ಅಮೆರಿಕದಲ್ಲಿ ಟ್ರಂಪ್ ನೀತಿ ವಿರೋಧಿಸಿ ಭಾರಿ ಪ್ರತಿಭಟನೆ 
ವಿದೇಶ

'ಪದಚ್ಯುತಿಗೊಳಿಸಿ ಇಲ್ಲ ತೆಗೆದುಹಾಕಿ': ಅಮೆರಿಕದಲ್ಲಿ ಟ್ರಂಪ್ ನೀತಿ ವಿರೋಧಿಸಿ ಭಾರಿ ಪ್ರತಿಭಟನೆ

ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಶನಿವಾರ ಅಮೆರಿಕದಾದ್ಯಂತ ದೊಡ್ಡ ಮತ್ತು ಸಣ್ಣ ಸಮುದಾಯಗಳ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಶ್ವೇತಭವನದ ಮುಂದೆ ರ್ಯಾಲಿ ನಡೆಸಲಾಯಿತು. 250 ವರ್ಷಗಳ ಹಿಂದೆ 1775ರ ಏಪ್ರಿಲ್ 19 ರಂದು ಕ್ರಾಂತಿಕಾರಿ ಸಮರ ಆರಂಭಗೊಂಡ ಸ್ಮರಣಾರ್ಥ ಮೆರವಣಿಗೆಗಳನ್ನು ನಡೆಸಲಾಯಿತು.

ಅಮೆರಿಕದ್ಯಂತ ಸುಮಾರು 400 ಪ್ರತಿಭಟನಾ ಮೆರವಣಿಗೆಗಳನ್ನು ಯೋಜಿಸಲಾಗಿತ್ತು. ಪ್ರತಿಭಟನಾಕಾರರು ಫೆಡರಲ್ ಉದ್ಯೋಗ ಕಡಿತ, ಆರ್ಥಿಕ ನೀತಿಗಳು ಮತ್ತು ನಾಗರಿಕ ಸ್ವಾತಂತ್ರ್ಯ ಉಲ್ಲಂಘನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಡೆನ್ಸರ್‌ನಲ್ಲಿ ನೂರಾರು ಪ್ರತಿಭಟನಾಕಾರರು ಕೊಲರಾಡೋ ಯಾ ರಾಜಧಾನಿಯಲ್ಲಿ ನೆರೆದು ವಲಸಿಗರೊಂದಿಗೆ ಸೌಹಾರ್ದ ಸಾರುವ ಮತ್ತು ಹ್ಯಾಂಡ್ಸ್ ಆಫ್ ಎಂಬ ಭಿತ್ತಿಪತ್ರಗಳನ್ನು ಹಿಡಿದಿದ್ದರು. ಶೋಕ ಸೂಚಕವಾಗಿ ಅನೇಕರು ಅಮೆರಿಕದ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಿಡಿದಿದ್ದರು.

ಪೋರ್ಟ್‌ಲ್ಯಾಂಡ್, ಓರೆಗಾನ್‌ಗಳ ಮುಖಾಂತರ ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿದರೆ, ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ನೂರಾರು ಜನರು ಟ್ರಂಪ್‌ ಅವರನ್ನು ಪದಚ್ಯುತಿಗೊಳಿಸಿ, ಇಲ್ಲವೆ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಎಂದು ಸಮುದ್ರದಂಡೆಯ ಮರಳಿನ ಮೇಲೆ ಬರೆದು ಆಕ್ರೋಶ ವ್ಯಕ್ತಪಡಿಸಿದರು.

ಟ್ರಂಪ್ ಸರ್ಕಾರದ ಸರ್ವಾಧಿಕಾರಿ ಮನೋಭಾವದಿಂದ ದೇಶದ ಪ್ರಜಾಪ್ರಭುತ್ವವನ್ನು ಉಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದು ಶಾಂತಿಯುತ ಪ್ರತಿಭಟನೆಯಾಗಿದ್ದು, ಯಾರಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಗುಂಪಿನ ವಕ್ತಾರೆ ಹೀದರ್ ಡನ್ ಹೇಳಿದ್ದಾರೆ. ದೇಶವನ್ನು ಒಗ್ಗೂಡಿಸುವುದು ಮತ್ತು ಸಂವಿಧಾನವನ್ನು ರಕ್ಷಿಸುವುದು ಈ ಪ್ರತಿಭಟನೆಯ ಉದ್ದೇಶ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT