಸ್ರೇಲ್, ಇದೀಗ ಸಂಪೂರ್ಣ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ಪಡೆಯಲು ಮುಂದಾಗಿದೆ.

ಇಂದು ಗಾಜಾ ಪಟ್ಟಿಯ ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ ನಡೆದ ದಾಳಿಯಲ್ಲಿ ಒಂದೇ ಕುಟುಂಬದ ಐದು ಮಕ್ಕಳು, ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ ಎಂದು ಶವಗಳನ್ನು ಸ್ವೀಕರಿಸಿದ ನಾಸರ್ ಆಸ್ಪತ್ರೆ ತಿಳಿಸಿದೆ.

ಇಂಡೋನೇಷ್ಯಾ ಆಸ್ಪತ್ರೆಯ ಪ್ರಕಾರ, ಉತ್ತರ ಗಾಜಾದಲ್ಲಿ ನಡೆದ ದಾಳಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ.

ನಾಗರಿಕರಿಗೆ ಹಾನಿಯಾಗುವುದನ್ನು ತಪ್ಪಿಸಲು ಇಸ್ರೇಲಿ ಮಿಲಿಟರಿ ಯತ್ನಿಸುತ್ತಿದೆ ಮತ್ತು ಅವರ ಸಾವಿಗೆ ಹಮಾಸ್ ಹೊಣೆ. ಏಕೆಂದರೆ ಅದು ವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

OCHA ಎಂದು ಕರೆಯಲ್ಪಡುವ ವಿಶ್ವಸಂಸ್ಥೆಯ ಮಾನವೀಯ ಕಚೇರಿಯು, ಗಾಜಾದ 2 ಮಿಲಿಯನ್‌ಗಿಂತಲೂ ಹೆಚ್ಚು ಜನರು ಈಗ ಆಹಾರಕ್ಕಾಗಿ ಚಾರಿಟಿ ಅಡುಗೆಮನೆಗಳಲ್ಲಿ ಪ್ರತಿದಿನ ಉತ್ಪಾದಿಸುವ ಕೇವಲ 1 ಮಿಲಿಯನ್ ಸಿದ್ಧಪಡಿಸಿದ ಊಟವನ್ನು ಅವಲಂಬಿಸಿದ್ದಾರೆ ಎಂದು ಹೇಳಿದೆ.

"2023 ರ ಅಕ್ಟೋಬರ್‌ನಲ್ಲಿ ಯುದ್ಧ ಉಲ್ಬಣಗೊಂಡ ನಂತರ ಗಾಜಾ ಪಟ್ಟಿಯು ಈಗ 18 ತಿಂಗಳುಗಳಲ್ಲಿ ಅತ್ಯಂತ ಕೆಟ್ಟ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ" ಎಂದು OCHA ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT