ಡೆಲ್ಟಾ ವಿಮಾನಕ್ಕೆ ಬೆಂಕಿ 
ವಿದೇಶ

ಸ್ವಲ್ಪದರಲ್ಲೇ ತಪ್ಪಿದ ಮಹಾ ದುರಂತ: 282 ಪ್ರಯಾಣಿಕರಿದ್ದ Delta ವಿಮಾನದ ಎರಡೂ ಎಂಜಿನ್ ಗೆ ಬೆಂಕಿ!

ಸೋಮವಾರ (ಸ್ಥಳೀಯ ಸಮಯ) ಒರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆಗುವಾಗ ವಿಮಾನದ ಎರಡೂ ಎಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ.

ಫ್ಲೋರಿಡಾ: ಅಮೆರಿಕದಲ್ಲಿ ಸಂಭಾವ್ಯ ಭೀಕರ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, 282 ಪ್ರಯಾಣಿಕರಿದ್ದ Delta ವಿಮಾನದ ಎರಡೂ ಎಂಜಿನ್ ಗೆ ಬೆಂಕಿ ಹೊತ್ತಿದ ಘಟನೆ ವರದಿಯಾಗಿದೆ.

ಸೋಮವಾರ (ಸ್ಥಳೀಯ ಸಮಯ) ಒರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆಗುವಾಗ ವಿಮಾನದ ಎರಡೂ ಎಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನು ಗಮನಿಸಿದ ಪೈಲಟ್ ಕೂಡಲೇ ವಿಮಾನವನ್ನು ನಿಲ್ಲಿಸಿದ್ದು, ನಂತರ ಪ್ರಯಾಣಿಕರನ್ನು ತುರ್ತು ಸ್ಲೈಡ್‌ಗಳ ಮೂಲಕ ಸ್ಥಳಾಂತರಿಸಲಾಗಿದೆ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಮತ್ತು ಡೆಲ್ಟಾ ಏರ್ ಲೈನ್ಸ್ ಅನ್ನು ಉಲ್ಲೇಖಿಸಿ ಸಿಎನ್‌ಎನ್ ಈ ವರದಿ ಮಾಡಿದೆ.

ಅಟ್ಲಾಂಟಾಗೆ ತೆರಳುತ್ತಿದ್ದ ವಿಮಾನವು ರನ್‌ವೇಗೆ ಹೊರಟಾಗ ಎರಡು ಎಂಜಿನ್‌ಗಳಲ್ಲಿ ಒಂದು ಬೆಂಕಿಗೆ ಆಹುತಿಯಾಯಿತು. ಟರ್ಮಿನಲ್‌ನಲ್ಲಿ ಪ್ರಯಾಣಿಕರೊಬ್ಬರ ತಮ್ಮ ಸೆಲ್‌ಫೋನ್ ನಲ್ಲಿ ಈ ವಿಡಿಯೋ ಸೆರೆ ಹಿಡಿದಿದ್ದು, ವಿಮಾನದ ಬಲ ಎಂಜಿನ್‌ನಿಂದ ಜ್ವಾಲೆ ಹೊರಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನು ಘಟನೆಯ ಬಗ್ಗೆ ಎಫ್‌ಎಎ ತನಿಖೆಯನ್ನು ಪ್ರಾರಂಭಿಸಿದೆ.

ವಿಮಾನದಲ್ಲಿ 282 ಪ್ರಯಾಣಿಕರಿದ್ದರು, ಅದೃಷ್ಟವಶಾತ್, ಯಾವುದೇ ಗಾಯಗಳು ವರದಿಯಾಗಿಲ್ಲ. ವಿಮಾನದ ಎರಡು ಎಂಜಿನ್‌ಗಳಲ್ಲಿ ಒಂದರ ಟೈಲ್‌ಪೈಪ್‌ನಲ್ಲಿ ಜ್ವಾಲೆಗಳು ಕಂಡುಬಂದಾಗ ಡೆಲ್ಟಾ ವಿಮಾನ ಸಿಬ್ಬಂದಿ ಪ್ರಯಾಣಿಕರ ಕ್ಯಾಬಿನ್ ಅನ್ನು ಸ್ಥಳಾಂತರಿಸಲು ಕಾರ್ಯವಿಧಾನಗಳನ್ನು ಅನುಸರಿಸಿದರು" ಎಂದು ಸಿಎನ್‌ಎನ್ ವರದಿ ಮಾಡಿದೆ.

ಡೆಲ್ಟಾ ಸ್ಪಷ್ಟನೆ

ಇನ್ನು ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಡೆಲ್ಟಾ ವಿಮಾನಯಾನ ಸಂಸ್ಥೆ, "ನಮ್ಮ ಗ್ರಾಹಕರ ಸಹಕಾರವನ್ನು ನಾವು ಪ್ರಶಂಸಿಸುತ್ತೇವೆ ಮತ್ತು ಈ ಕಹಿ ಘಟನೆಗಾಗಿ ಕ್ಷಮೆಯಾಚಿಸುತ್ತೇವೆ. ಸುರಕ್ಷತೆಗಿಂತ ಹೆಚ್ಚು ಮುಖ್ಯವಾದುದು ಯಾವುದೂ ಇಲ್ಲ, ಮತ್ತು ಡೆಲ್ಟಾ ತಂಡಗಳು ನಮ್ಮ ಗ್ರಾಹಕರನ್ನು ಸಾಧ್ಯವಾದಷ್ಟು ಬೇಗ ತಮ್ಮ ಅಂತಿಮ ಸ್ಥಳಗಳಿಗೆ ತಲುಪಿಸಲು ಕೆಲಸ ಮಾಡುತ್ತವೆ" ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT