ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ಮೋದಿ 
ವಿದೇಶ

'ಭಾರತ ಒಳ್ಳೆಯ ವ್ಯಾಪಾರ ಪಾಲುದಾರನಲ್ಲ': ಮುಂದಿನ 24 ಗಂಟೆಗಳಲ್ಲಿ ಹೆಚ್ಚುವರಿ ಸುಂಕ; ಟ್ರಂಪ್ ಬೆದರಿಕೆ!

ಭಾರತದವರು ರಷ್ಯಾದಿಂದ ತೈಲವನ್ನು ಖರೀದಿಸುತ್ತಿದ್ದಾರೆ. ಆ ಮೂಲಕ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ನ್ಯೂಯಾರ್ಕ್: ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಮುಂದಾಗದ ಭಾರತದ ವಿರುದ್ಧ ಮತ್ತೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ 24 ಗಂಟೆಗಳ ಒಳಗೆ ಭಾರತಕ್ಕೆ ಮತ್ತಷ್ಟು ಸುಂಕ ವಿಧಿಸುವುದಾಗಿ ಹೇಳಿದ್ದಾರೆ.

CNBC ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಭಾರತ ಒಳ್ಳೆಯ ವ್ಯಾಪಾರ ಪಾಲುದಾರರಾಗಿಲ್ಲ. ಏಕೆಂದರೆ ಅವರು ನಮ್ಮೊಂದಿಗೆ ಸಾಕಷ್ಟು ವ್ಯಾಪಾರ ಮಾಡ್ತಾರೆ. ಆದರೆ ನಾವು ಅವರೊಂದಿಗೆ ವ್ಯಾಪಾರ ಮಾಡುವುದಿಲ್ಲ. ಆದ್ದರಿಂದ ನಾವು ಶೇ. 25 ರಷ್ಟು ಸುಂಕ ವಿಧಿಸಿದ್ದೇವೆ ಎಂದಿದ್ದಾರೆ.

ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಸುಂಕವನ್ನು ಗಣನೀಯವಾಗಿ ಹೆಚ್ಚಿಸಲಾಗುವುದು. ಏಕೆಂದರೆ ಭಾರತದವರು ರಷ್ಯಾದಿಂದ ತೈಲವನ್ನು ಖರೀದಿಸುತ್ತಿದ್ದಾರೆ. ಆ ಮೂಲಕ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಕಳೆದ ವಾರ ಭಾರತ ಮತ್ತು ರಷ್ಯಾದ ಆರ್ಥಿಕತೆಗಳನ್ನು ಸತ್ತ ಆರ್ಥಿಕತೆಗಳು ಎಂದು ಕರೆದಿದ್ದ ಟ್ರಂಪ್, ತದನಂತರ ಭಾರತದ ವಿರುದ್ಧ ಮತ್ತಷ್ಟು ಟೀಕೆಗಳನ್ನು ಮಾಡುತ್ತಲೇ ಇದ್ದಾರೆ. ಭಾರತೀಯ ಸರಕುಗಳ ಮೇಲೆ ಶೇ. 25 ರಷ್ಟು ಸುಂಕವನ್ನು ವಿಧಿಸಿದ ನಂತರ ಇದೀಗ ಹೆಚ್ಚುವರಿ ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಭಾರತ ಬೃಹತ್ ಪ್ರಮಾಣದ ರಷ್ಯಾದ ತೈಲವನ್ನು ಖರೀದಿಸುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ನಿನ್ನೆಯಷ್ಟೇ ಭಾರತವು ರಷ್ಯಾದ ತೈಲವನ್ನು "ದೊಡ್ಡ ಲಾಭಕ್ಕಾಗಿ ಮುಕ್ತ ಮಾರುಕಟ್ಟೆಯಲ್ಲಿ" ಮಾರಾಟ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದರು. ರಷ್ಯಾದ ಯುದ್ಧದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದಕ್ಕೆ ಭಾರತದವರು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಕಾರಣದಿಂದಾಗಿ ಭಾರತ ಅಮೆರಿಕಕ್ಕೆ ಪಾವತಿಸುವ ಸುಂಕವನ್ನು "ಗಣನೀಯವಾಗಿ" ಹೆಚ್ಚಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!